9:40 PM Sunday1 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಕಾರ್ಕಳ:  ನಾಯಿಯನ್ನು ಬೆನ್ನಟ್ಟಿದ ಚಿರತೆ ಬಾವಿಗೆ; ಅರಣ್ಯ ಇಲಾಖೆ ಸಿಬ್ಬಂದಿಗಳಿಂದ ರಕ್ಷಣೆ

10/04/2022, 13:07

ಕಾರ್ಕಳ(reporterkarnataka.com): ನಾಯಿಯನ್ನು ಓಡಿಸಿಕೊಂಡು ಹೋಗಿದ್ದ ಚಿರತೆಯೊಂದು ಬಾವಿಗೆ ಬಿದ್ದ ಘಟನೆ ಕಾರ್ಕಳ ಕಸಬದ ಬಳಿ ಭಾನುವಾರ ಮುಂಜಾನೆ ನಡೆದಿದೆ.


ಕಸಬ ಸಮೀಪದ ಅತ್ತೂರು ವಿನ್ಸೆಂಟ್‌ ನವಿನ್  ಕ್ಯಾಸ್ಟೋಲಿನೊ ಎಂಬವರ ಮನೆಯ ಚಿರತೆ ಬಾವಿಗೆ ಬಿದ್ದಿದೆ.ಸುಮಾರು 6 ವರ್ಷದ ಗಂಡು ಚಿರತೆಯಾಗಿದ್ದು,ಕಾರ್ಕಳ ವಲಯ ಅರಣ್ಯಾಧಿಕಾರಿ ಶ್ರೀ ಜಿ.ಡಿ ದಿನೇಶ್ ರವರ ನೇತೃತ್ವದಲ್ಲಿ ಕಾರ್ಕಳ ವಲಯದ ಸಿಬ್ಬಂದಿಯವರು ಬಾವಿಯಿಂದ ಮೇಲೆತ್ತಿ ರಕ್ಷಿಸಲಾಗಿದೆ.  ಚಿರತೆಯನ್ನು ಆರೋಗ್ಯ ತಪಾಸಣೆ ನಡೆಸಿ ಸುರಕ್ಷಿತ ಪ್ರದೇಶಕ್ಕೆ ಬಿಡಲಾಗುವುದೆಂದು ಕಾರ್ಕಳ ವಲಯ ಅರಣ್ಯಾಧಿಕಾರಿ ಮಾಹಿತಿ ನೀಡಿದ್ದಾರೆ. ಕಾರ್ಯಾಚರಣೆಯಲ್ಲಿ ಉಪವಲಯ ಅರಣ್ಯಾಧಿಕಾರಿಗಳಾದ  ಪ್ರಕಾಶ್ಚಂದ್ರ, ಹುಕ್ರಪ್ಪ ಗೌಡ, ರಾಘವೇಂದ್ರ ಶೆಟ್ಟಿ, ಚಂದ್ರಕಾಂತ್ ಪೋಳ್, ಅರಣ್ಯ ರಕ್ಷಕರಾದ ಎ.ಡಿ ಪೊನ್ನಪ್ಪ, ಭಾಸ್ಕರ, ಶ್ರೀಧರ್ ನರೇಗಲ್, ಪ್ರಕಾಶ್, ಮಹಾಂತೇಶ್ ಎಚ್ ಗೋಡಿ, ಬಾಬು ಪೂಜಾರಿ, ಶಮೀಮ್, ಬಾಬುಪೂಜಾರಿ ಯಾನೆ ಪ್ರಕಾಶ್, ಶ್ರೀಧರ ಪೂಜಾರಿ ಹಾಗೂ ಸ್ಥಳೀಯರಾದ ಮಾಜಿ ಎ.ಪಿ.ಎಂಸಿ ಅಧ್ಯಕ್ಷರಾದ ಬಾಲಕೃಷ್ಣ ಹೆಗ್ಡೆ, ಹಾಗೂ ಇನ್ನಿತರರ ಭಾಗವಹಿಸಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು