2:29 PM Friday22 - May 2026
ಬ್ರೇಕಿಂಗ್ ನ್ಯೂಸ್
ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:…

ಇತ್ತೀಚಿನ ಸುದ್ದಿ

ಏಪ್ರಿಲ್ 10 ವಿಶ್ವ ಹೋಮಿಯೋಪತಿ ದಿನ: ಪ್ರಪಂಚದಲ್ಲೇ 2ನೇ ಅತೀ ಹೆಚ್ಚು ಜನರು ಬಳಸುವ ಚಿಕಿತ್ಸಾ ಪದ್ಧತಿ

09/04/2022, 11:05

ಪ್ರತೀ ವರ್ಷ ಏಪ್ರಿಲ್ 10ರಂದು ವಿಶ್ವ ಹೋಮಿಯೋಪತಿ ದಿನವನ್ನು ಆಚರಿಸಲಾಗುತ್ತದೆ. ಹೋಮಿಯೋಪತಿ ಒಂದು ವಿಧದ ಚಿಕಿತ್ಸಾ ಪದ್ಧತಿಯಾಗಿದೆ. 

ಅಲೋಪತಿಯ ನಂತರ ವಿಶ್ವದಾದ್ಯಂತ ಎರಡನೇ ಅತೀ ಹೆಚ್ಚು ಜನರು ಬಳಸುವ ಚಿಕಿತ್ಸಾ ಪದ್ಧತಿ ಇದಾಗಿದೆ. ಜರ್ಮನಿನ ಡಾ. ಕ್ರಿಶ್ಚಿಯನ್ ಫೆಡ್ರಿಕ್ ಸಾಮ್ಯೂಯಲ್ ಹ್ಯಾನಿಮನ್ ಎನ್ನುವ ಅಂದಿನ ಕಾಲದ ಖ್ಯಾತ ವೈದ್ಯನಿಂದ ಕಂಡುಹಿಡಿಯಲ್ಪಟ್ಟ ಈ ವೈದ್ಯ ಪದ್ಧತಿ ಸಿಮಿಲಿಯಾ ಸಿಮಿಲಿಬಸ್ಕ್ಯೂರೆಂಟರ್ ಎಂಬ ತತ್ವದ ಮೇಲೆ ಆಧಾರಿತವಾಗಿದೆ. ಅಂದರೆ, ಮುಳ್ಳನ್ನು ಮುಳ್ಳಿಂದಲೇ ತೆಗೆಯಬೇಕು ಎಂಬ ಜನಪ್ರೀಯ ಮಾತಿನಂತೆ , ಒಬ್ಬ ರೋಗಿಯ ರೋಗ ಲಕ್ಷಣಗಳಿಗೆ ಚಿಕಿತ್ಸೆ ನೀಡಬೇಕಾದರೆ, ಅದೇ ಲಕ್ಷಣವನ್ನು  ಉಂಟುಮಾಡಬಲ್ಲ  ಔಷಧವನ್ನು ಅಲ್ಪ  ಪ್ರಮಾಣದಲ್ಲಿ ನೀಡಿದಾಗ  ರೋಗವನ್ನು ಶಮನ ಮಾಡಬಲ್ಲದು ಎಂದು ಅರ್ಥ.

ಈ ವಿಧಾನದ ಚಿಕಿತ್ಸೆಯ ವೈಶಿಷ್ಟ ಏನನಂದರೆ  ಒಬ್ಬ ರೋಗಿಯ ರೋಗಲಕ್ಷಣಗಳನ್ನು ಮಾತ್ರ ಪರಿಗಣಿಸದೇ, ಆತನ ದೈಹಿಕ ಹಾಗೂ ಮಾನಸಿಕ ವ್ಯಕ್ತಿತ್ವವನ್ನೂ  ಒಟ್ಟುಗೂಡಿಸಿ ಸೂಕ್ತವಾದ ಔಷಧಿಯನ್ನ ನೀಡಿ ಆ ಮೂಲಕ ಆತನ ರೋಗ ನಿರೋಧಕ ಶಕ್ತಿಯನ್ನೂ ಜಾಗೃತಗೊಳಿಸಿ ದೇಹವನ್ನು ಆ ರೋಗದ ವಿರುದ್ಧ ಹೋರಾಡುವಂತೆ  ಸಜ್ಜುಗೊಳಿಸುವ ಪ್ರಕ್ರೀಯೆಯಾಗಿದೆ.

ಹಾಗೆಯೇ  ಈ ಔಷಧಿಯ ಮೂಲ ತಿಳಿದುಕೊಳ್ಳುವುದಾದರೆ ಹೆಚ್ಚಿನ ಪ್ರಮಾಣದ ಮದ್ದನ್ನು ಸಸ್ಯಜನ್ಯದಿಂದ  ಇನ್ನೂ ಕೆಲವನ್ನು  ಪ್ರಾಣಿ ಜನ್ಯದಿಂದಲೂ, ಲವಣಗಳು ಲೋಹಗಳ  ಮೂಲದಿಂದಲೂ, ಸಾರ್ಕೋಡ್ ನೋಸೊಡ್ಗಳಿಂದಲೂ ತಯಾರಿಸಲಾಗುತ್ತದೆ.

ಈ ಔಷಧಗಳನ್ನು ಸಣ್ಣ ಗುಳಿಗೆ, ಮಾತ್ರೆ, ದ್ರವ ರೂಪದಲ್ಲಿ, ಚೂರ್ಣದ ರೂಪದಲ್ಲೂ ನೀಡಲಾಗುವುದು.ಇದನ್ನು ಸಣ್ಣ  ಶಿಶುವಿನಿಂದ ಹಿಡಿದು ವಯೋವೃದ್ದರು,

ಮಹಿಳೆಯರು  ಸಹ ಯಾವುದೇ ಹಿಂಜರಿಕೆ ಇಲ್ಲದೆ ತೆಗೆದುಕೊಳ್ಳಬಹುದು. ಈ ಚಿಕಿತ್ಸೆಯಿಂದ ಯಾವುದೇ ರೀತಿಯ ಗಂಭೀರ ಅಡ್ಡ  ಪರಿಣಾಮಗಳಿಲ್ಲ. ಸಾಮಾನ್ಯವಾಗಿ ಹೊಮಿಯೋಪತಿಯ ಬಗ್ಗೆ ಕೇಳಿ ಬರುವ ತಪ್ಪುಅಭಿಪ್ರಾಯ ಎಂದರೆ ಇದು ನಿಧಾನಗತಿಯ (ಸ್ಲೋ ಆಕ್ಟಿಂಗ್ ) ಚಿಕಿತ್ಸೆ ಎಂದು.ಆದರೆ ಸತ್ಯ ಸಂಗತಿ ಏನೆಂದರೆ ಅಕ್ಯೂಟ್ ಅಥವಾ ಅಲ್ಪಕಾಲೀನಾ ರೋಗಗಳಾದ ಶೀತ, ಜ್ವರ,ವಾಂತಿಯಂತಹ ತೊಂದರೆಗಳಿಗೆ ಕೆಲವೇ ಗಂಟೆಗಳಲ್ಲಿ ಶಮನ ಮಾಡುವ ಸಾಮರ್ಥ್ಯ ಈ ಔಷಧಗಳಿಗಿವೆ.ಅಂತೆಯೇ ದೀರ್ಘಕಾಲೀನಾ ರೋಗಗಳಾದ ಅಲರ್ಜಿ, ಅಸ್ತಮಾ, ಗಂಟುನೋವು, ಸಂಧಿವಾತ, ಥೈರಾಡ್, ಗ್ಯಾಸ್ಟ್ರಿಟಿಸ್, ಕಿಡ್ನಿ ಕಲ್ಲು, ಉರಿಮೂತ್ರ,ಸ್ತ್ರೀಯರಲ್ಲಿ ಕಂಡುಬರುವ ಮುಟ್ಟಿನ ಸಮಸ್ಯೆ,PCOD, ಗರ್ಭಶಯದ ಗಡ್ಡೆ ಮುಂತಾದ ರೋಗಗಳಿಗೆ ಪರಿಣಾಮಕಾರಿಯಾಗಿದೆ. ಇಡೀ ಸಮಾಜದ ಸ್ವಾಸ್ತ್ಯ ವನ್ನು ಕೆಡಿಸಿದ ಕೊರೊನದಂತಹ ಖಾಯಿಲೆಗಳ ಈ ಸಂದರ್ಭದಲ್ಲಿ ಇ ನಾವೆಲ್ಲಾ ಒಳ್ಳೆಯ ಆರೋಗ್ಯಭ್ಯಾಸ ಹಾಗು ಹವ್ಯಾಸಗಳನ್ನು ರೂಢಿಸಿಕೊಂಡು ರೋಗನಿರೋಧಕ ಶಕ್ತಿಯನ್ನು ಕುಗ್ಗಲು ಬಿಡದೆ ದೈಹಿಕ ಹಾಗು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಂಡು ಸ್ವಸ್ತ ಸಮಾಜ ನಿರ್ಮಾಣ ಮಾಡುವುದು ನಮ್ಮೆಲ್ಲರ ಜವಾಬ್ದಾರಿ.

ಡಾ.ಭವ್ಯ ಶೆಟ್ಟಿ  BHMS, PGDND

ಹೋಮಿಯೋಪತಿ ವೈದ್ಯರು

ಶ್ರೀ ಗುರು ಹೋಮಿಯೋಪತಿ ಕ್ಲೀನಿಕ್ ಬೆಳುವಾಯಿ 

📞8904316163  

ಇತ್ತೀಚಿನ ಸುದ್ದಿ

ಜಾಹೀರಾತು