1:21 PM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಭೀಕರ ಚಂಡಮಾರುತಕ್ಕೆ ಫಿಲಿಪೈನ್ಸ್‌ ತತ್ತರ; ಮಳೆ, ಭೂ ಕುಸಿತಕ್ಕೆ 58ಕ್ಕೂ ಹೆಚ್ಚು ಮಂದಿ ಸಾವು

14/04/2022, 00:39

ಮನಿಲಾ(reporterkarnataka.com):
ಭೀಕರ ಪ್ರಾಕೃತಿಕ ವಿಕೋಪದಿಂದ ಫಿಲಿಪೈನ್ಸ್‌ ದ್ವೀಪಸಮೂಹವು ತತ್ತರಿಸಿ ಹೋಗುತ್ತಿದೆ. ಮಳೆ- ಭೂಕುಸಿತ ಮತ್ತು ಪ್ರವಾಹದಿಂದಾಗಿ ಈ ವರೆಗೆ 58ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

ಫಿಲಿಪೈನ್ಸ್‌ಗೆ ಅಪ್ಪಳಿಸಿರುವ ಉಷ್ಣವಲಯದ ಚಂಡಮಾರುತವಾದ ಮೇಗಿಯು ಭಯಾನಕ ಅವಘಡಗಳನ್ನು ಸೃಷ್ಟಿ ಮಾಡುತ್ತಿದೆ. 85 ಕಿಮೀ ವೇಗದಲ್ಲಿ ಬೀಸುತ್ತಿರುವ ಚಂಡಮಾರುತದ ಪ್ರಭಾವದಿಂದಾಗಿ ಭಾರೀ ಮಳೆಯೊಂದಿಗೆ ತೀವ್ರಗತಿಯಲ್ಲಿ ಭೂಕುಸಿತ ಸಂಭವಿಸುತ್ತಿದ್ದು, ಅದು ಪ್ರವಾಹ ರೂಪದಲ್ಲಿ ಮುಂದುವರೆದು ಹಳ್ಳಿಹಳ್ಳಿಗಳು ಮಣ್ಣಿನಡಿ ಮುಚ್ಚಿಹೋಗುತ್ತಿವೆ. ರಕ್ಷಣಾ ಪಡೆಗಳು ಜನರ ರಕ್ಷಣಾ ಕಾರ್ಯದಲ್ಲಿ ನಿರಂತರವಾಗಿ ತೊಡಗಿವೆ. ದೊಡ್ಡದೊಡ್ಡ ಬೆಟ್ಟ ಗುಡ್ಡಗಳು ಕುಸಿಯುವ ಜೊತೆಗೆ ಚಂಡಮಾರುತದ ರಭಸಕ್ಕೆ ಮಣ್ಣು-ಕಲ್ಲುಗಳು ತೂರಿಬಂದು ಎಲ್ಲೆಡೆ ಅಪ್ಪಳಿಸುತ್ತಿವೆ.

ಬೇಬೇ ಸಿಟಿಯೊಂದರಲ್ಲೇ ಕುಸಿದ ಮಣ್ಣಿನಡಿ ಸಿಲುಕಿ 47 ಜನರು ಸಾವನ್ನಪ್ಪಿದ್ದಾರೆ ಮತ್ತು 27 ಮಂದಿ ಕಾಣೆಯಾಗಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಜೊತೆಗೆ 100 ಜನರು ಗಾಯಗೊಂಡಿದ್ದಾರೆ.

ಲೇಯ್ಟ್‌ನಲ್ಲಿರುವ ಪಿಲಾರ್ ಗ್ರಾಮದಲ್ಲಿ ಭೂಕುಸಿತವು ಹೆಚ್ಚಿನ ಹಾನಿ ಮಾಡಿದ್ದು, ಹಲವು ಮನೆಗಳು ಮನೆಗಳನ್ನು ಸಮುದ್ರಕ್ಕೆ ಕೊಚ್ಚಿ ಹೋಗಿವೆ. ಅಲ್ಲಿನ ಕರಾವಳಿ ಪ್ರದೇಶದಿಂದ ಸುಮಾರು 400 ಜನರನ್ನು ರಕ್ಷಣಾ ಪಡೆಗಳು ದೋಣಿ ಮೂಲಕ ರಕ್ಷಿಸುವ ಕಾರ್ಯದಲ್ಲಿ ತೊಡಗಿವೆ. ಇನ್ನೂ ಹಲವಾರು ನಗರಗಳಲ್ಲಿ ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು