4:30 AM Saturday25 - April 2026
ಬ್ರೇಕಿಂಗ್ ನ್ಯೂಸ್
ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ?

ಇತ್ತೀಚಿನ ಸುದ್ದಿ

ನರಿಮೊಗ್ರು; ಡಿಜಿಟಲ್ ಗ್ರಂಥಾಲಯದ ಉದ್ಘಾಟನೆ ಹಾಗೂ ಸ್ವಚ್ಛವಾಹಿನಿ ಘನತ್ಯಾಜ್ಯ ವಾಹನ ಲೋಕಾರ್ಪಣೆ

09/04/2022, 13:28

ಪುತ್ತೂರು(reporterkarnataka.com):
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಪುತ್ತೂರು, ಗ್ರಾಮ ಪಂಚಾಯತ್ ನರಿಮೊಗ್ರು ಇದರ ವತಿಯಿಂದ ನರಿಮೊಗ್ರು ಗ್ರಾಮ ಪಂಚಾಯತ್ ಡಿಜಿಟಲ್ ಗ್ರಂಥಾಲಯದ ಉದ್ಘಾಟನೆ ಹಾಗೂ ಸ್ವಚ್ಛವಾಹಿನಿ ಘನತ್ಯಾಜ್ಯ ವಾಹನದ ಲೋಕಾರ್ಪಣಾ ಕಾರ್ಯಕ್ರಮ ಶುಕ್ರವಾರ ನಡೆಯಿತು.


ಡಿಜಿಟಲ್ ಗ್ರಂಥಾಲಯ ಉದ್ಘಾಟನೆಯನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ಉದ್ಘಾಟಿಸಿದರು. ಬಳಿಕ ಸ್ವಚ್ಛ ವಾಹಿನಿ ಘನತ್ಯಾಜ್ಯ ಸಾಗಾಟ ವಾಹನವನ್ನು ಶಾಸಕರು ಚಲಾಯಿಸುವ ಮೂಲಕ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭ ಮಹಾತ್ಮ ಗಾಂಧಿ ನರೇಗಾ ಯೋಜನೆಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಒಂಬಡ್ಸ್ಮನ್ ಹಾಗೂ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯರಾದ ರಾಮದಾಸ್ ಗೌಡ ಜೊತೆಗಿದ್ದರು.


ಈ ಸಂದರ್ಭ ನರಿನೊಗ್ರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ವಿದ್ಯಾ, ಉಪಾಧ್ಯಕ್ಷರಾದ ಸುಧಾಕರ ಕುಲಾಲ್, ಸದಸ್ಯರು, ಪಂಚಾಯತಿ ಅಧಿಕಾರಿಯಾದ ರವಿಚಂದ್ರ ಯು, ಕಾರ್ಯದರ್ಶಿಯಾದ ಶೇಖ್ ಕಲಂದರ್ ಅಲಿ, ಬಿಂದು ಫ್ಯಾಕ್ಟರಿಯ ಅಧಿಕಾರಿಯಾದ  ನಾಗರಾಜ್, ಗ್ರಂಥಪಾಲಕ ವರುಣ್ ಕುಮಾರ್, ಗ್ರಾಪಂ‌ ಸದಸ್ಯ ನವೀನ್ ಕಾರ್ಯಕ್ರಮ ನಿರ್ವಹಿಸಿದರು‌.

ಇತ್ತೀಚಿನ ಸುದ್ದಿ

ಜಾಹೀರಾತು