12:37 PM Tuesday17 - February 2026
ಬ್ರೇಕಿಂಗ್ ನ್ಯೂಸ್
ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,…

ಇತ್ತೀಚಿನ ಸುದ್ದಿ

ಆಲಂಕಾರು: ಹೆಡ್‌ಲೈಟ್ ಇಲ್ಲದೇ ಕೆಎಸ್ಸಾರ್ಟಿಸಿ  ಬಸ್ ಓಡಿಸಿದ ಚಾಲಕ!: ಪ್ರಯಾಣಿಕರ ಪ್ರಾಣ ಜತೆ ಚೆಲ್ಲಾಟ!!

12/04/2022, 22:43

ಕಡಬ(reporterkarnataka.com): ಬಸ್ ಹೆಡ್‌ಲೈಟ್ ಇಲ್ಲದೇ 10 ಕಿ.ಮೀ. ಗೂ ಅಧಿಕ ದೂರದವರೆಗೆ ಬಸ್ ಚಲಾಯಿಸಿದ ಕೆಎಸ್‌ಆರ್‌ಟಿಸಿ ಚಾಲಕ ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟವಾಡಿದ ಘಟನೆ ಸೋಮವಾರ ರಾತ್ರಿ ಆಲಂಕಾರಿನಲ್ಲಿ ನಡೆದಿದೆ.

ಉಪ್ಪಿನಂಗಡಿಯಿಂದ ರಾತ್ರಿ 7.15ಕ್ಕೆ ಕಡಬ ಕಡೆಗೆ ಹೊರಟ ಕಾರವಾರ – ಕುಕ್ಕೆ ಸುಬ್ರಹ್ಮಣ್ಯ ಎಕ್ಸ್‌ಪ್ರೆಸ್ ಬಸ್‌ನಲ್ಲಿ ಮುಂಭಾಗದ ನಾಲ್ಕು ಲೈಟ್‌ಗಳೂ ಕೂಡಾ ಕೆಟ್ಟುಹೋಗಿತ್ತು.

ಆದರೂ ಬಸ್ಸಿನ ಚಾಲಕ ತನ್ನ ಬೇಜವಾಬ್ದಾರಿಯಿಂದಾಗಿ ಉಪ್ಪಿನಂಗಡಿಯಿಂದ ಹೊರಟಿದ್ದಾನೆ. ಕತ್ತಲೆಯಲ್ಲೇ ಬಸ್ಸನ್ನು ಚಲಾಯಿಸಿದ ಚಾಲಕ ಆಲಂಕಾರುವರೆಗೆ ಬಸ್ಸು ಚಲಾಯಿಸಿದ್ದಾನೆ. ಬಸ್ಸಿನಲ್ಲಿ ಸುಮಾರು ಐವತ್ತರಷ್ಟು ಪ್ರಯಾಣಿಕರಿದ್ದರು. ಈ ನಡುವೆ ಬಸ್ಸಿನ ಒಳಗಿನಿಂದ ಪ್ರಯಾಣಿಕರೋರ್ವರು ವೀಡಿಯೋ ಮಾಡುವುದನ್ನು ಗಮನಿಸಿದ ಚಾಲಕ ಹಾಗೂ ನಿರ್ವಾಹಕ ಆಲಂಕಾರು ತಲುಪುತ್ತಿದ್ದಂತೆ ಒಂದು ಲೈಟನ್ನು ಸರಿಪಡಿಸಿ ಬಸ್ಸನ್ನು ಚಲಾಯಿಸಿದ್ದಾರೆ.

ಬಸ್ಸಿನಲ್ಲಿ ಪ್ರಯಾಣಿಕರನ್ನು ಕಳುಹಿಸುವ ಬದಲು ಚಾಲಕ ಮಾಡಿರುವ ದುಸ್ಸಾಹಸಕ್ಕೆ ಬಸ್ಸಿನಲ್ಲಿದ್ದ ಪ್ರಯಾಣಿಕರು ಸಿಟ್ಟಾಗಿದ್ದರು.

ಒಟ್ಟಿನಲ್ಲಿ ಸಾರಿಗೆ ಅಧಿಕಾರಿಗಳ ಬೇಜಾವಾಬ್ದಾರಿತನದಿಂದ ಪ್ರಯಾಣಿಕರು ಜೀವಭಯದಿಂದ ಸಂಚರಿಸುವಂತಾಗಿದೆ. ಇವರ ನಿರ್ಲಕ್ಷ್ಯತನದ ಬಗ್ಗೆ ಗಮನ ಹರಿಸಿ ಸರ್ಕಾರ ಎಚ್ಚೆತ್ತುಕೊಳ್ಳಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು