5:48 PM Saturday19 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

ವಿದೇಶಗಳಲ್ಲಿ ಕೋವಿಡ್‌ ಹೆಚ್ಚಳ: 8 ದೇಶಗಳಿಂದ ಬರುವವರಿಗೆ ಕ್ವಾರಂಟೈನ್‌ ಕಡ್ಡಾಯ

12/04/2022, 08:57

ಬೆಂಗಳೂರು(reporterkarnataka.com): ಚೀನಾ, ದಕ್ಷಿಣ ಕೊರಿಯಾ, ಹಾಂಗ್‍ಕಾಂಗ್ ಸೇರಿದಂತೆ 8 ದೇಶಗಳಲ್ಲಿ ಕೋವಿಡ್ ಹರಡುವಿಕೆ ತೀವ್ರವಾಗಿದ್ದು, ಈ ದೇಶಗಳಿಂದ ರಾಜ್ಯಕ್ಕೆ ಬರುವ ಪ್ರಯಾಣಿಕರ ಮೇಲೆ ಹೆಚ್ಚಿನ ನಿಗಾ ಇರಿಸಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಸಚಿವ ಕೆ.ಸುಧಾಕರ್‌ ತಿಳಿಸಿದ್ದಾರೆ.

ಆರೋಗ್ಯ ಸೌಧದಲ್ಲಿ ನಡೆದ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ ನಂತರ ಟ್ವೀಟ್‌ ಮಾಡಿರುವ ಅವರು, ವಿಶ್ವದಾದ್ಯಂತ ಕೆಲವು ದೇಶಗಳಲ್ಲಿ ಮತ್ತು ನಮ್ಮ ದೇಶದ ಇತರೆ ರಾಜ್ಯಗಳಲ್ಲಿ ಎಕ್ಸ್ಇ ಎಂಬ ಹೊಸ ಕೋವಿಡ್‌ ವೈರಾಣು ಪ್ರಭೇದ ವರದಿಯಾಗಿದ್ದು, 8 ದೇಶಗಳಿಂದ ರಾಜ್ಯಕ್ಕೆ ಬರುವ ಪ್ರಯಾಣಿಕರಿಗೆ ವಿಮಾನ ನಿಲ್ದಾಣದಲ್ಲೇ ಥರ್ಮಲ್ ತಪಾಸಣೆ, ಒಂದು ವಾರ ಅಥವಾ ಹತ್ತು ದಿನ ಕಡ್ಡಾಯ ಕ್ವಾರಂಟೈನ್ ಮಾಡಲಾಗುವುದು. ಲಸಿಕೆ ಪಡೆಯದ ಮಕ್ಕಳ ಮೇಲೆ ವಿಶೇಷ ನಿಗಾ ಸೇರಿದಂತೆ ತಜ್ಞರು ನೀಡಿರುವ ಸಲಹೆ ಪರಿಗಣಿಸಿ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಜೊತೆಗೆ ಎರಡನೇ ಡೋಸ್ ಬಾಕಿಯಿರುವ ನಾಗರಿಕರು ಕೂಡಲೇ ತಮ್ಮ 2ನೇ ಡೋಸ್ ಪಡೆಯಬೇಕು ಮತ್ತು ಎಲ್ಲ ಅರ್ಹ ನಾಗರೀಕರು ಮುನ್ನೆಚ್ಚರಿಕೆ ಡೋಸ್ ಪಡೆಯುವ ಮೂಲಕ ಹೆಚ್ಚಿನ ಸುರಕ್ಷತೆ ಪಡೆಯಬೇಕು. ನಿರ್ಲಕ್ಷ್ಯ ಮಾಡದೆ ಮಾಸ್ಕ್ ಧರಿಸುವುದು, ಕೈಗಳ ಸ್ವಚ್ಛತೆ, ಸಾರ್ವಜನಿಕ ಅಂತರ ಮುಂತಾದ ಕೋವಿಡ್ ಮುನ್ನೆಚ್ಚರಿಕೆಗಕನ್ನು ಪಾಲಿಸಬೇಕು ಎಂದು ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು