10:24 AM Wednesday5 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಕಳಚಿದ ಬಲಿಪ ಪರಂಪರೆಯ ಕೊಂಡಿ ; ಗಾನ ನಿಲ್ಲಿಸಿದ ಪ್ರಸಾದ್ ಬಲಿಪ ಭಾಗವತರು

11/04/2022, 19:59

ಮಂಗಳೂರು(Reporterkarnataka.com) ಕಟೀಲು ಮೇಳದ ಪ್ರಧಾನ ಭಾಗವತ, ಬಲಿಪ ಪರಂಪರೆಯ ಕೊಂಡಿ ಪ್ರಸಾದ ಬಲಿಪ ಭಾಗವತರು ಅಲ್ಪಕಾಲದ ಅಸೌಖ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮೇಳದ ತಿರುಗಾಟದಲ್ಲಿ ಈ ಬಾರಿ ಇರಲಿಲ್ಲ. ತೆಂಕುತಿಟ್ಟು ಯಕ್ಷಗಾನದ ಬಲಿಪ ಪರಂಪರೆಯ ಬಲಿಪ ನಾರಾಯಣ ಭಾಗವತರ ಪುತ್ರರಾದ ಬಲಿಪ ಪ್ರಸಾದ್ ಅವರು, ರಕ್ತಗತವಾಗಿ ಬಂದಿದ್ದ ಯಕ್ಷಗಾನ ಭಾಗವತಿಕೆಯನ್ನು ಮೈಗೂಡಿಸಿಕೊಂಡು ಕಟೀಲು ಎರಡನೆಯ ಮೇಳದ ಪ್ರಧಾನ ಭಾಗವತರಾಗಿದ್ದರು.

ತಂದೆಯ ಬಳಿಕ ಬಲಿಪ ಶೈಲಿಯ ಭಾಗವತಿಕೆ ಮೂಲಕ ಮಿಂಚಿದ್ದರು. ತಂದೆ, ಪತ್ನಿ, ಮೂವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು