7:20 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಮಡಿಕೇರಿ: ಗೃಹ ಸಚಿವ ಹಾಗೂ ಸಿ.ಟಿ. ರವಿ ವಿರುದ್ಧ ಪ್ರತಿಭಟನೆ: ದೂರು ದಾಖಲು

08/04/2022, 23:31

ಮಡಿಕೇರಿ(reporterkarnataka.com): ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ  ಅವರ ಕೋಮು ಪ್ರಚೋದನೆ ಹೇಳಿಕೆಯನ್ನು ಖಂಡಿಸಿ ಅವರನ್ನು ಬಂಧಿಸಬೇಕೆಂದು ಬೇಡಿಕೆಯೊಂದಿಗೆ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಅವರ ನೇತೃತ್ವದಲ್ಲಿ ಇಂದು ಮಡಿಕೇರಿ ನಗರ ಠಾಣೆ ಎದುರು ಕೊಡಗು ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ. ನಡೆಸಲಾಯಿತು.

 ಗೃಹ ಸಚಿವ, ಸಿಟಿ ರವಿ  ಹಾಗೂ ಬಿಜೆಪಿ ಸರಕಾರದ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಕಾರರು ಕೂಡಲೇ ಅವರನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಬಳಿಕ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಮಡಿಕೇರಿ ನಗರ ಆರಕ್ಷಕ ಠಾಣೆಗೆ ತೆರಳಿದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಕೋಮು ಪ್ರಚೋದನೆ ಹೇಳಿಕೆ ನೀಡಿದ ಇವರ ವಿರುದ್ಧ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿದರು. ಕೆಪಿಸಿಸಿ ಮಾಧ್ಯಮ ಸಂವಹನ ವಕ್ತಾರ ಟಿ.ಪಿ. ರಮೇಶ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾದ ಕೆ.ಪಿ. ಚಂದ್ರಕಲಾ, ಡಿಸಿಸಿ ಉಪಾಧ್ಯಕ್ಷ ಸುಜು ತಿಮ್ಮಯ್ಯ, ಡಿಸಿಸಿ ಪ್ರಧಾನ ಕಾರ್ಯದರ್ಶಿ ಮುನೀರ್ ಅಹಮದ್, ಡಿಸಿಸಿ ಗೌರವ ಕಾರ್ಯದರ್ಶಿ ವಿ.ಪಿ. ಸುರೇಶ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಂಸ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ  ಸುರಯ್ಯ ಅಬ್ರಾರ್, NSUI ಜಿಲ್ಲಾಧ್ಯಕ್ಷ ರೋಷನ್, ಸಾಮಾಜಿಕ ಜಾಲತಾಣ ಜಿಲ್ಲಾಧ್ಯಕ್ಷ ಸೂರಜ್ ಹೊಸೂರು, ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಉಸ್ಮಾನ್, ಮಾಜಿ ಸೈನಿಕರ ಘಟಕದ ಜಿಲ್ಲಾಧ್ಯಕ್ಷ ಗಣೇಶ್, RGPRS ಜಿಲ್ಲಾ ಸಂಚಾಲಕ ತೆನ್ನೀರ ಮೈನ, ಕಾನೂನು ಘಟಕದ ಜಿಲ್ಲಾಧ್ಯಕ್ಷರಾದ ಶ್ರೀಧರನ್ ನಾಯರ್, ಫ್ಯಾನ್ಸಿ ಪಾರ್ವತಿ, ಯಾಕೋಬ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಬಾಲಕೃಷ್ಣ, ಸಂಪಾಜೆ, ವಲಯ ಕಾಂಗ್ರೆಸ್ ಅಧ್ಯಕ್ಷ ಪಿ.ಎಲ್. ಸುರೇಶ್, ನಗರಸಭೆ ಮಾಜಿ ಸದಸ್ಯ ಪ್ರಕಾಶ್ ಆಚಾರ್ಯ, ಡಿಸಿಸಿ ಸದಸ್ಯರ ಲಿಯಾಕತ್ ಆಲಿ, ನಗರಸಭೆ ಮಾಜಿ ಸದಸ್ಯರಾದ ಉದಯಕುಮಾರ್ ಹಾಗೂ ವೆಂಕಟೇಶ್, ಸಾಮಾಜಿಕ ಜಾಲತಾಣದ ಬೋಪಣ್ಣ ಹಾಗೂ ಎನ್.ಜಿ ಅಯ್ಯಪ್ಪ, ಡಿಸಿಸಿ ಸದಸ್ಯರಾದ ಕೇಟೊಳಿ ಮೋಹನ್ರಾಜ್, ಬೆಟಗೇರಿ ವಲಯ ಕಾಂಗ್ರೆಸ್ ಅಧ್ಯಕ್ಷರಾದ ನಾಪಂಡ ಗಣೇಶ್, ಪುಲಿಯಂಡ ಜಗದೀಶ್, ವಾಸು ಕೊಯಿನಾಡು, ಮುನೀರ್ ಮಾಚರ್, ಡಿಸಿಸಿ ಸದಸ್ಯರಾದ ಅಬ್ದುಲ್ ರಜಾಕ್, ಪುಷ್ಪ ಪೂಣಚ್ಚ, ಕೆಎ ಆನಂದ್, ಸೈಮನ್ ಮೊದಲಾದವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು