10:06 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,…

ಇತ್ತೀಚಿನ ಸುದ್ದಿ

ಮತ್ತೆ ತುಳುವಿಗಾಗಿ ಕೈ ಎತ್ತಿದ ಸಂಘಟನೆಗಳು : ಅಧಿಕೃತ ರಾಜ್ಯ ಭಾಷೆಗೆ ಆಗ್ರಹಿಸಿ ಟ್ವೀಟ್ ಅಭಿಯಾನ

12/06/2021, 17:57

ಮಂಗಳೂರು(reporterkarnataka news):

ಕರಾವಳಿ ಭಾಗದಲ್ಲಿ ಬಹು ಬಳಕೆಯಲ್ಲಿರುವ ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿ ಪರಿಗಣಿಸಬೇಕೆಂದು ಆಗ್ರಹಿಸಿ ತುಳು ಸಂಘಟನೆಗಳು ಟ್ವೀಟ್‌ ಅಭಿಯಾನಕ್ಕೆ ಕರೆ ನೀಡಿವೆ.

ಇದೇ ಭಾನುವಾರ ಜೈ ತುಳುನಾಡ್‌ ಸೇರಿದಂತೆ ಇನ್ನಿತರ ತುಳು ಭಾಷಾ ಪ್ರೇಮಿ ಸಂಘಟನೆಗಳು ತುಳು ಭಾಷೆಯ ಸಾಂವಿಧಾನಿಕ ಸ್ಥಾನಮಾನಕ್ಕೆ ಆಗ್ರಹಿಸಿ ಸರ್ಕಾರದ ಕದ ತಟ್ಟಲು ನಿರ್ಧರಿಸಿದ್ದು, ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾದ ತುಳು ಭಾಷೆಯನ್ನು ಕರ್ನಾಟಕ ಮತ್ತು ಕೇರಳ ರಾಜ್ಯದಲ್ಲಿ ಅಧಿಕೃತ ಭಾಷೆಯನ್ನಾಗಿ ಘೋಷಿಸಬೇಕು ಮತ್ತು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸಲು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಈ ಹಿಂದೆಯೂ ತುಳು ಭಾಷೆಯ ಸಾಂವಿಧಾನಿಕ ಸ್ಥಾನಮಾನಕ್ಕಾಗಿ ಟ್ವೀಟ್‌ ಅಭಿಯಾನ ಸೇರಿದಂತೆ ಅನೇಕ ರೀತಿಯ ಹೋರಾಟಗಳನ್ನು ತುಳು ಸಂಘಟನೆಗಳು ಮಾಡಿದ್ದವು. ಆದರೆ ಸರ್ಕಾರ ತುಳುವರ ಕೂಗಿಗೆ ಕಿವಿಯಾಗಿಲ್ಲ. ಕರಾವಳಿ ಭಾಗದ ರಾಜಕಾರಣಿಗಳು ಕೂಡ ಭಾಷೆಯ ವಿಚಾರವಾಗಿ ಆಸಕ್ತಿ ತೋರಿಸದ ಕಾರಣ ಇನ್ನೂ ತುಳುವರ ಕನಸು ನನಸಾಗದೆ ಉಳಿದಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಅತೀ ಹೆಚ್ಚು ಬಿಜೆಪಿ ಶಾಸಕರೇ ಇದ್ದಾರೆ. ರಾಜ್ಯ ಮತ್ತು ಕೇಂದ್ರದಲ್ಲೂ ಬಿಜೆಪಿ ಸರ್ಕಾರವೇ ಇದೆ. ಹೀಗಿದ್ದೂ ನಮ್ಮ ತುಳು ಭಾಷೆಗೊಂದು ಸಾಂವಿಧಾನಿಕ ಮಾನ್ಯತೆಯನ್ನು ಕೊಡಿಸಲು ಆಗದೆ ಇರೋದು ನಮ್ಮ ದೌರ್ಭಾಗ್ಯವಾಗಿದೆ.

ಭಾನುವಾರ ಬೆಳಗ್ಗೆಯಿಂದ ನಡೆಯುವ ಈ ಟ್ವೀಟ್‌ ಅಭಿಯಾನದಲ್ಲಿ #TuluOfficialinKA_KL ಎಂಬ ಹ್ಯಾಷ್‌ಟ್ಯಾಗ್‌ನೊಂದಿಗೆ ಟ್ವೀಟ್‌ ಮಾಡುವಂತೆ ಸಂಘಟಕರು ಜನರಲ್ಲಿ ವಿನಂತಿಸಿಕೊಂಡಿದ್ದು, ತುಳು ಭಾಷೆಗೆ ಅಧಿಕೃತ ಸಾಂವಿಧಾನಿಕ ಗೌರವ, ಸ್ಥಾನಮಾನ ಸಿಗಲು ಸರ್ಕಾರ ಮತ್ತು ಜನಪ್ರತಿನಿಧಿಗಳನ್ನು ಬಡಿದೆಬ್ಬಿಸೋದು ಅನಿವಾರ್ಯವಾಗಿದೆ. ಈ ಕಾರ್ಯಕ್ಕೆ ಸಮಸ್ತ ತುಳುವರು ಕೈಜೋಡಿಸುವಂತೆ ಜೈತುಳುನಾಡ್ ಸಂಘಟನೆಯ ಮುಖ್ಯಸ್ಥರು ವಿನಂತಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು