3:07 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ವೇಶ್ಯಾವಾಟಿಕೆ ಸ್ಥಳದಲ್ಲಿ ಗ್ರಾಹಕ ಸಿಕ್ಕಿಬಿದ್ದರೆ ಬಂಧಿಸುವಂತಿಲ್ಲ: ಕರ್ನಾಟಕ ಹೈಕೋರ್ಟ್ ತೀರ್ಪು 

13/04/2022, 09:43

ಬೆಂಗಳೂರು(reporterkarnataka.com): ವೇಶ್ಯಾವಾಟಿಕೆ ನಡೆಯುವ ಸ್ಥಳದಲ್ಲಿ ಓರ್ವ ವ್ಯಕ್ತಿ ಪತ್ತೆಯಾದರೆ ಆತನ ವಿರುದ್ಧ ಅನೈತಿಕ ಕಳ್ಳಸಾಗಣೆಯ ಅಪರಾಧಗಳಿಗಾಗಿ ಕಾನೂನು ಕ್ರಮ ಜರುಗಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.

ಗ್ರಾಹಕರನ್ನು ಕ್ರಿಮಿನಲ್ ಮೊಕದ್ದಮೆಗೆ ಒಳಪಡಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್​ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಆದೇಶಿಸಿದ್ದಾರೆ.

ಹೈಕೋರ್ಟ್​ಗೆ ಓರ್ವ ಅರ್ಜಿ ಸಲ್ಲಿಸಿದ್ದು, ಅದರಲ್ಲಿ ತಾನು ವೇಶ್ಯಾಗೃಹಕ್ಕೆ ಹೋದಾಗಲೇ ಅಲ್ಲಿ ದಾಳಿ ನಡೆದಿತ್ತು. ಹೀಗಾಗಿ, ಆತನನ್ನು ಕೂಡ ಬಂಧಿಸಿ, ಆತನ ವಿರುದ್ದ ಸೆಕ್ಷನ್ 3 (ವೇಶ್ಯಾಗೃಹ ಇರಿಸುವ ಶಿಕ್ಷೆ ಅಥವಾ ಆವರಣವನ್ನು ವೇಶ್ಯಾವಾಟಿಕೆಯಾಗಿ ಬಳಸಲು ಅನುಮತಿ), ಐಪಿಸಿ ಸೆಕ್ಷನ್ 4 (ವೇಶ್ಯಾವಾಟಿಕೆಯ ಗಳಿಕೆಯ ಮೇಲೆ ಜೀವನ), ಸೆಕ್ಷನ್ 5 (ವೇಶ್ಯಾವಾಟಿಕೆಗಾಗಿ ವ್ಯಕ್ತಿಯನ್ನು ಪ್ರೇರೇಪಿಸುವುದು ಅಥವಾ ಕರೆದೊಯ್ಯುವುದು) ಮತ್ತು ಅನೈತಿಕ ಸಂಚಾರ ತಡೆ ಕಾಯ್ದೆ (ITPA) ಮತ್ತು ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 370 (ವ್ಯಕ್ತಿಗಳ ಕಳ್ಳಸಾಗಣೆ) ಸೆಕ್ಷನ್ 6 (ವೇಶ್ಯಾವಾಟಿಕೆ ನಡೆಸುವ ಆವರಣದಲ್ಲಿ ವ್ಯಕ್ತಿಯನ್ನು ಬಂಧಿಸುವುದು) ಕೇಸ್ ದಾಖಲಿಸಲಾಗಿತ್ತು.

ಹೀಗಾಗಿ ತನ್ನ ವಿರುದ್ಧದ ವಿಚಾರಣೆಯನ್ನು ರದ್ದುಗೊಳಿಸುವಂತೆ ಕೋರಿ ಅರ್ಜಿದಾರ ಹೈಕೋರ್ಟ್​ ಮೊರೆ ಹೋಗಿದ್ದರು.

ಇದೀಗ ವೇಶ್ಯಾವಾಟಿಕೆ ನಡೆಯುವ ಸ್ಥಳದಲ್ಲಿರುವ ಗ್ರಾಹಕರು ವೇಶ್ಯಾಗೃಹವನ್ನು ಇಟ್ಟುಕೊಳ್ಳುವುದಿಲ್ಲ ಅಥವಾ ಆವರಣವನ್ನು ವೇಶ್ಯಾವಾಟಿಕೆಯಾಗಿ ಬಳಸಲು ಅನುಮತಿಸುವುದಿಲ್ಲ, ವೇಶ್ಯಾವಾಟಿಕೆಗೆ ಪ್ರೇರೇಪಿಸುವುದೂ ಇಲ್ಲ ಎಂಬ ಅಂಶವನ್ನು ಗಮನಿಸಿದ ಹೈಕೋರ್ಟ್​ ಆ ಅರ್ಜಿದಾರನ ಅರ್ಜಿಯನ್ನು ಅಂಗೀಕರಿಸಿತು ಮತ್ತು ಅರ್ಜಿದಾರರ ವಿರುದ್ಧದ ಕ್ರಿಮಿನಲ್ ಪ್ರಕ್ರಿಯೆಗಳನ್ನು ರದ್ದುಗೊಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು