7:11 AM Sunday11 - May 2025
ಬ್ರೇಕಿಂಗ್ ನ್ಯೂಸ್
Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ…

ಇತ್ತೀಚಿನ ಸುದ್ದಿ

ಮಂಗಳೂರು: ಡಾ. ಪ್ರಭಾಕರ್ ನೀರ್‌ಮಾರ್ಗ ಅವರ ‘ಕಣ್ಮಣಿ’ ಕಾದಂಬರಿ ಬಿಡುಗಡೆ

08/04/2022, 21:39

ಚಿತ್ರ:ಅನುಷ್ ಪಂಡಿತ್
ಮಂಗಳೂರು(reporterkarnataka.com): ಹಿರಿಯ ಲೇಖಕ ಡಾ. ಪ್ರಭಾಕರ್ ನೀರ್‌ಮಾರ್ಗ ಅವರ 27ನೇ ಕೃತಿ ಕಣ್ಮಣಿ ಕಾದಂಬರಿ ಬಿಡುಗಡೆ ಕಾರ್ಯಕ್ರಮ ತುಳು ಪರಿಷತ್ ಆಶ್ರಯದಲ್ಲಿ ನಗರದ ಮ್ಯಾಪ್ಸ್ ಕಾಲೇಜಿನಲ್ಲಿ ನಡೆಯಿತು.


ಕಣ್ಮಣಿ ಕಾದಂಬರಿಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಮಂಗಳೂರು ರಾಮಕೃಷ್ಣ ಕಾಲೇಜು ಪ್ರಾಂಶುಪಾಲ ಪ್ರೊ.ಬಾಲಕೃಷ್ಣ ಶೆಟ್ಟಿ ಅವರು, ಪ್ರಭಾಕರ್ ನೀರ್ ಮಾರ್ಗ ಅವರೊಬ್ಬ ಸಾಹಿತ್ಯ ಕ್ಷೇತ್ರದ ಅನನ್ಯ ಪ್ರತಿಭಾವಂತ, ಅವರು ತನ್ನ ನಿರಂತರ ಬರಹದ ಮೂಲಕ ತುಳುನಾಡಿನ ಬದುಕು ಸಂಸ್ಕೃತಿಯನ್ನು ದಾಖಲೀಕರಣ ಮಾಡುವಂತಹ ಮಹಾತ್ಕಾರ್ಯವನ್ನು ನಡೆಸಿಕೊಂಡು ಬರುತ್ತಿದ್ದಾರೆ, ಕಣ್ಮಣಿ ಕಾದಂಬರಿಯು ಹಳ್ಳಿಯ ರಾಜಕೀಯ, ಸಾಮಾಜಿಕ ಬದುಕನ್ನು ಪ್ರತಿಬಿಂಬಿಸಿದೆ ಎಂದು ಹೇಳಿದರು. 

ಕೃತಿಯ ಪರಿಚಯ ಮಾಡಿದ ಮಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ಸಂಶೋಧನಾ ಸಹಾಯಕ ಚೇತನ್ ಮುಂಡಾಜೆ ಅವರು ಮಾತನಾಡಿ, ಪ್ರಭಾಕರ್ ನೀರ್ ಮಾರ್ಗ ಅವರ ಎಲ್ಲಾ ಕೃತಿಗಳು ಸಾಮಾಜಿಕ ಬದುಕಿನ ಪಲ್ಲಟಗಳನ್ನು ಹಾಗೂ ಸಂಸ್ಕೃತಿಯನ್ನು ಅನಾವರಣ ಮಾಡುತ್ತದೆ. ಅವರ ಕೃತಿಗಳ ಮೂಲಕ ತುಳುನಾಡಿನ ಪರಂಪರೆ, ಇತಿಹಾಸ, ಸಾಮಾಜಿಕ ಕಥನವನ್ನು ನೋಡಬಹುದಾಗಿದೆ ಎಂದು ಹೇಳಿದರು. 

ಸಮಾರಂಭಧ ಅಧ್ಯಕ್ಷತೆ ವಹಿಸಿದ್ದ ತುಳು ಪರಿಷತ್ ಗೌರವ ಅಧ್ಯಕ್ಷ ಸ್ವರ್ಣ ಸುಂದರ್ ಅವರು ಮಾತನಾಡಿ, ನಿರಂತರವಾಗಿ ಅವಿರತವಾಗಿ ಬರೆಯುತ್ತಿರುವ ಪ್ರಭಾಕರ ನೀರ್‌ಮಾರ್ಗ ಅವರ ಬರೆಯುವ ಕಾಯಕ ಸಾಹಿತ್ಯಿಕ ಕ್ಷೇತ್ರದ ಅಪೂರ್ವ ಸಾಧನೆ ಎಂದು ಬಣ್ಣಿಸಿದರು.

ಮುಖ್ಯ ಅತಿಥಿಯಾಗಿ ಭಾಗಹಿಸಿದ ಮ್ಯಾಪ್ಸ್ ಕಾಲೇಜಿನ ಅಧ್ಯಕ್ಷ ದಿನೇಶ್ ಕುಮಾರ್ ಆಳ್ವಾ ಅವರು ಮಾತನಾಡಿ,  ಆಡಳಿತಗಾರನಾಗಿ, ಶಿಕ್ಷಕನಾಗಿ ಹಾಗೂ ಸಾಹಿತಿಯಾಗಿ ಪ್ರಭಾಕರ್ ಅವರದ್ದು ಸಮನ್ವಯದ ಶಿಶ್ತಿನ ಬದುಕು ಎಂದು ಬಣ್ಣಿಸಿದರು.  

ಇನ್ನೋರ್ವ ಮುಖ್ಯ ಅತಿಥಿ ಕರಾವಳಿ ಲೇಖಕಿಯರ ಮತ್ತು ವಾಚಕಿಯರ ಸಂಘದ ಉಪಾಧ್ಯಕ್ಷೆ  ವಿಜಯಲಕ್ಷ್ಮಿ ಶೆಟ್ಟಿ ಅವರು ಮಾತನಾಡಿ , ಪ್ರಭಾಕರ್ ಅವರ ಸಾಹಿತ್ಯ ಕ್ಷೇತ್ರದ ಸಾಧನೆ , ಅವರ ಬರವಣಿಗೆಯ ಬದ್ಧತೆ ಅನನ್ಯವಾದದು ಎಂದು ಹೇಳಿದರು. 

ಸಮಾರಂಭದಲ್ಲಿ ಲೇಖಕ ಪ್ರಭಾಕರ್ ನೀರ್‌ಮಾರ್ಗ ಅವರನ್ನು ತುಳು ಪರಿಷತ್ ಗೌರವ ಅಧ್ಯಕ್ಷ ಸ್ವರ್ಣ ಸುಂದರ್ ಅವರು ಸನ್ಮಾನಿಸಿದರು. ತುಳು ಪರಿಷತ್ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಬೆನೆಟ್ ಅಮ್ಮನ್ನ ಕಾರ್ಯಕ್ರಮ ನಿರ್ವಹಿಸಿದರು, ಕೋಶಾಧಿಕಾರಿ ಶುಭೋದಯ ಆಳ್ವಾ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು