11:37 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಬೊಮ್ಮಾಯಿ ನಾಳೆ ಪೊಳಲಿ ರಾಜ ರಾಜೇಶ್ವರಿ ದೇಗುಲಕ್ಕೆ ಭೇಟಿ: ಮಂಗಳೂರಿನಲ್ಲಿ ವಾಸ್ತವ್ಯ

11/04/2022, 21:29

ಮಂಗಳೂರು(reporterkarnataka.com): ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಏ. 12ರ ಮಂಗಳವಾರ ರಾತ್ರಿ 8.15ಕ್ಕೆ ಬಂಟ್ವಾಳ ತಾಲೂಕಿನ ಪೊಳಲಿ ರಾಜ ರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡುವರು

ಬೊಮ್ಮಾಯಿ ಅವರು 12 ಮತ್ತು 13ರಂದು ಜಿಲ್ಲೆಯ ಪ್ರವಾಸ ಕೈಗೊಳ್ಳುವರು.

12ರಂದು ಬೆಳಿಗ್ಗೆ ಉಡುಪಿಯ ಮಣಿಪಾಲ್‍ನಿಂದ ಬೆಳಿಗ್ಗೆ 9 ಗಂಟೆಗೆ ಮಂಗಳೂರಿಗೆ ಆಗಮಿಸುವರು.

ಬೆಳಿಗ್ಗೆ 9 ರಿಂದ ರಾತ್ರಿ 7 ಗಂಟೆಯ ವರೆಗೆ ಭಾರತೀಯ ಜನತಾ ಪಕ್ಷದ ವತಿಯಿಂದ ಮಂಗಳೂರಿನಲ್ಲಿ ಆಯೋಜಿಸಿರುವ ಸಭೆಗಳಲ್ಲಿ ಭಾಗವಹಿಸುವರು. ರಾತ್ರಿ 7.30ಕ್ಕೆ ಮಂಗಳೂರಿನಿಂದ ನಿರ್ಗಮಿಸಿ ರಸ್ತೆ ಮಾರ್ಗವಾಗಿ ರಾತ್ರಿ 8.15ಕ್ಕೆ ಬಂಟ್ವಾಳ ತಾಲೂಕಿನ ಪೊಳಲಿ

ರಾಜರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡುವರು. 8.45ಕ್ಕೆ ಅಲ್ಲಿಂದ ಹಿಂತಿರುಗಿ ರಾತ್ರಿ 9.15ಕ್ಕೆ ಮಂಗಳೂರಿಗೆ ಆಗಮಿಸಿ, ನಗರದಲ್ಲಿ ವಾಸ್ತವ್ಯ ಮಾಡುವರು.

ಏ.13ರ ಬುಧವಾರ ಬೆಳಿಗ್ಗೆ 8.30ಕ್ಕೆ ಮಂಗಳೂರಿನಿಂದ ರಸ್ತೆ ಮಾರ್ಗವಾಗಿ ಬಂಟ್ವಾಳಕ್ಕೆ ತೆರಳಿ ಬೆಳಿಗ್ಗೆ 9 ರಿಂದ ಮಧ್ಯಾಹ್ನ 12.30ರವರೆಗೆ ಭಾರತೀಯ ಜನತಾ ಪಕ್ಷದ ವತಿಯಿಂದ ಆಯೋಜಿಸಿರುವ ಸಭೆಗಳಲ್ಲಿ ಭಾಗವಹಿಸುವರು.

ಮಧ್ಯಾಹ್ನ 12.30ಕ್ಕೆ ಬಂಟ್ವಾಳದಿಂದ ರಸ್ತೆ ಮಾರ್ಗವಾಗಿ ನಿರ್ಗಮಿಸಿ 1.05ಕ್ಕೆ ಬಜಪೆಯಲ್ಲಿರುವ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ, 1.40ಕ್ಕೆ ವಿಮಾನದ ಮೂಲಕ ಹೊರಟು ಮಧ್ಯಾಹ್ನ 2.35ಕ್ಕೆ ಬೆಂಗಳೂರು ತಲುಪುವರು ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು