5:58 AM Thursday15 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ಗಲಭೆಕೋರರ ಬಿಡುವುದಿಲ್ಲ: ರಾಮ ನವಮಿಯ ಹಿಂಸಾಚಾರದ ಬಗ್ಗೆ ಮಧ್ಯಪ್ರದೇಶ ಸಿಎಂ ಚೌಹಾಣ್ ಎಚ್ಚರಿಕೆ

11/04/2022, 19:00

ಭೋಪಾಲ್‌(reporterkarnataka.com): ರಾಮ ನವಮಿ ಆಚರಣೆ ವೇಳೆ ಖಾರ್ಗೋನ್‌ನಲ್ಲಿ

ನಡೆದ ಘಟನೆ ದುರದೃಷ್ಟಕರ. ಗಲಭೆಕೋರರನ್ನು ಬಿಡುವುದಿಲ್ಲ. ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸೀ ಸೋಮವಾರ ಹೇಳಿದ್ದಾರೆ.

ಹಿಂಸಾಚಾರ ನಡೆದು ಒಂದು ದಿನದ ಬಳಿಕ ಪ್ರತಿಕ್ರಿಯಿಸಿದ
ಅವರು, ಸಾರ್ವಜನಿಕ ಮತ್ತು ಖಾಸಗಿ ಆಸ್ತಿಯನ್ನು ಧ್ವಂಸ ಮಾಡಿದರಿಂದಲೇ ನಷ್ಟ ಪಾವತಿಸಲು ಕ್ರಮ ಕೈಗೊಳ್ಳಲಾಗುವುದಿಲ್ಲ.

ನಾವು ‘ಹಕ್ಕು ನ್ಯಾಯಮಂಡಳಿ’ ರಚಿಸುತ್ತಿದ್ದೇವೆ ಎಂದರು.

ಹಿಂಸಾಚಾರಕ್ಕೆ ಸಂಬಂಧಿಸಿದಂತೆ 77 ಜನರನ್ನು ಬಂಧಿಸಲಾಗಿದೆ ಎಂದು ರಾಜ್ಯ ಸಚಿವ ನರೋತ್ತಮ್ ಮಿಶ್ರಾ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಖಾರ್ಗೋನ್‌ನಲ್ಲಿ ಭಾನುವಾರ ನಡೆದ ಹಿಂಸಾಚಾರದಲ್ಲಿ 7 ಮಂದಿ ಪೊಲೀಸ್ ಸಿಬ್ಬಂದಿ ಸೇರಿದಂತೆ 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸುದ್ದಿ ಸಂಸ್ಥೆ ಪಿಟಿಐ ಪ್ರಕಾರ, ಕೆಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ ಮತ್ತು ಮನೆಗಳನ್ನು ಗುರಿಯಾಗಿರಿಸಲಾಗಿದೆ. ಜಿಲ್ಲಾಡಳಿತವು ನಂತರ ನಿಷೇಧಾಜ್ಞೆ ಹೇರಿತ್ತು.

ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ್ ಚೌಧರಿ ಸೋಮವಾರ ಮಾಧ್ಯಮ ಜತೆ ಮಾತನಾಡಿ, ದುಷ್ಕರ್ಮಿಗಳು ಟೇಸರ್‌ನಿಂದ ಗುಂಡು ಹಾರಿಸಿದ್ದಾರೆ. ಇನ್ನೂ 6 ಮಂದಿ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಅವರೆಲ್ಲರೂ ಸ್ಥಿರರಾಗಿದ್ದಾರೆ. ಒಬ್ಬ ಪೊಲೀಸ್ ಸಿಬ್ಬಂದಿಯ ತಲೆಗೆ ಗಂಭೀರ ಗಾಯವಾಗಿದೆ ಎಂದು ಮಿಶ್ರಾ ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.

ಬರ್ವಾನಿ ಜಿಲ್ಲೆಯ ಸೆಂಧ್ವಾ ಪಟ್ಟಣದಲ್ಲಿ ನಡೆದ ರಾಮನವಮಿ ಮೆರವಣಿಗೆಯಲ್ಲಿ ಇದೇ ರೀತಿಯ ಮತ್ತೊಂದು ಘಟನೆ ವರದಿಯಾಗಿದೆ, ಇದರಲ್ಲಿ ಪೊಲೀಸ್ ಠಾಣೆಯ ಉಸ್ತುವಾರಿ ಮತ್ತು ಐವರು ಗಾಯಗೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.

ಸೋಮವಾರದಂದು ನಿಗದಿಯಾಗಿದ್ದ ಕೆಲವು ಶಾಲಾ ಮತ್ತು ಕಾಲೇಜು ಪರೀಕ್ಷೆಗಳನ್ನು ಮುಂದೂಡಲಾಗಿದೆ. ರಾಮನವಮಿ ಆಚರಣೆಯ ನಡುವೆ ಭಾನುವಾರ ಹಿಂಸಾಚಾರ ವರದಿಯಾದ ನಾಲ್ಕು ರಾಜ್ಯಗಳಲ್ಲಿ ಮಧ್ಯಪ್ರದೇಶವೂ ಒಂದು. ಗುಜರಾತ್, ಬಂಗಾಳ ಮತ್ತು ಜಾರ್ಖಂಡ್ ಕೂಡ ಹಿಂಸಾಚಾರದ ಘಟನೆಗಳು ನಡೆದಿವೆ.

ಇತ್ತೀಚಿನ ಸುದ್ದಿ

ಜಾಹೀರಾತು