2:54 AM Sunday1 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ವಿರಾಜಪೇಟೆ: ಜಿಂಕೆಯ ಕೊಂಬು ಮಾರಾಟಕ್ಕೆ ಯತ್ನ ; ಆರೋಪಿಯ ಬಂಧನ

09/04/2022, 12:55

ವಿರಾಜಪೇಟೆ(reporterkarnataka.com):  ವಿರಾಜಪೇಟೆ ನಗರದ ಪಂಜರಪೇಟೆ ಸಮೀಪದ ಕಾವೇರಿ ಪದವಿಪೂರ್ವ ಕಾಲೇಜಿನ ಮುಖ್ಯ ದ್ವಾರದ ಒತ್ತಿನಲ್ಲಿರುವ ಸಾರ್ವಜನಿಕ ಬಸ್ಸು ತಂಗುದಾಣದ ಬಳಿ ಜಿಂಕೆ ಕೊಂಬುಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಲಾಗಿದೆ.

ಮೈಸೂರಿನವನಾದ ರವಿ ಅಲಿಯಾಸ್ ಮಂಜು ಎಂಬಾತ ಮೂರು ಜಿಂಕೆಯ ಕೊಂಬುಗಳನ್ನು ಎರಡು ಪ್ಲಾಸ್ಟಿಕ್ ಚೀಲಗಳಲ್ಲಿ ತುಂಬಿ ವಿರಾಜಪೇಟೆ ನಗರದ ಪಂಜರಪೇಟೆ ಸಮೀಪದ ಕಾವೇರಿ ಪದವಿಪೂರ್ವ ಕಾಲೇಜಿನ ಮುಖ್ಯ ದ್ವಾರದ ಒತ್ತಿನಲ್ಲಿರುವ ಸಾರ್ವಜನಿಕ ಬಸ್ಸು ತಂಗುದಾಣದ ಬಳಿ ಮಾರಾಟಕ್ಕಾಗಿ ಗಿರಾಕಿಗಳನ್ನು ಹುಡುಕುತ್ತಿದ್ದ. ಈ ಕುರಿತು ಖಚಿತ ಮಾಹಿತಿ ಮೇರೆಗೆ ವಿರಾಜಪೇಟೆ ತಾಲೂಕು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಸಿಂಬ್ಬದಿಗಳು ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತ ಆರೋಪಿಯನ್ನು ವಿರಾಜಪೇಟೆ ಪ್ರಧಾನ ಸಿವಿಲ್ ಜಡ್ಜ್ ಮತ್ತು ಜೆಎಂಎಫ್.ಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.

ನ್ಯಾಯಾಲಯವು 15 ದಿನಗಳ ನ್ಯಾಯಾಂಗ ಬಂಧನ ನೀಡಿದೆ. 

ಕಾರ್ಯಾಚರಣೆಯಲ್ಲಿ ಪೊಲೀಸ್ ಮಹಾ ನಿರೀಕ್ಷಕ  ಕೆ. ವಿ. ಶರತ್ ಚಂದ್ರ ರವರ ನಿರ್ದೇಶನದ ಮೇರೆಗೆ, ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಘಟಕದ ಪೊಲೀಸ್ ಅಧೀಕ್ಷಕ ಎನ್ .ಟಿ. ಶ್ರೀನಿವಾಸ್ ರೆಡ್ಡಿ ಯವರ ಮಾರ್ಗದರ್ಶನದಲ್ಲಿ ವಿರಾಜಪೇಟೆ ಸಿ. ಐ. ಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಪ್ರಭಾರ ಆರಕ್ಷಕ ಉಪನಿರೀಕ್ಷಕರಾದ ಸಿ.ಯು.ಸವಿ, ಸಿಬ್ಬಂದಿಗಳಾದ ಟಿ. ಪಿ. ಮಂಜುನಾಥ, ಕೆ. ಎಸ್. ದೇವಯ್ಯ, ಸಿ. ಬಿ. ಬೀನ, ಎಸ್ ಎಂ ಯೋಗೇಶ್, ಪಿ. ಯು. ಮುನೀರ್, ಆರ್. ನಂದಕುಮಾರವರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು