10:28 AM Thursday6 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಆಲಂಕಾರು: ಹೆಡ್‌ಲೈಟ್ ಇಲ್ಲದೇ ಕೆಎಸ್ಸಾರ್ಟಿಸಿ  ಬಸ್ ಓಡಿಸಿದ ಚಾಲಕ!: ಪ್ರಯಾಣಿಕರ ಪ್ರಾಣ ಜತೆ ಚೆಲ್ಲಾಟ!!

12/04/2022, 22:43

ಕಡಬ(reporterkarnataka.com): ಬಸ್ ಹೆಡ್‌ಲೈಟ್ ಇಲ್ಲದೇ 10 ಕಿ.ಮೀ. ಗೂ ಅಧಿಕ ದೂರದವರೆಗೆ ಬಸ್ ಚಲಾಯಿಸಿದ ಕೆಎಸ್‌ಆರ್‌ಟಿಸಿ ಚಾಲಕ ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟವಾಡಿದ ಘಟನೆ ಸೋಮವಾರ ರಾತ್ರಿ ಆಲಂಕಾರಿನಲ್ಲಿ ನಡೆದಿದೆ.

ಉಪ್ಪಿನಂಗಡಿಯಿಂದ ರಾತ್ರಿ 7.15ಕ್ಕೆ ಕಡಬ ಕಡೆಗೆ ಹೊರಟ ಕಾರವಾರ – ಕುಕ್ಕೆ ಸುಬ್ರಹ್ಮಣ್ಯ ಎಕ್ಸ್‌ಪ್ರೆಸ್ ಬಸ್‌ನಲ್ಲಿ ಮುಂಭಾಗದ ನಾಲ್ಕು ಲೈಟ್‌ಗಳೂ ಕೂಡಾ ಕೆಟ್ಟುಹೋಗಿತ್ತು.

ಆದರೂ ಬಸ್ಸಿನ ಚಾಲಕ ತನ್ನ ಬೇಜವಾಬ್ದಾರಿಯಿಂದಾಗಿ ಉಪ್ಪಿನಂಗಡಿಯಿಂದ ಹೊರಟಿದ್ದಾನೆ. ಕತ್ತಲೆಯಲ್ಲೇ ಬಸ್ಸನ್ನು ಚಲಾಯಿಸಿದ ಚಾಲಕ ಆಲಂಕಾರುವರೆಗೆ ಬಸ್ಸು ಚಲಾಯಿಸಿದ್ದಾನೆ. ಬಸ್ಸಿನಲ್ಲಿ ಸುಮಾರು ಐವತ್ತರಷ್ಟು ಪ್ರಯಾಣಿಕರಿದ್ದರು. ಈ ನಡುವೆ ಬಸ್ಸಿನ ಒಳಗಿನಿಂದ ಪ್ರಯಾಣಿಕರೋರ್ವರು ವೀಡಿಯೋ ಮಾಡುವುದನ್ನು ಗಮನಿಸಿದ ಚಾಲಕ ಹಾಗೂ ನಿರ್ವಾಹಕ ಆಲಂಕಾರು ತಲುಪುತ್ತಿದ್ದಂತೆ ಒಂದು ಲೈಟನ್ನು ಸರಿಪಡಿಸಿ ಬಸ್ಸನ್ನು ಚಲಾಯಿಸಿದ್ದಾರೆ.

ಬಸ್ಸಿನಲ್ಲಿ ಪ್ರಯಾಣಿಕರನ್ನು ಕಳುಹಿಸುವ ಬದಲು ಚಾಲಕ ಮಾಡಿರುವ ದುಸ್ಸಾಹಸಕ್ಕೆ ಬಸ್ಸಿನಲ್ಲಿದ್ದ ಪ್ರಯಾಣಿಕರು ಸಿಟ್ಟಾಗಿದ್ದರು.

ಒಟ್ಟಿನಲ್ಲಿ ಸಾರಿಗೆ ಅಧಿಕಾರಿಗಳ ಬೇಜಾವಾಬ್ದಾರಿತನದಿಂದ ಪ್ರಯಾಣಿಕರು ಜೀವಭಯದಿಂದ ಸಂಚರಿಸುವಂತಾಗಿದೆ. ಇವರ ನಿರ್ಲಕ್ಷ್ಯತನದ ಬಗ್ಗೆ ಗಮನ ಹರಿಸಿ ಸರ್ಕಾರ ಎಚ್ಚೆತ್ತುಕೊಳ್ಳಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು