6:12 AM Thursday15 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ಕೋವಿಡ್​ನ​ ಹೊಸ ತಳಿ XE ಎಂಟ್ರಿ: ಗಾಬರಿ ಬೇಡ ಎಂದ ಎನ್‌ಟಿಎಜಿಐ ಮುಖ್ಯಸ್ಥ ಎನ್​.ಕೆ.ಆರೋರಾ

12/04/2022, 11:19

ಹೊಸದಿಲ್ಲಿ(reporterkarnataka.com): ದೇಶದಲ್ಲಿ ಕೋವಿಡ್​ನ​ ಹೊಸ ತಳಿ ಎಕ್ಸ್​​ಇ ಪತ್ತೆಯಾದ ಬೆನ್ನಲ್ಲೆ ಜನರಲ್ಲಿ ಮತ್ತೆ ಆತಂಕ ಮನೆಮಾಡಿದ್ದು, ಈ ಬಗ್ಗೆ ಭಯಪಡುವ ಅವಶ್ಯಕತೆ ಇಲ್ಲ ಎಂದು ರಾಷ್ಟ್ರೀಯ ತಾಂತ್ರಿಕ ಸಲಹಾ ಗುಂಪಿನ (ಎನ್‌ಟಿಎಜಿಐ) ಮುಖ್ಯಸ್ಥ ಎನ್​.ಕೆ.ಆರೋರಾ ತಿಳಿಸಿದ್ದಾರೆ.

ಮಹಾರಾಷ್ಟ್ರ ಮತ್ತು ಗುಜರಾತ್​ನಲ್ಲಿ ಕೋವಿಡ್​ನ​ ಹೊಸ ತಳಿ ಎಕ್ಸ್​​ಇ ಪತ್ತೆಯಾದ ಬೆನ್ನಲ್ಲೆ ಪ್ರತಿಕ್ರಿಯಿಸಿದ ಅವರು, ಒಮಿಕ್ರಾನ್​ನ ಹೊಸ ತಳಿ ಬರುತ್ತಲೇ ಇರುತ್ತವೆ. ಇತ್ತೀಚೆಗೆ ಪತ್ತೆಯಾದ ಎಕ್ಸ್​​ಇ ಎಕ್ಸ್​​ ಸರಣಿಯ ರೂಪಾಂತರಿಯಾಗಿದೆ. ಇಂತಹ ತಳಿಗಳು ಹುಟ್ಟುತ್ತಿರುತ್ತವೆ. ಜನರು ಆತಂಕಪಡುವ ಅಗತ್ಯ ಇಲ್ಲ ಎಂದರು.

ಭಾರತದಲ್ಲಿ ಇದುವರೆಗೆ ದಾಖಲಾದ ಮಾಹಿತಿ ಪ್ರಕಾರ, ಈ ತಳಿ ಅಷ್ಟೊಂದು ವೇಗವಾಗಿ ಹರಡದು. ಎಕ್ಸ್​​ಇ ತಳಿಯು ಮೊದಲ ಹಂತದ ಪರೀಕ್ಷೆಯ ಭಾಗವಾಗಿದೆ. ಒಂದೇ ಪರೀಕ್ಷೆಯಿಂದ ಹೊಸ ತಳಿ ಬರುತ್ತದೆ ಎಂದು ಹೇಳುವುದು ಕಷ್ಟಸಾಧ್ಯ ಎಂದರು.

ಕಳೆದ ತಿಂಗಳು ಮುಂಬೈನಿಂದ ಗುಜರಾತ್​​ನ ವಡೋದರಾಗೆ ಪ್ರಯಾಣಿಸಿದ್ದ 67 ವರ್ಷದ ವ್ಯಕ್ತಿಯಲ್ಲಿ ಇತ್ತೀಚೆಗೆ ಎಕ್ಸ್​​ಇ ಸೋಂಕು ಪತ್ತೆಯಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು