6:12 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ದಕ್ಷಿಣ ಆಫ್ರಿಕಾದಲ್ಲಿ ರಣಭೀಕರ ಮಳೆ, ಭಾರಿ ಪ್ರವಾಹ: 45 ಮಂದಿ ಸಾವು

14/04/2022, 00:57

ಕೇಪ್ ಟೌನ್(reporterkarnataka.com): ದಕ್ಷಿಣ ಆಫ್ರಿಕಾದ ಡರ್ಬನ್ ಪ್ರದೇಶದಲ್ಲಿ ಸತತ ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಪ್ರವಾಹ ಉಂಟಾಗಿದೆ. ಪ್ರವಾಹದಿಂದಾಗಿ ಕನಿಷ್ಠ 45 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. 

ಗಾಯಾಳುಗಳಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರವಾಹದಲ್ಲಿ ಹಲವರು ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ಕ್ವಾಝುಲು-ನಟಾಲ್ ಪ್ರಾಂತ್ಯದ ಬಂದರು, ಪ್ರಮುಖ ಹೆದ್ದಾರಿಗಳು ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ಹಾನಿಯಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ಡರ್ಬನ್ ಮತ್ತು ಸುತ್ತಮುತ್ತಲಿನ ಇ-ಥೆಕ್ವಿನಿ ಮೆಟ್ರೋಪಾಲಿಟನ್ ಪ್ರದೇಶಗಳಲ್ಲಿ ದಕ್ಷಿಣ ಆಫ್ರಿಕಾದ ಮಿಲಿಟರಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿವೆ. ಪ್ರವಾಹದಲ್ಲಿ ಸಿಲುಕಿರುವವರ ರಕ್ಷಿಸಿ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುವ ಕಾರ್ಯ ನಡೆಯುತ್ತಿದೆ.ಪ್ರವಾಹದಿಂದಾಗಿ ಅಮ್ಲಟುಜಾನಾ ನದಿಯ ದಡದಲ್ಲಿದ್ದ ಪುರಾತನ ಕಾಲದ ದೇವಾಲಯ ಸಂಪೂರ್ಣ ಕೊಚ್ಚಿಹೋಗಿದೆ. ಮನೆಗಳು ಸಾರ್ವಜನಿಕ ಆಸ್ತಿ-ಪಾಸ್ತಿಗೆ ಅಪಾರ ನಷ್ಟವಾಗಿದೆ.

ಹಲವೆಡೆ ವಿದ್ಯುತ್‌ ಸಂಪರ್ಕ ಕಡಿತಗೊಂಡಿದ್ದು, ಜನ ಪರದಾಡುವ ಪರಿಸ್ಥಿತಿ ಬಂದೊದಗಿದೆ. ಮನೆಗಳಲ್ಲಿ ಸಿಲುಕಿರುವ ಜನರ ಸಹಾಯಕ್ಕಾಗಿ ಸಹಾಯವಾಣಿ ತೆರೆದಿರುವುದಾಗಿ ತುರ್ತು ಸೇವೆಗಳ ವಕ್ತಾರ ರಾಬರ್ಟ್ ಮೆಕೆಂಜಿ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು