1:23 AM Saturday25 - April 2026
ಬ್ರೇಕಿಂಗ್ ನ್ಯೂಸ್
ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ?

ಇತ್ತೀಚಿನ ಸುದ್ದಿ

ಕಲಬುರ್ಗಿ: ಶ್ರೀರಾಮ ನವಮಿಯಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ; ಎಬಿವಿಪಿ ಖಂಡನೆ

11/04/2022, 10:18

ಮಂಗಳೂರು(reporterkarnataka.com): ರಾಮ ನವಮಿ ಆಚರಣೆಗೆ ದೇವಸ್ಥಾನಕ್ಕೆ ತೆರಳಿದ ಕಲಬುರ್ಗಿಯ ಎಬಿವಿಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿರುವುದನ್ನು ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ರಾಜ್ಯ ಘಟಕ ಖಂಡಿಸಿದೆ.

ಕಲಬುರ್ಗಿಯ ಕೇಂದ್ರಿಯ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಕ್ಯಾಂಪಸ್ ಬಳಿ ಇರುವ ಲಕ್ಷ್ಮಿ ದೇವಸ್ಥಾನದಲ್ಲಿ ರಾಮ ನವಮಿಯ ಆಚರಣೆಯು ನಡೆಯುತ್ತಿದ್ದು, ಆಸಕ್ತ ವಿದ್ಯಾರ್ಥಿಗಳು ಸೇರಿದ್ದರು . 

ವಿದ್ಯಾರ್ಥಿಗಳು ದೇವಸ್ಥಾದಲ್ಲಿ ನಡೆದ  ರಾಮನವಮಿಯ ಆಚರಣೆಯ ನಂತರ ಹಿಂದಿರುಗುವ ಸಂಧರ್ಭದಲ್ಲಿ 4 ವಿದ್ಯಾರ್ಥಿಗಳ ತಂಡವೊಂದು ರಾಮ ನವಮಿಯಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಅವಾಚ್ಯ ಶಬ್ದಗಳಿಂದ ನಿಂದಿಸಿ , ವಿದ್ಯಾರ್ಥಿಯ ಬಟ್ಟೆಯನ್ನು ಹರಿದು  ಹಲ್ಲೆಯನ್ನು ನಡೆಸಿದ್ದಾರೆ ಮತ್ತು ವಿದ್ಯಾರ್ಥಿಯನ್ನು ಅಪಹರಿಸುವಂತಹ ಪ್ರಯತ್ನವನ್ನು ಈ ಸಂದರ್ಭದಲ್ಲಿ ಮಾಡಿರುತ್ತಾರೆ . 

ಈ ಘಟನೆಯು ವ್ಯವಸ್ಥಿತ ಸಂಚಿನಿಂದ ನಡೆದಿರುವ ರೀತಿಯಾಗಿ ಕಂಡು ಬರುತ್ತಿದೆ. ಈ ರೀತಿಯಾಗಿ ಕ್ಯಾಂಪಸ್ ನಲ್ಲಿ ವಿದ್ಯಾರ್ಥಿಗಳ ನಡುವೆ ವೈಷಮ್ಯ ಬಿತ್ತುವಂತ ಕೆಲಸವನ್ನು ಮಾಡಿ ಭಯದ ವಾತಾವರಣವನ್ನು ವಿಶ್ವ ವಿದ್ಯಾನಿಲಯದಲ್ಲಿ ಸೃಷ್ಟಿಸುವಂತ ಕೆಲಸವನ್ನು ಗೂಂಡಾ ವರ್ತನೆಯ ಈ ವಿದ್ಯಾರ್ಥಿಗಳು ಮಾಡಿರುತ್ತಾರೆ. ಈ ಘಟನೆಯನ್ನು ವಿದ್ಯಾರ್ಥಿ ಪರಿಷತ್  ಖಂಡಿಸುತ್ತದೆ.  ಈ ಗೂಂಡಾ ವರ್ತನೆ ತೋರಿರುವ ವಿದ್ಯಾರ್ಥಿಗಳ ವಿರುದ್ಧ  ಕೂಡಲೇ ವಿಶ್ವ ವಿದ್ಯಾಲಯವು ಸೂಕ್ತವಾದ ಶಿಸ್ತು ಕ್ರಮವನ್ನು ತೆಗೆದುಕೊಳ್ಳ ಬೇಕು ಹಾಗೂ ಕಾನೂನು ಕ್ರಮಕ್ಕಾಗಿ ಮೊಕದ್ದಮೆಯನ್ನು ಹೂಡ ಬೇಕು ಎಂದು ವಿದ್ಯಾರ್ಥಿ ಪರಿಷತ್ ಆಗ್ರಹಿಸುತ್ತದೆ . 

ಇತ್ತೀಚಿನ ಸುದ್ದಿ

ಜಾಹೀರಾತು