3:15 PM Friday30 - January 2026
ಬ್ರೇಕಿಂಗ್ ನ್ಯೂಸ್
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ…

ಇತ್ತೀಚಿನ ಸುದ್ದಿ

ಟೇಕ್ವಾಂಡೊ ಅಂತಾರಾಷ್ಟ್ರೀಯ ಕೂಟ: ಮಂಗಳೂರಿನ ಸಂಹಿತಾ ಅಲೆವೂರಾಯಗೆ ಚಿನ್ನ

10/04/2022, 19:55

ಮಂಗಳೂರು(reporterkarnataka.com): ನೇಪಾಳದ ಕಾಠ್ಮಂಡುವಿನಲ್ಲಿ ನಡೆದ ಐಎಂಎಎ ಮುಕ್ತ ಅಂತಾರಾಷ್ಟ್ರೀಯ ಟೇಕ್ವಾಂಡೊ ಪಂದ್ಯಾವಳಿಯಲ್ಲಿ ಭಾರತವನ್ನು ಪ್ರತಿನಿಧಿಸಿದ ಮಂಗಳೂರಿನ ಸಂಹಿತಾ ಅಲೆವೂರಾಯ ಕೆ.ವಿ. ಚಿನ್ನದ ಪದಕ ಗಳಿಸಿದ್ದಾರೆ.

೪೬ ಕಿಲೊ ವಿಭಾಗದಲ್ಲಿ ಸ್ಪರ್ಧಿಸಿದ್ದು, ಇವರು ತಲಪಾಡಿ ಶಾರದಾ ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿನಿ. ಕುಂಜತ್ತೋಡಿ ವಾಸುದೇವ ಭಟ್‌ ಕದ್ರಿ ಮತ್ತು ದೀಪಾ ಕೆ.ಎಸ್.‌ ದಂಪತಿ ಪುತ್ರಿ. ಏ.೭ರಿಂದ ೯ರವರೆಗೆ ಕಠ್ಮಂಡುವಿನ ದಶರಥ ನಗರ ಕ್ರೀಡಾಂಗಣದಲ್ಲಿ ನಡೆದ ಪಂದ್ಯಾವಳಿಯಲ್ಲಿ ಕರ್ನಾಟಕ ಟೇಕ್ವಾಂಡೊ ಸಂಸ್ಥೆಯ ಸದಸ್ಯ ಡಾ.ಗುರುರಾಜ್‌ ಇಟಗಿ , ಕಾರ್ಯದರ್ಶಿ ಅನಿಲ್‌ ಕುಮಾರ್‌ ಮಾರ್ಗದರ್ಶಕರಾಗಿ ಭಾಗವಹಿಸಿದ್ದರು.

ಸಂಹಿತಾ ಅವರ ತಾಯಿ ದೀಪಾ ಕೆ.ಎಸ್.‌ ಮತ್ತು ಸಹೋದರ ಋತ್ವಿಕ್‌ ಅಲೆವೂರಾಯ ಅವರು ಅಂತಾರಾಷ್ಟ್ರೀಯ ಮಟ್ಟದ ಪವರ್‌ ಲಿಪ್ಟಿಂಗ್‌ ಕೂಟದಲ್ಲಿ ಚಿನ್ನದ ಪದಕಗಳನ್ನು ಪಡೆದಿದ್ದಾರೆ.

 

ಇತ್ತೀಚಿನ ಸುದ್ದಿ

ಜಾಹೀರಾತು