3:18 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕಲಬುರ್ಗಿ: ಶ್ರೀರಾಮ ನವಮಿಯಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ; ಎಬಿವಿಪಿ ಖಂಡನೆ

11/04/2022, 10:18

ಮಂಗಳೂರು(reporterkarnataka.com): ರಾಮ ನವಮಿ ಆಚರಣೆಗೆ ದೇವಸ್ಥಾನಕ್ಕೆ ತೆರಳಿದ ಕಲಬುರ್ಗಿಯ ಎಬಿವಿಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿರುವುದನ್ನು ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ರಾಜ್ಯ ಘಟಕ ಖಂಡಿಸಿದೆ.

ಕಲಬುರ್ಗಿಯ ಕೇಂದ್ರಿಯ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಕ್ಯಾಂಪಸ್ ಬಳಿ ಇರುವ ಲಕ್ಷ್ಮಿ ದೇವಸ್ಥಾನದಲ್ಲಿ ರಾಮ ನವಮಿಯ ಆಚರಣೆಯು ನಡೆಯುತ್ತಿದ್ದು, ಆಸಕ್ತ ವಿದ್ಯಾರ್ಥಿಗಳು ಸೇರಿದ್ದರು . 

ವಿದ್ಯಾರ್ಥಿಗಳು ದೇವಸ್ಥಾದಲ್ಲಿ ನಡೆದ  ರಾಮನವಮಿಯ ಆಚರಣೆಯ ನಂತರ ಹಿಂದಿರುಗುವ ಸಂಧರ್ಭದಲ್ಲಿ 4 ವಿದ್ಯಾರ್ಥಿಗಳ ತಂಡವೊಂದು ರಾಮ ನವಮಿಯಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಅವಾಚ್ಯ ಶಬ್ದಗಳಿಂದ ನಿಂದಿಸಿ , ವಿದ್ಯಾರ್ಥಿಯ ಬಟ್ಟೆಯನ್ನು ಹರಿದು  ಹಲ್ಲೆಯನ್ನು ನಡೆಸಿದ್ದಾರೆ ಮತ್ತು ವಿದ್ಯಾರ್ಥಿಯನ್ನು ಅಪಹರಿಸುವಂತಹ ಪ್ರಯತ್ನವನ್ನು ಈ ಸಂದರ್ಭದಲ್ಲಿ ಮಾಡಿರುತ್ತಾರೆ . 

ಈ ಘಟನೆಯು ವ್ಯವಸ್ಥಿತ ಸಂಚಿನಿಂದ ನಡೆದಿರುವ ರೀತಿಯಾಗಿ ಕಂಡು ಬರುತ್ತಿದೆ. ಈ ರೀತಿಯಾಗಿ ಕ್ಯಾಂಪಸ್ ನಲ್ಲಿ ವಿದ್ಯಾರ್ಥಿಗಳ ನಡುವೆ ವೈಷಮ್ಯ ಬಿತ್ತುವಂತ ಕೆಲಸವನ್ನು ಮಾಡಿ ಭಯದ ವಾತಾವರಣವನ್ನು ವಿಶ್ವ ವಿದ್ಯಾನಿಲಯದಲ್ಲಿ ಸೃಷ್ಟಿಸುವಂತ ಕೆಲಸವನ್ನು ಗೂಂಡಾ ವರ್ತನೆಯ ಈ ವಿದ್ಯಾರ್ಥಿಗಳು ಮಾಡಿರುತ್ತಾರೆ. ಈ ಘಟನೆಯನ್ನು ವಿದ್ಯಾರ್ಥಿ ಪರಿಷತ್  ಖಂಡಿಸುತ್ತದೆ.  ಈ ಗೂಂಡಾ ವರ್ತನೆ ತೋರಿರುವ ವಿದ್ಯಾರ್ಥಿಗಳ ವಿರುದ್ಧ  ಕೂಡಲೇ ವಿಶ್ವ ವಿದ್ಯಾಲಯವು ಸೂಕ್ತವಾದ ಶಿಸ್ತು ಕ್ರಮವನ್ನು ತೆಗೆದುಕೊಳ್ಳ ಬೇಕು ಹಾಗೂ ಕಾನೂನು ಕ್ರಮಕ್ಕಾಗಿ ಮೊಕದ್ದಮೆಯನ್ನು ಹೂಡ ಬೇಕು ಎಂದು ವಿದ್ಯಾರ್ಥಿ ಪರಿಷತ್ ಆಗ್ರಹಿಸುತ್ತದೆ . 

ಇತ್ತೀಚಿನ ಸುದ್ದಿ

ಜಾಹೀರಾತು