11:17 PM Wednesday24 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರ ಬಿ ಹೊಸಳ್ಳಿ ರಸ್ತೆಗಳ ಅಭಿವೃದ್ದಿಗೆ ಒತ್ತಾಯಿಸಿ ರಸ್ತೆ ತಡೆ ಪ್ರತಿಭಟನೆ

12/04/2022, 10:54

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ:ಬಿ ಹೊಸಹಳ್ಳಿ ಗ್ರಾ.ಪಂ ವ್ಯಾಪ್ತಿಯ ರಸ್ತೆಗಳ ಅಭಿವೃದ್ದಿಗೆ ಆಗ್ರಹಿಸಿ ಬಿ ಹೊಸಹಳ್ಳಿ ಗ್ರಾಮಸ್ಥರು ಬಿ.ಹೊಸಹಳ್ಳಿ ಭಾರತಿಬೈಲ್ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.

ಬಿ.ಹೊಸಳ್ಳಿ ಗ್ರಾ.ಪಂ ಸದಸ್ಯ ಆಶ್ರಿತ್ ಮಾತನಾಡಿ, ಚಕಮಕ್ಕಿಯಿಂದ ಭಾರತಿಬೈಲು ಂಪರ್ಕಿಸುವ ರಸ್ತೆ ಸೇರಿದಂತೆ ವಿವಿಧ ರಸ್ತೆಗಳು ಸಂಪೂರ್ಣ ಹಾಳಾಗಿದ್ದು ಸುಮಾರು 2 ದಶಕಗಳಿಂದ ರಸ್ತೆ ಅಭಿವೃದ್ದಿಯಾಗಿಲ್ಲ. ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸಾರ್ವಜನಿಕರಿಗೆ ತೊಂದರೆಯಾಗಿದ್ದು ಕೂಡಲೇ ರಸ್ತೆ ಅಭಿವೃದ್ದಿ ಪಡಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನಾ ಸ್ಥಳಕ್ಕೆ ಬೇಟಿ ನೀಡಿದ ಮಾಜಿ ಸಚಿವೆ ಮೋಟಮ್ಮ ಮಾತನಾಡಿ ಅತಿವೃಷ್ಟಿ ಸಂದರ್ಭದಲ್ಲಿ ನೆರೆ ಹಾನಿ ಕಾಮಗಾರಿಗೆ ಬಂದ ಕೋಟ್ಯಾಂತರ ರೂ ಅನುದಾನ ಯಾವ ಗ್ರಾಮಗಳಿಗೆ ಬಳಕೆಯಾಗಿದೆ ಎಂಬುದನ್ನು ಸಂಬಂಧಪಟ್ಟವರು ಸ್ಪಷ್ಟಪಡಿಸಬೇಕು. ಗ್ರಾಮೀಣ ಭಾಗದ ರಸ್ತೆ ಸಂಪರ್ಕ ಸರಿಪಡಿಸಲು ಮುಂದಾಗಬೇಕು ಎಂದರು.

ಪ್ರತಿಭಟನಾ ಸ್ಥಳಕ್ಕೆ ಬೇಟಿ ನೀಡಿ ಮಾತನಾಡಿದ ಮಾಜಿ ಸಚಿವ ಬಿ.ಬಿ ನಿಂಗಯ್ಯ, ಚುನಾಯಿತ ಸರ್ಕಾರ ಬಿ ಹೊಸಳ್ಳಿ ಗ್ರಾಮದ ರಸ್ತೆ ಅಭಿವೃದ್ದಿಗೆ ಮುಂದಾಗಬೇಕು. ಕಾಫಿ ಬೆಳೆಗಾರರು, ವಿದ್ಯಾರ್ಥಿಗಳು, ಕಾರ್ಮಿಕರು ಹೆಚ್ಚಿರುವ ಈ ಗ್ರಾಮದ ರಸ್ತೆ ಅಭಿವೃದ್ದಿ ಮಾಡಬೇಕಿದೆ ಎಂದರು.

ಬಿಜೆಪಿ ಮುಖಂಡರಾದ ದೀಪಕ್ ದೊಡ್ಡಯ್ಯ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿ ಸ್ಥಳದಲ್ಲಿಯೇ ಸಂಬಂದಪಟ್ಟ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿ ಶೀಘ್ರವಾಗಿ ರಸ್ತೆ ಅಭಿವೃದ್ದಿ ಮಾಡುವಂತೆ ತಿಳಿಸಿದರು. ನಂತರ ಮಾತನಾಡಿದ ಅವರು, ರಸ್ತೆ ಅಭಿವೃದ್ದಿಗೆ ಸಂಬಂಧಪಟ್ಟಂತೆ ಅಧಿಕಾರಿಗಳೊಂದಿಗೆ ಮಾತನಾಡಿದ್ದು ರಸ್ತೆ ಅಭಿವೃದ್ದಿಗೆ ಮುಂದಾಗದಿದ್ದರೇ ಮುಂದಿನ ದಿನಗಳಲ್ಲಿ ಪ್ರತಿಭಟನೆ ನಿರತರ ಹೋರಾಟಕ್ಕೆ ಬೆಂಬಲ ಸೂಚಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಗ್ರಾ.ಪಂ ಉಪಾಧ್ಯಕ್ಷೆ ಸರಸ್ವತಿ, ಯೋಗೇಶ್, ಬಸವರಾಜ್, ಪ್ರವೀಣ್, ಸುರೇಶ್,  ಶಿವಕುಮಾರ್, ಸಂತೋಷ್, ಗ್ರಾಮಸ್ಥರಾದ ಅರ್ಜುನ್, ಅಣ್ಣಪ್ಪ, ಗಣೇಶ್,ವರುಣ್, ಆದರ್ಶ್,ಪ್ರಸನ್ನ, ರಮೇಶ್, ದಿನೇಶ್ ಮುಂತಾದವರು ಇದ್ದರು

ಶಾಸಕ ಎಂ.ಪಿ.ಕುಮಾರಸ್ವಾಮಿ ಅವರು ಬಿ ಹೊಸಳ್ಳಿ ಕಾಲೋನಿಗೆ 20 ಲಕ್ಷ, ಬಿ ಹೊಸಳ್ಳಿ ಭಾರತಿಬೈಲ್ ಸಂಪರ್ಕ ರಸ್ತೆಗೆ 50 ಲಕ್ಷ ಅನುದಾನ ಬಿಡುಗಡೆಯಾಗಿದ್ದು ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ತಿಳಿಸಿದ್ದಾರೆ. ಗ್ರಾಮದ ಕೆಲ ವ್ಯಕ್ತಿಗಳು ರಸ್ತೆ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದು ಗ್ರಾಮದ ಅಭಿವೃದ್ದಿಗೆ ಪಕ್ಷಾತೀತವಾಗಿ ಸಹಕಾರ ನೀಡುತ್ತೇವೆ’

-ಮಂಜುನಾಥಗೌಡ, ಮಾಜಿ ಪ್ರಧಾನರು, ಬಿ.ಹೊಸಹಳ್ಳಿ.

ಇತ್ತೀಚಿನ ಸುದ್ದಿ

ಜಾಹೀರಾತು