2:11 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ಬೆಳಗಾವಿ: ಭಾರಿ ಗಾಳಿ ಮಳೆ; ಮರ, ಲೈಟ್ ಕಂಬಗಳು ಧರಾಶಾಯಿ; ದ್ರಾಕ್ಷೆ ಬೆಳೆಗೆ ಅಪಾರ ಹಾನಿ, ಕಂಗಾಲಾದ ರೈತರು 

09/04/2022, 23:09

ಬೆಳಗಾವಿ(reporterkarnataka.com): ಜಿಲ್ಲೆಯ ಹಲವೆಡೆ ಶನಿವಾರ ಮಿಂಚು ಗುಡುಗು ಸಹಿತ ಭಾರಿ ಮಳೆಯಾಗಿದ್ದು, ಹಲವು ಮರ ಹಾಗೂ ವಿದ್ಯುತ್ ಕಂಬಗಳು ಧರಾಶಾಯಿಯಾಗಿದೆ.

ಗಾಳಿ ಸಮೇತ ಮಳೆಯಾಗುವುದರಿಂದ ಮುಖ್ಯ ಬಸ್ ನಿಲ್ದಾಣ ಎದುರುಗಡೆ ಇರುವ ಸಿಂಗನಲದ ಕರೆಂಟ್ ಕಂಬಗಳಿಗೆ ಹಾಕಿರುವ ಜಾಹೀರಾತು ಬ್ಯಾನರ್ ಗಳು ಹರಿದು ಹೋಗಿವೆ. ಬ್ಯಾನರ್ ತುಂಡುಗಳು ಗಾಳಿಗೆ ಹಾರಿ ವಿದ್ಯುತ್ ವಯರ್ ಗಳಿಗೆ ತಾಗಿ ಶಾರ್ಟ್ ಸರ್ಕಿಟ್ ಆಗುವ ದೃಶ್ಯ ಕಂಡು ಬಂತು. ಅಲ್ಲಲ್ಲಿ ಮರಗಳು ಉರುಳಿ ಅಂಗಡಿ ಮುಂಗಟ್ಟುಗಳಿಗೆ ಹಾನಿ ಸಂಭವಿಸಿದೆ. 

ಬೆಳಗಾವಿ, ನಿಪ್ಪಾಣಿ, ಅಥಣಿ ಮುಂತಾದ ತಾಲೂಕುಗಳಲ್ಲಿ ಭಾರಿ
ಮಳೆಯಾಗಿದೆ. ಅಥಣಿ ತಾಲೂಕಿನ ಐಗಳಿ,ತೆಲಸಂಗ,ಕೋಹಳ್ಳಿ ಗ್ರಾಮದಲ್ಲಿ ಶನಿವಾರ ಸಂಜೆ  ಬಾರಿ ಅಕಾಲಿಕ ಗಾಳಿ ಮಳೆ ಸುರಿದಿದೆ.  ಗಾಳಿ ರಭಸಕ್ಕೆ ಗಿಡ,  ಮರಗಳು  ಹಾಗೂ   ಲೈಟ್ ಕಂಬಗಳು  ಉರಳಿವೆ. ಇನ್ನೂ  ಐಗಳಿ.ತೆಿಲಸಂಗ ಕೋಹಳ್ಳಿ ಗ್ರಾಮದ ರೈತರು ಐಗಳಿ ದ್ರಾಕ್ಷಿ  ಸಂಸ್ಕರಣಾ ಘಟಕದ ಸಮೀಪ ಇರುವ ಶೇಡ್ ಗಳಲ್ಲಿ ತುಂಬಿದ ದ್ರಾಕ್ಷಿ  ಹಣ್ಣುಗಳು ಮಳೆಗೆ ಸಂಪೂರ್ಣ ವಾಗಿ  ತೊಯ್ದು ನಾಶವಾಗಿವೆ.   ರೈತರು ವರ್ಷವಿಡಿ   ದುಡಿದು ಕೊನೆಯ ಹಂತದಲ್ಲಿ ಅಪಾರವಾದ ನಷ್ಟ ಅನುಭವಿಸುವಂತಾಗಿದೆ.


ಇದರಿಂದ ರೈತರು ಕಂಗಾಲ ಆಗಿದ್ದಾರೆ  ಸಾವಿರಾರು ರೂ. ಸಾಲ ಮಾಡಿ ಖರ್ಚು ಮಾಡಿ ಬೆಳೆದ  ಬೆಳೆ  ಕೈಗೆ  ಬಾರದೆ ಇರುವುದು   ರೈತರ ಕಣ್ಣಲ್ಲಿ ನೀರು ತರಿಸಿದೆ  ಇದಕ್ಕೆ ಸರ್ಕಾರ  ಕೂಡಲೇ  ಪರಿಹಾರ   ನೀಡಬೇಕು  ಎಂದು ರೈತರು  ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು