11:49 AM Sunday19 - April 2026
ಬ್ರೇಕಿಂಗ್ ನ್ಯೂಸ್
ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು Udupi | ಕಾಪು ಬಳಿ ಭೀಕರ ಲಾರಿ-ಕಾರು ಅಪಘಾತ: ಓರ್ವ ಸಾವು; ಇಬ್ಬರು… ಮಂತ್ರಾಲಯದ ಬಳಿ ಭೀಕರ ಅಪಘಾತ: 8 ಮಂದಿ ಸಾವು, ತರೀಕೆರೆ ತಾಲೂಕಿನ ಇಬ್ಬರು… ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ, ಸಂಪುಟ ಪುನರ್ ರಚನೆ ಆಗಲಿ: ಆರೋಗ್ಯ… ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ 17 ಮಂದಿಗೆ ಜೀವಾವಧಿ… ಪುತ್ರನ ಮೇಲಿನ ಹಲ್ಲೆ ಕೇಸ್ ಕೈಬಿಡಿ: ಅನಂತ ಕುಮಾರ್ ಹೆಗಡೆ ಮನವಿಗೆ ಸ್ಪಂದಿಸಿದ…

ಇತ್ತೀಚಿನ ಸುದ್ದಿ

ಮತ್ತೆ ತುಳುವಿಗಾಗಿ ಕೈ ಎತ್ತಿದ ಸಂಘಟನೆಗಳು : ಅಧಿಕೃತ ರಾಜ್ಯ ಭಾಷೆಗೆ ಆಗ್ರಹಿಸಿ ಟ್ವೀಟ್ ಅಭಿಯಾನ

12/06/2021, 17:57

ಮಂಗಳೂರು(reporterkarnataka news):

ಕರಾವಳಿ ಭಾಗದಲ್ಲಿ ಬಹು ಬಳಕೆಯಲ್ಲಿರುವ ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿ ಪರಿಗಣಿಸಬೇಕೆಂದು ಆಗ್ರಹಿಸಿ ತುಳು ಸಂಘಟನೆಗಳು ಟ್ವೀಟ್‌ ಅಭಿಯಾನಕ್ಕೆ ಕರೆ ನೀಡಿವೆ.

ಇದೇ ಭಾನುವಾರ ಜೈ ತುಳುನಾಡ್‌ ಸೇರಿದಂತೆ ಇನ್ನಿತರ ತುಳು ಭಾಷಾ ಪ್ರೇಮಿ ಸಂಘಟನೆಗಳು ತುಳು ಭಾಷೆಯ ಸಾಂವಿಧಾನಿಕ ಸ್ಥಾನಮಾನಕ್ಕೆ ಆಗ್ರಹಿಸಿ ಸರ್ಕಾರದ ಕದ ತಟ್ಟಲು ನಿರ್ಧರಿಸಿದ್ದು, ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾದ ತುಳು ಭಾಷೆಯನ್ನು ಕರ್ನಾಟಕ ಮತ್ತು ಕೇರಳ ರಾಜ್ಯದಲ್ಲಿ ಅಧಿಕೃತ ಭಾಷೆಯನ್ನಾಗಿ ಘೋಷಿಸಬೇಕು ಮತ್ತು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸಲು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಈ ಹಿಂದೆಯೂ ತುಳು ಭಾಷೆಯ ಸಾಂವಿಧಾನಿಕ ಸ್ಥಾನಮಾನಕ್ಕಾಗಿ ಟ್ವೀಟ್‌ ಅಭಿಯಾನ ಸೇರಿದಂತೆ ಅನೇಕ ರೀತಿಯ ಹೋರಾಟಗಳನ್ನು ತುಳು ಸಂಘಟನೆಗಳು ಮಾಡಿದ್ದವು. ಆದರೆ ಸರ್ಕಾರ ತುಳುವರ ಕೂಗಿಗೆ ಕಿವಿಯಾಗಿಲ್ಲ. ಕರಾವಳಿ ಭಾಗದ ರಾಜಕಾರಣಿಗಳು ಕೂಡ ಭಾಷೆಯ ವಿಚಾರವಾಗಿ ಆಸಕ್ತಿ ತೋರಿಸದ ಕಾರಣ ಇನ್ನೂ ತುಳುವರ ಕನಸು ನನಸಾಗದೆ ಉಳಿದಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಅತೀ ಹೆಚ್ಚು ಬಿಜೆಪಿ ಶಾಸಕರೇ ಇದ್ದಾರೆ. ರಾಜ್ಯ ಮತ್ತು ಕೇಂದ್ರದಲ್ಲೂ ಬಿಜೆಪಿ ಸರ್ಕಾರವೇ ಇದೆ. ಹೀಗಿದ್ದೂ ನಮ್ಮ ತುಳು ಭಾಷೆಗೊಂದು ಸಾಂವಿಧಾನಿಕ ಮಾನ್ಯತೆಯನ್ನು ಕೊಡಿಸಲು ಆಗದೆ ಇರೋದು ನಮ್ಮ ದೌರ್ಭಾಗ್ಯವಾಗಿದೆ.

ಭಾನುವಾರ ಬೆಳಗ್ಗೆಯಿಂದ ನಡೆಯುವ ಈ ಟ್ವೀಟ್‌ ಅಭಿಯಾನದಲ್ಲಿ #TuluOfficialinKA_KL ಎಂಬ ಹ್ಯಾಷ್‌ಟ್ಯಾಗ್‌ನೊಂದಿಗೆ ಟ್ವೀಟ್‌ ಮಾಡುವಂತೆ ಸಂಘಟಕರು ಜನರಲ್ಲಿ ವಿನಂತಿಸಿಕೊಂಡಿದ್ದು, ತುಳು ಭಾಷೆಗೆ ಅಧಿಕೃತ ಸಾಂವಿಧಾನಿಕ ಗೌರವ, ಸ್ಥಾನಮಾನ ಸಿಗಲು ಸರ್ಕಾರ ಮತ್ತು ಜನಪ್ರತಿನಿಧಿಗಳನ್ನು ಬಡಿದೆಬ್ಬಿಸೋದು ಅನಿವಾರ್ಯವಾಗಿದೆ. ಈ ಕಾರ್ಯಕ್ಕೆ ಸಮಸ್ತ ತುಳುವರು ಕೈಜೋಡಿಸುವಂತೆ ಜೈತುಳುನಾಡ್ ಸಂಘಟನೆಯ ಮುಖ್ಯಸ್ಥರು ವಿನಂತಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು