7:48 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಟೇಕ್ವಾಂಡೊ ಅಂತಾರಾಷ್ಟ್ರೀಯ ಕೂಟ: ಮಂಗಳೂರಿನ ಸಂಹಿತಾ ಅಲೆವೂರಾಯಗೆ ಚಿನ್ನ

10/04/2022, 19:55

ಮಂಗಳೂರು(reporterkarnataka.com): ನೇಪಾಳದ ಕಾಠ್ಮಂಡುವಿನಲ್ಲಿ ನಡೆದ ಐಎಂಎಎ ಮುಕ್ತ ಅಂತಾರಾಷ್ಟ್ರೀಯ ಟೇಕ್ವಾಂಡೊ ಪಂದ್ಯಾವಳಿಯಲ್ಲಿ ಭಾರತವನ್ನು ಪ್ರತಿನಿಧಿಸಿದ ಮಂಗಳೂರಿನ ಸಂಹಿತಾ ಅಲೆವೂರಾಯ ಕೆ.ವಿ. ಚಿನ್ನದ ಪದಕ ಗಳಿಸಿದ್ದಾರೆ.

೪೬ ಕಿಲೊ ವಿಭಾಗದಲ್ಲಿ ಸ್ಪರ್ಧಿಸಿದ್ದು, ಇವರು ತಲಪಾಡಿ ಶಾರದಾ ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿನಿ. ಕುಂಜತ್ತೋಡಿ ವಾಸುದೇವ ಭಟ್‌ ಕದ್ರಿ ಮತ್ತು ದೀಪಾ ಕೆ.ಎಸ್.‌ ದಂಪತಿ ಪುತ್ರಿ. ಏ.೭ರಿಂದ ೯ರವರೆಗೆ ಕಠ್ಮಂಡುವಿನ ದಶರಥ ನಗರ ಕ್ರೀಡಾಂಗಣದಲ್ಲಿ ನಡೆದ ಪಂದ್ಯಾವಳಿಯಲ್ಲಿ ಕರ್ನಾಟಕ ಟೇಕ್ವಾಂಡೊ ಸಂಸ್ಥೆಯ ಸದಸ್ಯ ಡಾ.ಗುರುರಾಜ್‌ ಇಟಗಿ , ಕಾರ್ಯದರ್ಶಿ ಅನಿಲ್‌ ಕುಮಾರ್‌ ಮಾರ್ಗದರ್ಶಕರಾಗಿ ಭಾಗವಹಿಸಿದ್ದರು.

ಸಂಹಿತಾ ಅವರ ತಾಯಿ ದೀಪಾ ಕೆ.ಎಸ್.‌ ಮತ್ತು ಸಹೋದರ ಋತ್ವಿಕ್‌ ಅಲೆವೂರಾಯ ಅವರು ಅಂತಾರಾಷ್ಟ್ರೀಯ ಮಟ್ಟದ ಪವರ್‌ ಲಿಪ್ಟಿಂಗ್‌ ಕೂಟದಲ್ಲಿ ಚಿನ್ನದ ಪದಕಗಳನ್ನು ಪಡೆದಿದ್ದಾರೆ.

 

ಇತ್ತೀಚಿನ ಸುದ್ದಿ

ಜಾಹೀರಾತು