4:33 PM Thursday12 - February 2026
ಬ್ರೇಕಿಂಗ್ ನ್ಯೂಸ್
ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು…

ಇತ್ತೀಚಿನ ಸುದ್ದಿ

ಮಂಗಳೂರು: ಡಾ. ಪ್ರಭಾಕರ್ ನೀರ್‌ಮಾರ್ಗ ಅವರ ‘ಕಣ್ಮಣಿ’ ಕಾದಂಬರಿ ಬಿಡುಗಡೆ

08/04/2022, 21:39

ಚಿತ್ರ:ಅನುಷ್ ಪಂಡಿತ್
ಮಂಗಳೂರು(reporterkarnataka.com): ಹಿರಿಯ ಲೇಖಕ ಡಾ. ಪ್ರಭಾಕರ್ ನೀರ್‌ಮಾರ್ಗ ಅವರ 27ನೇ ಕೃತಿ ಕಣ್ಮಣಿ ಕಾದಂಬರಿ ಬಿಡುಗಡೆ ಕಾರ್ಯಕ್ರಮ ತುಳು ಪರಿಷತ್ ಆಶ್ರಯದಲ್ಲಿ ನಗರದ ಮ್ಯಾಪ್ಸ್ ಕಾಲೇಜಿನಲ್ಲಿ ನಡೆಯಿತು.


ಕಣ್ಮಣಿ ಕಾದಂಬರಿಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಮಂಗಳೂರು ರಾಮಕೃಷ್ಣ ಕಾಲೇಜು ಪ್ರಾಂಶುಪಾಲ ಪ್ರೊ.ಬಾಲಕೃಷ್ಣ ಶೆಟ್ಟಿ ಅವರು, ಪ್ರಭಾಕರ್ ನೀರ್ ಮಾರ್ಗ ಅವರೊಬ್ಬ ಸಾಹಿತ್ಯ ಕ್ಷೇತ್ರದ ಅನನ್ಯ ಪ್ರತಿಭಾವಂತ, ಅವರು ತನ್ನ ನಿರಂತರ ಬರಹದ ಮೂಲಕ ತುಳುನಾಡಿನ ಬದುಕು ಸಂಸ್ಕೃತಿಯನ್ನು ದಾಖಲೀಕರಣ ಮಾಡುವಂತಹ ಮಹಾತ್ಕಾರ್ಯವನ್ನು ನಡೆಸಿಕೊಂಡು ಬರುತ್ತಿದ್ದಾರೆ, ಕಣ್ಮಣಿ ಕಾದಂಬರಿಯು ಹಳ್ಳಿಯ ರಾಜಕೀಯ, ಸಾಮಾಜಿಕ ಬದುಕನ್ನು ಪ್ರತಿಬಿಂಬಿಸಿದೆ ಎಂದು ಹೇಳಿದರು. 

ಕೃತಿಯ ಪರಿಚಯ ಮಾಡಿದ ಮಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ಸಂಶೋಧನಾ ಸಹಾಯಕ ಚೇತನ್ ಮುಂಡಾಜೆ ಅವರು ಮಾತನಾಡಿ, ಪ್ರಭಾಕರ್ ನೀರ್ ಮಾರ್ಗ ಅವರ ಎಲ್ಲಾ ಕೃತಿಗಳು ಸಾಮಾಜಿಕ ಬದುಕಿನ ಪಲ್ಲಟಗಳನ್ನು ಹಾಗೂ ಸಂಸ್ಕೃತಿಯನ್ನು ಅನಾವರಣ ಮಾಡುತ್ತದೆ. ಅವರ ಕೃತಿಗಳ ಮೂಲಕ ತುಳುನಾಡಿನ ಪರಂಪರೆ, ಇತಿಹಾಸ, ಸಾಮಾಜಿಕ ಕಥನವನ್ನು ನೋಡಬಹುದಾಗಿದೆ ಎಂದು ಹೇಳಿದರು. 

ಸಮಾರಂಭಧ ಅಧ್ಯಕ್ಷತೆ ವಹಿಸಿದ್ದ ತುಳು ಪರಿಷತ್ ಗೌರವ ಅಧ್ಯಕ್ಷ ಸ್ವರ್ಣ ಸುಂದರ್ ಅವರು ಮಾತನಾಡಿ, ನಿರಂತರವಾಗಿ ಅವಿರತವಾಗಿ ಬರೆಯುತ್ತಿರುವ ಪ್ರಭಾಕರ ನೀರ್‌ಮಾರ್ಗ ಅವರ ಬರೆಯುವ ಕಾಯಕ ಸಾಹಿತ್ಯಿಕ ಕ್ಷೇತ್ರದ ಅಪೂರ್ವ ಸಾಧನೆ ಎಂದು ಬಣ್ಣಿಸಿದರು.

ಮುಖ್ಯ ಅತಿಥಿಯಾಗಿ ಭಾಗಹಿಸಿದ ಮ್ಯಾಪ್ಸ್ ಕಾಲೇಜಿನ ಅಧ್ಯಕ್ಷ ದಿನೇಶ್ ಕುಮಾರ್ ಆಳ್ವಾ ಅವರು ಮಾತನಾಡಿ,  ಆಡಳಿತಗಾರನಾಗಿ, ಶಿಕ್ಷಕನಾಗಿ ಹಾಗೂ ಸಾಹಿತಿಯಾಗಿ ಪ್ರಭಾಕರ್ ಅವರದ್ದು ಸಮನ್ವಯದ ಶಿಶ್ತಿನ ಬದುಕು ಎಂದು ಬಣ್ಣಿಸಿದರು.  

ಇನ್ನೋರ್ವ ಮುಖ್ಯ ಅತಿಥಿ ಕರಾವಳಿ ಲೇಖಕಿಯರ ಮತ್ತು ವಾಚಕಿಯರ ಸಂಘದ ಉಪಾಧ್ಯಕ್ಷೆ  ವಿಜಯಲಕ್ಷ್ಮಿ ಶೆಟ್ಟಿ ಅವರು ಮಾತನಾಡಿ , ಪ್ರಭಾಕರ್ ಅವರ ಸಾಹಿತ್ಯ ಕ್ಷೇತ್ರದ ಸಾಧನೆ , ಅವರ ಬರವಣಿಗೆಯ ಬದ್ಧತೆ ಅನನ್ಯವಾದದು ಎಂದು ಹೇಳಿದರು. 

ಸಮಾರಂಭದಲ್ಲಿ ಲೇಖಕ ಪ್ರಭಾಕರ್ ನೀರ್‌ಮಾರ್ಗ ಅವರನ್ನು ತುಳು ಪರಿಷತ್ ಗೌರವ ಅಧ್ಯಕ್ಷ ಸ್ವರ್ಣ ಸುಂದರ್ ಅವರು ಸನ್ಮಾನಿಸಿದರು. ತುಳು ಪರಿಷತ್ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಬೆನೆಟ್ ಅಮ್ಮನ್ನ ಕಾರ್ಯಕ್ರಮ ನಿರ್ವಹಿಸಿದರು, ಕೋಶಾಧಿಕಾರಿ ಶುಭೋದಯ ಆಳ್ವಾ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು