12:18 PM Wednesday7 - May 2025
ಬ್ರೇಕಿಂಗ್ ನ್ಯೂಸ್
Chikkamagaluru | ಮಲೆನಾಡಿನಲ್ಲಿ ಮಿತಿಮೀರಿದ ಕಾಡುಪ್ರಾಣಿಗಳ ಉಪಟಳ: ಮೂಡಿಗೆರೆ ಸಮೀಪ ಹಸುವನ್ನು ಕೊಂದ… ಮಾಜಿ ಮುಖ್ಯಮಂತ್ರಿ, ದಿವಂಗತ ಕೆ.ಸಿ.ರೆಡ್ಡಿ ಅವರ ಜನ್ಮದಿನ: ಭಾವಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ ಮಾವಿನ ರಾಜಧಾನಿ ಶ್ರೀನಿವಾಸಪುರ ಮತ್ತೆ ಸಜ್ಜು: ಮೇ 15ರಿಂದ ಮಾರಾಟ ಭರ್ಜರಿ ಆರಂಭ Chikkamagaluru | ಕಾಶ್ಮೀರದಲ್ಲಿ ಉಗ್ರರ ದಾಳಿ: ಕೊಟ್ಟಿಗೆಹಾರ ಬಂದ್; ಅಂಗಡಿ-ಮುಂಗಟ್ಟು ಸ್ತಬ್ದ Murder | ನಾರಾಯಣಪುರ: ಗೌಡಪ್ಪ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್; ಅಪ್ರಾಪ್ತ ವಯಸ್ಸಿನ… ಶಾಂತಿಗಾಗಿ ಪ್ರಯತ್ನಿಸಿದ್ದೇನೆ ಹೊರತು ಯಾರ ಪರವೂ ಇಲ್ಲ, ಯಾರ ವಿರುದ್ದವೂ ಇಲ್ಲ: ಸ್ಪೀಕರ್… ಕೇಂದ್ರಕ್ಕೆ 4.5 ಲಕ್ಷ ಕೋಟಿ ತೆರಿಗೆ ಕೊಟ್ಟರೆ ರಾಜ್ಯಕ್ಕೆ ವಾಪಸ್ ಬರುವುದು ಕೇವಲ… Vijayapura | ಸಚಿವ ಜಮೀರ್‌ ಸುಮ್ಮನಿದ್ದರೆ ಸಾಕು, ಅದೇ ದೊಡ್ಡ ದೇಶ ಸೇವೆ:… ತನಿಖೆಯ ಮುನ್ನವೇ ಫಾಝಿಲ್ ಕುಟುಂಬಕ್ಕೆ ಕ್ಲೀನ್ ಚಿಟ್; ಸ್ಪೀಕರ್ ಖಾದರ್ ತಕ್ಷಣ ರಾಜೀನಾಮೆ… Chikkamagaluru | ಪೆಹಲ್ಗಾಮ್ ದಾಳಿ: ಆಲ್ದೂರು ಪಟ್ಟಣ ಬಂದ್; ವ್ಯಾಪಾರ-ವಹಿವಾಟು ಸ್ತಬ್ದ; ವಾರದ…

ಇತ್ತೀಚಿನ ಸುದ್ದಿ

ಕಲಬುರ್ಗಿ: ಶ್ರೀರಾಮ ನವಮಿಯಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ; ಎಬಿವಿಪಿ ಖಂಡನೆ

11/04/2022, 10:18

ಮಂಗಳೂರು(reporterkarnataka.com): ರಾಮ ನವಮಿ ಆಚರಣೆಗೆ ದೇವಸ್ಥಾನಕ್ಕೆ ತೆರಳಿದ ಕಲಬುರ್ಗಿಯ ಎಬಿವಿಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿರುವುದನ್ನು ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ರಾಜ್ಯ ಘಟಕ ಖಂಡಿಸಿದೆ.

ಕಲಬುರ್ಗಿಯ ಕೇಂದ್ರಿಯ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಕ್ಯಾಂಪಸ್ ಬಳಿ ಇರುವ ಲಕ್ಷ್ಮಿ ದೇವಸ್ಥಾನದಲ್ಲಿ ರಾಮ ನವಮಿಯ ಆಚರಣೆಯು ನಡೆಯುತ್ತಿದ್ದು, ಆಸಕ್ತ ವಿದ್ಯಾರ್ಥಿಗಳು ಸೇರಿದ್ದರು . 

ವಿದ್ಯಾರ್ಥಿಗಳು ದೇವಸ್ಥಾದಲ್ಲಿ ನಡೆದ  ರಾಮನವಮಿಯ ಆಚರಣೆಯ ನಂತರ ಹಿಂದಿರುಗುವ ಸಂಧರ್ಭದಲ್ಲಿ 4 ವಿದ್ಯಾರ್ಥಿಗಳ ತಂಡವೊಂದು ರಾಮ ನವಮಿಯಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಅವಾಚ್ಯ ಶಬ್ದಗಳಿಂದ ನಿಂದಿಸಿ , ವಿದ್ಯಾರ್ಥಿಯ ಬಟ್ಟೆಯನ್ನು ಹರಿದು  ಹಲ್ಲೆಯನ್ನು ನಡೆಸಿದ್ದಾರೆ ಮತ್ತು ವಿದ್ಯಾರ್ಥಿಯನ್ನು ಅಪಹರಿಸುವಂತಹ ಪ್ರಯತ್ನವನ್ನು ಈ ಸಂದರ್ಭದಲ್ಲಿ ಮಾಡಿರುತ್ತಾರೆ . 

ಈ ಘಟನೆಯು ವ್ಯವಸ್ಥಿತ ಸಂಚಿನಿಂದ ನಡೆದಿರುವ ರೀತಿಯಾಗಿ ಕಂಡು ಬರುತ್ತಿದೆ. ಈ ರೀತಿಯಾಗಿ ಕ್ಯಾಂಪಸ್ ನಲ್ಲಿ ವಿದ್ಯಾರ್ಥಿಗಳ ನಡುವೆ ವೈಷಮ್ಯ ಬಿತ್ತುವಂತ ಕೆಲಸವನ್ನು ಮಾಡಿ ಭಯದ ವಾತಾವರಣವನ್ನು ವಿಶ್ವ ವಿದ್ಯಾನಿಲಯದಲ್ಲಿ ಸೃಷ್ಟಿಸುವಂತ ಕೆಲಸವನ್ನು ಗೂಂಡಾ ವರ್ತನೆಯ ಈ ವಿದ್ಯಾರ್ಥಿಗಳು ಮಾಡಿರುತ್ತಾರೆ. ಈ ಘಟನೆಯನ್ನು ವಿದ್ಯಾರ್ಥಿ ಪರಿಷತ್  ಖಂಡಿಸುತ್ತದೆ.  ಈ ಗೂಂಡಾ ವರ್ತನೆ ತೋರಿರುವ ವಿದ್ಯಾರ್ಥಿಗಳ ವಿರುದ್ಧ  ಕೂಡಲೇ ವಿಶ್ವ ವಿದ್ಯಾಲಯವು ಸೂಕ್ತವಾದ ಶಿಸ್ತು ಕ್ರಮವನ್ನು ತೆಗೆದುಕೊಳ್ಳ ಬೇಕು ಹಾಗೂ ಕಾನೂನು ಕ್ರಮಕ್ಕಾಗಿ ಮೊಕದ್ದಮೆಯನ್ನು ಹೂಡ ಬೇಕು ಎಂದು ವಿದ್ಯಾರ್ಥಿ ಪರಿಷತ್ ಆಗ್ರಹಿಸುತ್ತದೆ . 

ಇತ್ತೀಚಿನ ಸುದ್ದಿ

ಜಾಹೀರಾತು