1:13 AM Friday3 - May 2024
ಬ್ರೇಕಿಂಗ್ ನ್ಯೂಸ್
ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ…

ಇತ್ತೀಚಿನ ಸುದ್ದಿ

ಕಾರ್ಮೆಲ್ ಡಿಗ್ರಿ ಕಾಲೇಜಿಗೆ “ಒಂದು ಜಿಲ್ಲೆ ಒಂದು ಹಸಿರು ಚಾಂಪಿಯನ್” ಪ್ರಶಸ್ತಿಯ ಗರಿ.

07/05/2021, 15:52

ಮಂಗಳೂರು(reporterkarnatakanews): ಭಾರತ ಸರ್ಕಾರದ ಉನ್ನತ ಶಿಕ್ಷಣ ಸಚಿವಾಲಯ, ಮಹಾತ್ಮ ಗಾಂಧಿ ರಾಷ್ಟ್ರೀಯ ಶಿಕ್ಷಣ ಮಂಡಳಿಯು ಆಯೋಜಿಸಿದ “ಒಂದು ಜಿಲ್ಲೆ ಒಂದು ಹಸಿರು ಚಾಂಪಿಯನ್” (ಒನ್ ಡಿಸ್ಟ್ರಿಕ್ಟ್ ಒನ್ ಗ್ರೀನ್ ಚಾಂಪಿಯನ್) ಪ್ರಶಸ್ತಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂಟ್ವಾಳ ತಾಲೂಕಿನ ಕಾರ್ಮೆಲ್ ಕಾಲೇಜ್ ಮೊಡಂಕಾಪು ಮುಡಿಗೇರಿಸಿಕೊಂಡಿದೆ. ಕಾಲೇಜಿನ ಸ್ವಚ್ಛತಾ ಕ್ರಿಯಾ ಯೋಜನೆ 2020 21 (ಎಸ್.ಎ.ಪಿ) ಸಮಿತಿಯು “ಸ್ವಚ್ಛತಾ ಶಿಕ್ಷಣ ಹಾಗೂ ಅಭ್ಯಾಸ”ಕ್ಕೆ ನೀಡಿದ ಮಹತ್ವದ ಕೊಡುಗೆಗಾಗಿ ಈ ಪ್ರಶಸ್ತಿಯು ಒಲಿದು ಬಂದಿದೆ.

ಈ ಪ್ರಶಸ್ತಿಗಾಗಿ ದೇಶದಾದ್ಯಂತ ಅನೇಕ ವಿಶ್ವವಿದ್ಯಾನಿಲಯಗಳು ಹಾಗೂ ಕಾಲೇಜುಗಳು ಸ್ಪರ್ಧಿಸಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಪ್ರಶಸ್ತಿಯು ಕಾರ್ಮೆಲ್ ಡಿಗ್ರಿ ಕಾಲೇಜಿಗೆ ಬಂದಿರುವುದು ಅತೀವ ಸಂತೋಷದ ವಿಷಯವಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಭಗಿನಿ ಡಾ.ಸಿಸ್ಟರ್ ಲತಾ ಫರ್ನಾಂಡಿಸ್ ಎ ಸಿ ಅವರು ತಿಳಿಸಿರುತ್ತಾರೆ.
ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಿದ್ಯಾರ್ಥಿಗಳು, ರಾಷ್ಟ್ರೀಯ ಸೇವಾ ಯೋಜನೆ ಯೋಜನಾಧಿಕಾರಿಗಳಾದ ಶ್ರೀಮತಿ ಮಧುರ ಕೆ, ಕುಮಾರಿ ದೀಪ್ತಿ ಡಿಸೋಜಾ, ಹಿಂದಿ ಉಪನ್ಯಾಸಕರಾದ ಶ್ರೀಮತಿ ಚಂದ್ರಿಕಾ ರಾವ್ ರನ್ನ ಒಳಗೊಂಡ ‘ಸ್ವಚ್ಛತಾ ಕ್ರಿಯಾ ಯೋಜನಾ’ ಸಮಿತಿ ( ಎಸ್.ಎ.ಪಿ) ಯ ಅತ್ಯಂತ ಮಹತ್ವಪೂರ್ಣ ಯಶಸ್ವಿ ಕಾರ್ಯಚಟುವಟಿಕೆಗಳನ್ನು ಕಾಲೇಜಿನ ಆಡಳಿತ ಮಂಡಳಿಯು ಶ್ಲಾಘಿಸಿದೆ. ಈ ಪ್ರಶಸ್ತಿಯನ್ನು ದಕ್ಷಿಣಕನ್ನಡ ಜಿಲ್ಲಾಧಿಕಾರಿಯವರು ಪ್ರಧಾನ ಮಾಡಲಿರುವರು

ಇತ್ತೀಚಿನ ಸುದ್ದಿ

ಜಾಹೀರಾತು