10:40 AM Friday18 - July 2025
ಬ್ರೇಕಿಂಗ್ ನ್ಯೂಸ್
ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:…

ಇತ್ತೀಚಿನ ಸುದ್ದಿ

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಕುರಿತು ನಿಷ್ಪಕ್ಷಪಾತ ತನಿಖೆ: ಮಂಗಳೂರಿನಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ

12/04/2022, 18:17

ಮಂಗಳೂರು(reporterkarnataka.com): ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಕುರಿತು ಪೊಲೀಸರು ನಿಷ್ಪಕ್ಷಪಾತ ತನಿಖೆ ನಡೆಸಲಿದ್ದು, ತನಿಖೆಯ ಪ್ರಾಥಮಿಕ ವರದಿ ಬಂದ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದಲ್ಲಿ ಮಂಗಳವಾರ ಮಾಧ್ಯಮದ ಜತೆ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರದ ಆಡಳಿತದ ಕಾಲದಲ್ಲಿ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಾಗ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅಥವಾ ಬೇರೆ ಸಚಿವರು ರಾಜೀನಾಮೆ ನೀಡಿದ್ದಾರೆಯೇ? ಎಂದು ಪ್ರಶ್ನಿಸಿದರು.

ಪ್ರತಿ ಜೀವಕ್ಕೂ ಮೌಲ್ಯ ಇದೆ. ವ್ಯಕ್ತಿಗೆ ಅವರದ್ದೇ ಜೀವನ ಇದೆ. ಅದನ್ನು ಗೌರವಿಸಬೇಕು. ನಾವು ತನಿಖೆಯಲ್ಲಿ ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡುತ್ತಿದ್ದೇವೆ. ಪ್ರಾಥಮಿಕ ಮಾಹಿತಿ ವರದಿ ಆಧಾರದಲ್ಲಿ ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ನೀಡಿದರು.

ಮುಂದಿನ ಚುನಾವಣೆಯನ್ನು ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳ ಆಧಾರದಲ್ಲಿಯೇ ಎದುರಿಸಲಿದ್ದೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ ಬೊಮ್ಮಾಯಿ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು