9:31 AM Wednesday10 - June 2026
ಬ್ರೇಕಿಂಗ್ ನ್ಯೂಸ್
Bangalore | ನೌಕರಿ ಕೊಡಿಸುವುದಾಗಿ 40 ಮಂದಿಗೆ 5.3 ಕೋಟಿ ವಂಚನೆ: ಅಪ್ಪ… ಶಕ್ತಿ ಯೋಜನೆಯಿಂದ ವ್ಯಾಪಾರ ನಷ್ಟ, ಸಾಲಗಾರರ ಕಾಟ: ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು… ರಾಜ್ಯಸಭೆ ಚುನಾವಣೆ: ರಾಜ್ಯದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್‌ನ್ಯೂಸ್: ಆರೋಗ್ಯ ಸಚಿವ ಖಾದರ್ ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು…

ಇತ್ತೀಚಿನ ಸುದ್ದಿ

ಭೀಕರ ಚಂಡಮಾರುತಕ್ಕೆ ಫಿಲಿಪೈನ್ಸ್‌ ತತ್ತರ; ಮಳೆ, ಭೂ ಕುಸಿತಕ್ಕೆ 58ಕ್ಕೂ ಹೆಚ್ಚು ಮಂದಿ ಸಾವು

14/04/2022, 00:39

ಮನಿಲಾ(reporterkarnataka.com):
ಭೀಕರ ಪ್ರಾಕೃತಿಕ ವಿಕೋಪದಿಂದ ಫಿಲಿಪೈನ್ಸ್‌ ದ್ವೀಪಸಮೂಹವು ತತ್ತರಿಸಿ ಹೋಗುತ್ತಿದೆ. ಮಳೆ- ಭೂಕುಸಿತ ಮತ್ತು ಪ್ರವಾಹದಿಂದಾಗಿ ಈ ವರೆಗೆ 58ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

ಫಿಲಿಪೈನ್ಸ್‌ಗೆ ಅಪ್ಪಳಿಸಿರುವ ಉಷ್ಣವಲಯದ ಚಂಡಮಾರುತವಾದ ಮೇಗಿಯು ಭಯಾನಕ ಅವಘಡಗಳನ್ನು ಸೃಷ್ಟಿ ಮಾಡುತ್ತಿದೆ. 85 ಕಿಮೀ ವೇಗದಲ್ಲಿ ಬೀಸುತ್ತಿರುವ ಚಂಡಮಾರುತದ ಪ್ರಭಾವದಿಂದಾಗಿ ಭಾರೀ ಮಳೆಯೊಂದಿಗೆ ತೀವ್ರಗತಿಯಲ್ಲಿ ಭೂಕುಸಿತ ಸಂಭವಿಸುತ್ತಿದ್ದು, ಅದು ಪ್ರವಾಹ ರೂಪದಲ್ಲಿ ಮುಂದುವರೆದು ಹಳ್ಳಿಹಳ್ಳಿಗಳು ಮಣ್ಣಿನಡಿ ಮುಚ್ಚಿಹೋಗುತ್ತಿವೆ. ರಕ್ಷಣಾ ಪಡೆಗಳು ಜನರ ರಕ್ಷಣಾ ಕಾರ್ಯದಲ್ಲಿ ನಿರಂತರವಾಗಿ ತೊಡಗಿವೆ. ದೊಡ್ಡದೊಡ್ಡ ಬೆಟ್ಟ ಗುಡ್ಡಗಳು ಕುಸಿಯುವ ಜೊತೆಗೆ ಚಂಡಮಾರುತದ ರಭಸಕ್ಕೆ ಮಣ್ಣು-ಕಲ್ಲುಗಳು ತೂರಿಬಂದು ಎಲ್ಲೆಡೆ ಅಪ್ಪಳಿಸುತ್ತಿವೆ.

ಬೇಬೇ ಸಿಟಿಯೊಂದರಲ್ಲೇ ಕುಸಿದ ಮಣ್ಣಿನಡಿ ಸಿಲುಕಿ 47 ಜನರು ಸಾವನ್ನಪ್ಪಿದ್ದಾರೆ ಮತ್ತು 27 ಮಂದಿ ಕಾಣೆಯಾಗಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಜೊತೆಗೆ 100 ಜನರು ಗಾಯಗೊಂಡಿದ್ದಾರೆ.

ಲೇಯ್ಟ್‌ನಲ್ಲಿರುವ ಪಿಲಾರ್ ಗ್ರಾಮದಲ್ಲಿ ಭೂಕುಸಿತವು ಹೆಚ್ಚಿನ ಹಾನಿ ಮಾಡಿದ್ದು, ಹಲವು ಮನೆಗಳು ಮನೆಗಳನ್ನು ಸಮುದ್ರಕ್ಕೆ ಕೊಚ್ಚಿ ಹೋಗಿವೆ. ಅಲ್ಲಿನ ಕರಾವಳಿ ಪ್ರದೇಶದಿಂದ ಸುಮಾರು 400 ಜನರನ್ನು ರಕ್ಷಣಾ ಪಡೆಗಳು ದೋಣಿ ಮೂಲಕ ರಕ್ಷಿಸುವ ಕಾರ್ಯದಲ್ಲಿ ತೊಡಗಿವೆ. ಇನ್ನೂ ಹಲವಾರು ನಗರಗಳಲ್ಲಿ ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು