10:46 PM Sunday11 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಬೆಲೆಯೇರಿಕೆ ವಿರುದ್ಧ ಪ್ರತಿಭಟಿಸುವ ನೈತಿಕ ಹಕ್ಕು ಕಾಂಗ್ರೆಸ್‌ಗೆ ಇಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

11/04/2022, 15:53

ಬೆಂಗಳೂರು(reporterkarnataka.com): ಬೆಲೆಯೇರಿಕೆ ಕುರಿತಂತೆ ಪ್ರತಿಭಟನೆ ಮಾಡುವ ನೈತಿಕ ಹಕ್ಕು ಕಾಂಗ್ರೆಸ್ ಗೆ ಇಲ್ಲ. ದೇಶದಲ್ಲಿ ಅತಿ ಹೆಚ್ಚು ಬೆಲೆಯೇರಿಕೆ ಮಾಡಿದ ಖ್ಯಾತಿ, ಕೀರ್ತಿ, ದಾಖಲೆ ಕಾಂಗ್ರೆಸ್‌ನದ್ದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಅವರು ಸೋಮವಾರ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಪಿ.ಎಫ್. ಐ. ವಿದ್ಯಾರ್ಥಿಗಳ ಪ್ರತಿಭಟನೆ ಕುರಿತಂತೆ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ರಚಿಸಿರುವ ಸಮಿತಿ ಪರಾಮರ್ಶೆ ಮಾಡುತ್ತಿದ್ದು ವರದಿ ಬಂದ ಕೂಡಲೇ ತೀರ್ಮಾನ ಮಾಡಲಾಗುವುದು ಎಂದರು.

ಮುಸ್ಕಾನ್ ಅವರಿಗೆ ಅಲ್ ಖೈದಾ ಮುಖ್ಯಸ್ಥರು ನೀಡಿರುವ ಬೆಂಬಲಕ್ಕೆ ಸಂಬಂಧಿಸಿದಂತೆ ಅನಂತ ಕುಮಾರ್ ಹೆಗಡೆ ಅವರು ಪತ್ರ ಬರೆದಿದ್ದಾರೆ. ಈ ಬಗ್ಗೆ ತನಿಖೆಯಾಗಿದೆಯೇ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಏನಿದೆ ಎಂದು ಗೊತ್ತಿಲ್ಲ. ಅನಂತಕುಮಾರ್ ಹೆಗಡೆ ಅವರ ಬಳಿ ಚರ್ಚೆ ಮಾಡಿ ಅವರ ಬಳಿ ಇರುವ ಮಾಹಿತಿ ಬಗ್ಗೆ ತಿಳಿದುಕೊಳ್ಳಲಾಗುವುದು. ಅದರ ಆಧಾರದ ಮೇಲೆ ಮುಂದಿನ ಕ್ರಮ ಜರಗಿಸಲಾಗುವುದು ಎಂದರು.

ಸುಮಲತಾ ಅಂಬರೀಶ್ ಅವರು ಬಿಜೆಪಿ ಸೇರುತ್ತಿದ್ದಾರೆಯೇ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಅವರ ಸಹೋದರಿಯ ಮಗಳ ಮದುವೆಗೆ ಆಹ್ವಾನಿಸಲು ಬಂದಿದ್ದರು. ಕೆಲವು ಅಭಿವೃದ್ಧಿ ಕೆಲಸಗಳ ಬಗ್ಗೆ ಚರ್ಚಿಸಲಾಯಿತು ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು