3:07 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಕೋವಿಡ್​ನ​ ಹೊಸ ತಳಿ XE ಎಂಟ್ರಿ: ಗಾಬರಿ ಬೇಡ ಎಂದ ಎನ್‌ಟಿಎಜಿಐ ಮುಖ್ಯಸ್ಥ ಎನ್​.ಕೆ.ಆರೋರಾ

12/04/2022, 11:19

ಹೊಸದಿಲ್ಲಿ(reporterkarnataka.com): ದೇಶದಲ್ಲಿ ಕೋವಿಡ್​ನ​ ಹೊಸ ತಳಿ ಎಕ್ಸ್​​ಇ ಪತ್ತೆಯಾದ ಬೆನ್ನಲ್ಲೆ ಜನರಲ್ಲಿ ಮತ್ತೆ ಆತಂಕ ಮನೆಮಾಡಿದ್ದು, ಈ ಬಗ್ಗೆ ಭಯಪಡುವ ಅವಶ್ಯಕತೆ ಇಲ್ಲ ಎಂದು ರಾಷ್ಟ್ರೀಯ ತಾಂತ್ರಿಕ ಸಲಹಾ ಗುಂಪಿನ (ಎನ್‌ಟಿಎಜಿಐ) ಮುಖ್ಯಸ್ಥ ಎನ್​.ಕೆ.ಆರೋರಾ ತಿಳಿಸಿದ್ದಾರೆ.

ಮಹಾರಾಷ್ಟ್ರ ಮತ್ತು ಗುಜರಾತ್​ನಲ್ಲಿ ಕೋವಿಡ್​ನ​ ಹೊಸ ತಳಿ ಎಕ್ಸ್​​ಇ ಪತ್ತೆಯಾದ ಬೆನ್ನಲ್ಲೆ ಪ್ರತಿಕ್ರಿಯಿಸಿದ ಅವರು, ಒಮಿಕ್ರಾನ್​ನ ಹೊಸ ತಳಿ ಬರುತ್ತಲೇ ಇರುತ್ತವೆ. ಇತ್ತೀಚೆಗೆ ಪತ್ತೆಯಾದ ಎಕ್ಸ್​​ಇ ಎಕ್ಸ್​​ ಸರಣಿಯ ರೂಪಾಂತರಿಯಾಗಿದೆ. ಇಂತಹ ತಳಿಗಳು ಹುಟ್ಟುತ್ತಿರುತ್ತವೆ. ಜನರು ಆತಂಕಪಡುವ ಅಗತ್ಯ ಇಲ್ಲ ಎಂದರು.

ಭಾರತದಲ್ಲಿ ಇದುವರೆಗೆ ದಾಖಲಾದ ಮಾಹಿತಿ ಪ್ರಕಾರ, ಈ ತಳಿ ಅಷ್ಟೊಂದು ವೇಗವಾಗಿ ಹರಡದು. ಎಕ್ಸ್​​ಇ ತಳಿಯು ಮೊದಲ ಹಂತದ ಪರೀಕ್ಷೆಯ ಭಾಗವಾಗಿದೆ. ಒಂದೇ ಪರೀಕ್ಷೆಯಿಂದ ಹೊಸ ತಳಿ ಬರುತ್ತದೆ ಎಂದು ಹೇಳುವುದು ಕಷ್ಟಸಾಧ್ಯ ಎಂದರು.

ಕಳೆದ ತಿಂಗಳು ಮುಂಬೈನಿಂದ ಗುಜರಾತ್​​ನ ವಡೋದರಾಗೆ ಪ್ರಯಾಣಿಸಿದ್ದ 67 ವರ್ಷದ ವ್ಯಕ್ತಿಯಲ್ಲಿ ಇತ್ತೀಚೆಗೆ ಎಕ್ಸ್​​ಇ ಸೋಂಕು ಪತ್ತೆಯಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು