4:13 AM Tuesday4 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಕಾರ್ಮೆಲ್ ಡಿಗ್ರಿ ಕಾಲೇಜಿಗೆ “ಒಂದು ಜಿಲ್ಲೆ ಒಂದು ಹಸಿರು ಚಾಂಪಿಯನ್” ಪ್ರಶಸ್ತಿಯ ಗರಿ.

07/05/2021, 15:52

ಮಂಗಳೂರು(reporterkarnatakanews): ಭಾರತ ಸರ್ಕಾರದ ಉನ್ನತ ಶಿಕ್ಷಣ ಸಚಿವಾಲಯ, ಮಹಾತ್ಮ ಗಾಂಧಿ ರಾಷ್ಟ್ರೀಯ ಶಿಕ್ಷಣ ಮಂಡಳಿಯು ಆಯೋಜಿಸಿದ “ಒಂದು ಜಿಲ್ಲೆ ಒಂದು ಹಸಿರು ಚಾಂಪಿಯನ್” (ಒನ್ ಡಿಸ್ಟ್ರಿಕ್ಟ್ ಒನ್ ಗ್ರೀನ್ ಚಾಂಪಿಯನ್) ಪ್ರಶಸ್ತಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂಟ್ವಾಳ ತಾಲೂಕಿನ ಕಾರ್ಮೆಲ್ ಕಾಲೇಜ್ ಮೊಡಂಕಾಪು ಮುಡಿಗೇರಿಸಿಕೊಂಡಿದೆ. ಕಾಲೇಜಿನ ಸ್ವಚ್ಛತಾ ಕ್ರಿಯಾ ಯೋಜನೆ 2020 21 (ಎಸ್.ಎ.ಪಿ) ಸಮಿತಿಯು “ಸ್ವಚ್ಛತಾ ಶಿಕ್ಷಣ ಹಾಗೂ ಅಭ್ಯಾಸ”ಕ್ಕೆ ನೀಡಿದ ಮಹತ್ವದ ಕೊಡುಗೆಗಾಗಿ ಈ ಪ್ರಶಸ್ತಿಯು ಒಲಿದು ಬಂದಿದೆ.

ಈ ಪ್ರಶಸ್ತಿಗಾಗಿ ದೇಶದಾದ್ಯಂತ ಅನೇಕ ವಿಶ್ವವಿದ್ಯಾನಿಲಯಗಳು ಹಾಗೂ ಕಾಲೇಜುಗಳು ಸ್ಪರ್ಧಿಸಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಪ್ರಶಸ್ತಿಯು ಕಾರ್ಮೆಲ್ ಡಿಗ್ರಿ ಕಾಲೇಜಿಗೆ ಬಂದಿರುವುದು ಅತೀವ ಸಂತೋಷದ ವಿಷಯವಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಭಗಿನಿ ಡಾ.ಸಿಸ್ಟರ್ ಲತಾ ಫರ್ನಾಂಡಿಸ್ ಎ ಸಿ ಅವರು ತಿಳಿಸಿರುತ್ತಾರೆ.
ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಿದ್ಯಾರ್ಥಿಗಳು, ರಾಷ್ಟ್ರೀಯ ಸೇವಾ ಯೋಜನೆ ಯೋಜನಾಧಿಕಾರಿಗಳಾದ ಶ್ರೀಮತಿ ಮಧುರ ಕೆ, ಕುಮಾರಿ ದೀಪ್ತಿ ಡಿಸೋಜಾ, ಹಿಂದಿ ಉಪನ್ಯಾಸಕರಾದ ಶ್ರೀಮತಿ ಚಂದ್ರಿಕಾ ರಾವ್ ರನ್ನ ಒಳಗೊಂಡ ‘ಸ್ವಚ್ಛತಾ ಕ್ರಿಯಾ ಯೋಜನಾ’ ಸಮಿತಿ ( ಎಸ್.ಎ.ಪಿ) ಯ ಅತ್ಯಂತ ಮಹತ್ವಪೂರ್ಣ ಯಶಸ್ವಿ ಕಾರ್ಯಚಟುವಟಿಕೆಗಳನ್ನು ಕಾಲೇಜಿನ ಆಡಳಿತ ಮಂಡಳಿಯು ಶ್ಲಾಘಿಸಿದೆ. ಈ ಪ್ರಶಸ್ತಿಯನ್ನು ದಕ್ಷಿಣಕನ್ನಡ ಜಿಲ್ಲಾಧಿಕಾರಿಯವರು ಪ್ರಧಾನ ಮಾಡಲಿರುವರು

ಇತ್ತೀಚಿನ ಸುದ್ದಿ

ಜಾಹೀರಾತು