8:37 AM Sunday28 - December 2025
ಬ್ರೇಕಿಂಗ್ ನ್ಯೂಸ್
ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:…

ಇತ್ತೀಚಿನ ಸುದ್ದಿ

ಭೀಕರ ಚಂಡಮಾರುತಕ್ಕೆ ಫಿಲಿಪೈನ್ಸ್‌ ತತ್ತರ; ಮಳೆ, ಭೂ ಕುಸಿತಕ್ಕೆ 58ಕ್ಕೂ ಹೆಚ್ಚು ಮಂದಿ ಸಾವು

14/04/2022, 00:39

ಮನಿಲಾ(reporterkarnataka.com):
ಭೀಕರ ಪ್ರಾಕೃತಿಕ ವಿಕೋಪದಿಂದ ಫಿಲಿಪೈನ್ಸ್‌ ದ್ವೀಪಸಮೂಹವು ತತ್ತರಿಸಿ ಹೋಗುತ್ತಿದೆ. ಮಳೆ- ಭೂಕುಸಿತ ಮತ್ತು ಪ್ರವಾಹದಿಂದಾಗಿ ಈ ವರೆಗೆ 58ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

ಫಿಲಿಪೈನ್ಸ್‌ಗೆ ಅಪ್ಪಳಿಸಿರುವ ಉಷ್ಣವಲಯದ ಚಂಡಮಾರುತವಾದ ಮೇಗಿಯು ಭಯಾನಕ ಅವಘಡಗಳನ್ನು ಸೃಷ್ಟಿ ಮಾಡುತ್ತಿದೆ. 85 ಕಿಮೀ ವೇಗದಲ್ಲಿ ಬೀಸುತ್ತಿರುವ ಚಂಡಮಾರುತದ ಪ್ರಭಾವದಿಂದಾಗಿ ಭಾರೀ ಮಳೆಯೊಂದಿಗೆ ತೀವ್ರಗತಿಯಲ್ಲಿ ಭೂಕುಸಿತ ಸಂಭವಿಸುತ್ತಿದ್ದು, ಅದು ಪ್ರವಾಹ ರೂಪದಲ್ಲಿ ಮುಂದುವರೆದು ಹಳ್ಳಿಹಳ್ಳಿಗಳು ಮಣ್ಣಿನಡಿ ಮುಚ್ಚಿಹೋಗುತ್ತಿವೆ. ರಕ್ಷಣಾ ಪಡೆಗಳು ಜನರ ರಕ್ಷಣಾ ಕಾರ್ಯದಲ್ಲಿ ನಿರಂತರವಾಗಿ ತೊಡಗಿವೆ. ದೊಡ್ಡದೊಡ್ಡ ಬೆಟ್ಟ ಗುಡ್ಡಗಳು ಕುಸಿಯುವ ಜೊತೆಗೆ ಚಂಡಮಾರುತದ ರಭಸಕ್ಕೆ ಮಣ್ಣು-ಕಲ್ಲುಗಳು ತೂರಿಬಂದು ಎಲ್ಲೆಡೆ ಅಪ್ಪಳಿಸುತ್ತಿವೆ.

ಬೇಬೇ ಸಿಟಿಯೊಂದರಲ್ಲೇ ಕುಸಿದ ಮಣ್ಣಿನಡಿ ಸಿಲುಕಿ 47 ಜನರು ಸಾವನ್ನಪ್ಪಿದ್ದಾರೆ ಮತ್ತು 27 ಮಂದಿ ಕಾಣೆಯಾಗಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಜೊತೆಗೆ 100 ಜನರು ಗಾಯಗೊಂಡಿದ್ದಾರೆ.

ಲೇಯ್ಟ್‌ನಲ್ಲಿರುವ ಪಿಲಾರ್ ಗ್ರಾಮದಲ್ಲಿ ಭೂಕುಸಿತವು ಹೆಚ್ಚಿನ ಹಾನಿ ಮಾಡಿದ್ದು, ಹಲವು ಮನೆಗಳು ಮನೆಗಳನ್ನು ಸಮುದ್ರಕ್ಕೆ ಕೊಚ್ಚಿ ಹೋಗಿವೆ. ಅಲ್ಲಿನ ಕರಾವಳಿ ಪ್ರದೇಶದಿಂದ ಸುಮಾರು 400 ಜನರನ್ನು ರಕ್ಷಣಾ ಪಡೆಗಳು ದೋಣಿ ಮೂಲಕ ರಕ್ಷಿಸುವ ಕಾರ್ಯದಲ್ಲಿ ತೊಡಗಿವೆ. ಇನ್ನೂ ಹಲವಾರು ನಗರಗಳಲ್ಲಿ ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು