7:09 AM Tuesday17 - February 2026
ಬ್ರೇಕಿಂಗ್ ನ್ಯೂಸ್
ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,…

ಇತ್ತೀಚಿನ ಸುದ್ದಿ

ಸಚಿವ ಈಶ್ವರಪ್ಪ ಕೊರಳಿಗೆ ಬಿಗಿಯಾಗುತ್ತಿರುವ ಸಂತೋಷ್ ಆತ್ಮಹತ್ಯೆಯ ಉರುಳು: ಸಂಜೆಯೊಳಗೆ ರಾಜೀನಾಮೆ?

13/04/2022, 11:33

ಮೈಸೂರು (reporterkarnataka.com):  ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಪ್ರವಾಸದಲ್ಲಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ .ಈಶ್ವರಪ್ಪ ಅವರು ಕಾರ್ಯಕ್ರಮವನ್ನು ಮೊಟಕುಗೊಳಿಸಿ ಬೆಂಗಳೂರಿಗೆ ದೌಡಾಯಿಸಿದ್ದಾರೆ. ಸಚಿವರು ರಾಜ್ಯಪಾಲರನ್ನು ಭೇಟಿಯಾಗಿ ಸಂಜೆಯೊಳಗೆ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.

ಇದಕ್ಕೆ ಮುನ್ನ ಈಶ್ವರಪ್ಪ ಅವರು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಈ ಮಧ್ಯೆ

ಮೊಬೈಲ್‌ ಕರೆಯೊಂದರ ಹಿನ್ನೆಲೆಯಲ್ಲಿ ತಮ್ಮ ಪ್ರವಾಸ ಮೊಟಕುಗೊಳಿಸಿದ ಈಶ್ವರಪ್ಪ ಅವರು ಮೈಸೂರಿನಿಂದ ಬೆಂಗಳೂರಿನತ್ತ ದೌಡಾಯಿಸಿದ್ದಾರೆ.

ಮೈಸೂರಿನ ಲಲಿತ್ ಮಹಲ್ ಪ್ಯಾಲೇಸ್ ನಲ್ಲಿ ಬಿಜೆಪಿಯ ವಿಭಾಗೀಯ ಮಟ್ಟದ ಸಭೆ ನಡೆಯುತ್ತಿರುವ ಹಿನ್ನಲೆಯಲ್ಲಿ ಈಶ್ವರಪ್ಪ ಸೇರಿದಂತೆ
ಬಿಜೆಪಿಯ ಹಲವು ನಾಯಕರು ಅಲ್ಲಿದ್ದರು.

ಈ ವೇಳೆ ಮೊಬೈಲ್ ಕರೆಯೊಂದು ಸಚಿವರಿಗೆ ಬಂದಿದ್ದು, ಬಳಿಕ ದಿಢೀರನೆ ಕಾರಿನಲ್ಲಿ ಬೆಂಗಳೂರಿನತ್ತ ಹೊರಟಿದ್ದಾರೆ ಎಂದು ತಿಳಿದು ಬಂದಿದೆ.

ಸಂತೋಷ್‌ ಪಾಟೀಲ ಆತ್ಮಹತ್ಯೆ ಪ್ರಕರಣದಲ್ಲಿ ನೇರವಾಗಿ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಾಗಿರುವುದರಿಂದ ಹೈಕಮಾಂಡ್ ಸೂಚನೆಯ ಮೇರೆಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡುವ ಸಾಧ್ಯತೆ ಇದೆ ಎಂಬ ಮಾತು ಮಾತು ಬಿಜೆಪಿಯೊಳಗೆ ಹರಿದಾಡುತ್ತಿದೆ.

 

ಇತ್ತೀಚಿನ ಸುದ್ದಿ

ಜಾಹೀರಾತು