4:08 PM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಸಚಿವ ಈಶ್ವರಪ್ಪ ಕೊರಳಿಗೆ ಬಿಗಿಯಾಗುತ್ತಿರುವ ಸಂತೋಷ್ ಆತ್ಮಹತ್ಯೆಯ ಉರುಳು: ಸಂಜೆಯೊಳಗೆ ರಾಜೀನಾಮೆ?

13/04/2022, 11:33

ಮೈಸೂರು (reporterkarnataka.com):  ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಪ್ರವಾಸದಲ್ಲಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ .ಈಶ್ವರಪ್ಪ ಅವರು ಕಾರ್ಯಕ್ರಮವನ್ನು ಮೊಟಕುಗೊಳಿಸಿ ಬೆಂಗಳೂರಿಗೆ ದೌಡಾಯಿಸಿದ್ದಾರೆ. ಸಚಿವರು ರಾಜ್ಯಪಾಲರನ್ನು ಭೇಟಿಯಾಗಿ ಸಂಜೆಯೊಳಗೆ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.

ಇದಕ್ಕೆ ಮುನ್ನ ಈಶ್ವರಪ್ಪ ಅವರು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಈ ಮಧ್ಯೆ

ಮೊಬೈಲ್‌ ಕರೆಯೊಂದರ ಹಿನ್ನೆಲೆಯಲ್ಲಿ ತಮ್ಮ ಪ್ರವಾಸ ಮೊಟಕುಗೊಳಿಸಿದ ಈಶ್ವರಪ್ಪ ಅವರು ಮೈಸೂರಿನಿಂದ ಬೆಂಗಳೂರಿನತ್ತ ದೌಡಾಯಿಸಿದ್ದಾರೆ.

ಮೈಸೂರಿನ ಲಲಿತ್ ಮಹಲ್ ಪ್ಯಾಲೇಸ್ ನಲ್ಲಿ ಬಿಜೆಪಿಯ ವಿಭಾಗೀಯ ಮಟ್ಟದ ಸಭೆ ನಡೆಯುತ್ತಿರುವ ಹಿನ್ನಲೆಯಲ್ಲಿ ಈಶ್ವರಪ್ಪ ಸೇರಿದಂತೆ
ಬಿಜೆಪಿಯ ಹಲವು ನಾಯಕರು ಅಲ್ಲಿದ್ದರು.

ಈ ವೇಳೆ ಮೊಬೈಲ್ ಕರೆಯೊಂದು ಸಚಿವರಿಗೆ ಬಂದಿದ್ದು, ಬಳಿಕ ದಿಢೀರನೆ ಕಾರಿನಲ್ಲಿ ಬೆಂಗಳೂರಿನತ್ತ ಹೊರಟಿದ್ದಾರೆ ಎಂದು ತಿಳಿದು ಬಂದಿದೆ.

ಸಂತೋಷ್‌ ಪಾಟೀಲ ಆತ್ಮಹತ್ಯೆ ಪ್ರಕರಣದಲ್ಲಿ ನೇರವಾಗಿ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಾಗಿರುವುದರಿಂದ ಹೈಕಮಾಂಡ್ ಸೂಚನೆಯ ಮೇರೆಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡುವ ಸಾಧ್ಯತೆ ಇದೆ ಎಂಬ ಮಾತು ಮಾತು ಬಿಜೆಪಿಯೊಳಗೆ ಹರಿದಾಡುತ್ತಿದೆ.

 

ಇತ್ತೀಚಿನ ಸುದ್ದಿ

ಜಾಹೀರಾತು