6:18 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಕಾರ್ಮೆಲ್ ಡಿಗ್ರಿ ಕಾಲೇಜಿಗೆ “ಒಂದು ಜಿಲ್ಲೆ ಒಂದು ಹಸಿರು ಚಾಂಪಿಯನ್” ಪ್ರಶಸ್ತಿಯ ಗರಿ.

07/05/2021, 15:52

ಮಂಗಳೂರು(reporterkarnatakanews): ಭಾರತ ಸರ್ಕಾರದ ಉನ್ನತ ಶಿಕ್ಷಣ ಸಚಿವಾಲಯ, ಮಹಾತ್ಮ ಗಾಂಧಿ ರಾಷ್ಟ್ರೀಯ ಶಿಕ್ಷಣ ಮಂಡಳಿಯು ಆಯೋಜಿಸಿದ “ಒಂದು ಜಿಲ್ಲೆ ಒಂದು ಹಸಿರು ಚಾಂಪಿಯನ್” (ಒನ್ ಡಿಸ್ಟ್ರಿಕ್ಟ್ ಒನ್ ಗ್ರೀನ್ ಚಾಂಪಿಯನ್) ಪ್ರಶಸ್ತಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂಟ್ವಾಳ ತಾಲೂಕಿನ ಕಾರ್ಮೆಲ್ ಕಾಲೇಜ್ ಮೊಡಂಕಾಪು ಮುಡಿಗೇರಿಸಿಕೊಂಡಿದೆ. ಕಾಲೇಜಿನ ಸ್ವಚ್ಛತಾ ಕ್ರಿಯಾ ಯೋಜನೆ 2020 21 (ಎಸ್.ಎ.ಪಿ) ಸಮಿತಿಯು “ಸ್ವಚ್ಛತಾ ಶಿಕ್ಷಣ ಹಾಗೂ ಅಭ್ಯಾಸ”ಕ್ಕೆ ನೀಡಿದ ಮಹತ್ವದ ಕೊಡುಗೆಗಾಗಿ ಈ ಪ್ರಶಸ್ತಿಯು ಒಲಿದು ಬಂದಿದೆ.

ಈ ಪ್ರಶಸ್ತಿಗಾಗಿ ದೇಶದಾದ್ಯಂತ ಅನೇಕ ವಿಶ್ವವಿದ್ಯಾನಿಲಯಗಳು ಹಾಗೂ ಕಾಲೇಜುಗಳು ಸ್ಪರ್ಧಿಸಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಪ್ರಶಸ್ತಿಯು ಕಾರ್ಮೆಲ್ ಡಿಗ್ರಿ ಕಾಲೇಜಿಗೆ ಬಂದಿರುವುದು ಅತೀವ ಸಂತೋಷದ ವಿಷಯವಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಭಗಿನಿ ಡಾ.ಸಿಸ್ಟರ್ ಲತಾ ಫರ್ನಾಂಡಿಸ್ ಎ ಸಿ ಅವರು ತಿಳಿಸಿರುತ್ತಾರೆ.
ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಿದ್ಯಾರ್ಥಿಗಳು, ರಾಷ್ಟ್ರೀಯ ಸೇವಾ ಯೋಜನೆ ಯೋಜನಾಧಿಕಾರಿಗಳಾದ ಶ್ರೀಮತಿ ಮಧುರ ಕೆ, ಕುಮಾರಿ ದೀಪ್ತಿ ಡಿಸೋಜಾ, ಹಿಂದಿ ಉಪನ್ಯಾಸಕರಾದ ಶ್ರೀಮತಿ ಚಂದ್ರಿಕಾ ರಾವ್ ರನ್ನ ಒಳಗೊಂಡ ‘ಸ್ವಚ್ಛತಾ ಕ್ರಿಯಾ ಯೋಜನಾ’ ಸಮಿತಿ ( ಎಸ್.ಎ.ಪಿ) ಯ ಅತ್ಯಂತ ಮಹತ್ವಪೂರ್ಣ ಯಶಸ್ವಿ ಕಾರ್ಯಚಟುವಟಿಕೆಗಳನ್ನು ಕಾಲೇಜಿನ ಆಡಳಿತ ಮಂಡಳಿಯು ಶ್ಲಾಘಿಸಿದೆ. ಈ ಪ್ರಶಸ್ತಿಯನ್ನು ದಕ್ಷಿಣಕನ್ನಡ ಜಿಲ್ಲಾಧಿಕಾರಿಯವರು ಪ್ರಧಾನ ಮಾಡಲಿರುವರು

ಇತ್ತೀಚಿನ ಸುದ್ದಿ

ಜಾಹೀರಾತು