7:00 PM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ವೇಶ್ಯಾವಾಟಿಕೆ ಸ್ಥಳದಲ್ಲಿ ಗ್ರಾಹಕ ಸಿಕ್ಕಿಬಿದ್ದರೆ ಬಂಧಿಸುವಂತಿಲ್ಲ: ಕರ್ನಾಟಕ ಹೈಕೋರ್ಟ್ ತೀರ್ಪು 

13/04/2022, 09:43

ಬೆಂಗಳೂರು(reporterkarnataka.com): ವೇಶ್ಯಾವಾಟಿಕೆ ನಡೆಯುವ ಸ್ಥಳದಲ್ಲಿ ಓರ್ವ ವ್ಯಕ್ತಿ ಪತ್ತೆಯಾದರೆ ಆತನ ವಿರುದ್ಧ ಅನೈತಿಕ ಕಳ್ಳಸಾಗಣೆಯ ಅಪರಾಧಗಳಿಗಾಗಿ ಕಾನೂನು ಕ್ರಮ ಜರುಗಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.

ಗ್ರಾಹಕರನ್ನು ಕ್ರಿಮಿನಲ್ ಮೊಕದ್ದಮೆಗೆ ಒಳಪಡಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್​ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಆದೇಶಿಸಿದ್ದಾರೆ.

ಹೈಕೋರ್ಟ್​ಗೆ ಓರ್ವ ಅರ್ಜಿ ಸಲ್ಲಿಸಿದ್ದು, ಅದರಲ್ಲಿ ತಾನು ವೇಶ್ಯಾಗೃಹಕ್ಕೆ ಹೋದಾಗಲೇ ಅಲ್ಲಿ ದಾಳಿ ನಡೆದಿತ್ತು. ಹೀಗಾಗಿ, ಆತನನ್ನು ಕೂಡ ಬಂಧಿಸಿ, ಆತನ ವಿರುದ್ದ ಸೆಕ್ಷನ್ 3 (ವೇಶ್ಯಾಗೃಹ ಇರಿಸುವ ಶಿಕ್ಷೆ ಅಥವಾ ಆವರಣವನ್ನು ವೇಶ್ಯಾವಾಟಿಕೆಯಾಗಿ ಬಳಸಲು ಅನುಮತಿ), ಐಪಿಸಿ ಸೆಕ್ಷನ್ 4 (ವೇಶ್ಯಾವಾಟಿಕೆಯ ಗಳಿಕೆಯ ಮೇಲೆ ಜೀವನ), ಸೆಕ್ಷನ್ 5 (ವೇಶ್ಯಾವಾಟಿಕೆಗಾಗಿ ವ್ಯಕ್ತಿಯನ್ನು ಪ್ರೇರೇಪಿಸುವುದು ಅಥವಾ ಕರೆದೊಯ್ಯುವುದು) ಮತ್ತು ಅನೈತಿಕ ಸಂಚಾರ ತಡೆ ಕಾಯ್ದೆ (ITPA) ಮತ್ತು ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 370 (ವ್ಯಕ್ತಿಗಳ ಕಳ್ಳಸಾಗಣೆ) ಸೆಕ್ಷನ್ 6 (ವೇಶ್ಯಾವಾಟಿಕೆ ನಡೆಸುವ ಆವರಣದಲ್ಲಿ ವ್ಯಕ್ತಿಯನ್ನು ಬಂಧಿಸುವುದು) ಕೇಸ್ ದಾಖಲಿಸಲಾಗಿತ್ತು.

ಹೀಗಾಗಿ ತನ್ನ ವಿರುದ್ಧದ ವಿಚಾರಣೆಯನ್ನು ರದ್ದುಗೊಳಿಸುವಂತೆ ಕೋರಿ ಅರ್ಜಿದಾರ ಹೈಕೋರ್ಟ್​ ಮೊರೆ ಹೋಗಿದ್ದರು.

ಇದೀಗ ವೇಶ್ಯಾವಾಟಿಕೆ ನಡೆಯುವ ಸ್ಥಳದಲ್ಲಿರುವ ಗ್ರಾಹಕರು ವೇಶ್ಯಾಗೃಹವನ್ನು ಇಟ್ಟುಕೊಳ್ಳುವುದಿಲ್ಲ ಅಥವಾ ಆವರಣವನ್ನು ವೇಶ್ಯಾವಾಟಿಕೆಯಾಗಿ ಬಳಸಲು ಅನುಮತಿಸುವುದಿಲ್ಲ, ವೇಶ್ಯಾವಾಟಿಕೆಗೆ ಪ್ರೇರೇಪಿಸುವುದೂ ಇಲ್ಲ ಎಂಬ ಅಂಶವನ್ನು ಗಮನಿಸಿದ ಹೈಕೋರ್ಟ್​ ಆ ಅರ್ಜಿದಾರನ ಅರ್ಜಿಯನ್ನು ಅಂಗೀಕರಿಸಿತು ಮತ್ತು ಅರ್ಜಿದಾರರ ವಿರುದ್ಧದ ಕ್ರಿಮಿನಲ್ ಪ್ರಕ್ರಿಯೆಗಳನ್ನು ರದ್ದುಗೊಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು