7:21 AM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಮುಂದುವರೆದ ಎಲೆಕ್ಟ್ರಿಕ್‌ ಸ್ಕೂಟರ್‌ಗಳ ಸ್ಫೋಟ ಪ್ರಕರಣ: ನಾಸಿಕ್ ನಲ್ಲಿ 20 ಸ್ಕೂಟರ್‌ಗಳು ಧಗಧಗ

14/04/2022, 08:25

ಮುಂಬೈ(reporterkarnataka.com):
ಮಹಾರಾಷ್ಟ್ರದ ನಾಸಿಕ್‌ನಲ್ಲಿ 20 ಎಲೆಕ್ಟ್ರಿಕ್ ಸ್ಕೂಟರ್‌ಗಳು ಹೊತ್ತಿ ಉರಿದ ಘಟನೆ ನಡೆದಿದೆ. ಜಿತೇಂದ್ರ ಇವಿಯಿಂದ ಬೆಂಗಳೂರಿಗೆ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಸಾಗಿಸುತ್ತಿದ್ದಾಗ ಈ ಅಪಘಡ ಸಂಭವಿಸಿದೆ. ಘಟನೆಯ ಕುರಿತು ಪರಿಶೀಲನೆ ನಡೆಸಲು ಕಂಪನಿ ತನಿಖೆಯನ್ನು ಪ್ರಾರಂಭಿಸಿದೆ. ಸದ್ಯ ಅಗ್ನಿ ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಂಟೈನರ್‌ನಲ್ಲಿ ಒಟ್ಟು 40 ಸ್ಕೂಟರ್‌ಗಳಿದ್ದವು ಎಂದು ಹೇಳಲಾಗಿದ್ದು, ಎಲ್ಲವೂ ಸುಟ್ಟು ಕರಕಲಾಗಿವೆ. ಈ ಘಟನೆಗೆ ಎಲೆಕ್ಟ್ರಿಕ್ ಸ್ಕೂಟರ್‌ಗಳಲ್ಲಿ ಬಳಸುವ ಬ್ಯಾಟರಿಗಳ ಗುಣಮಟ್ಟ ಮತ್ತು ಸಂಬಂಧಿತ ಅಂಶಗಳೇ ಕಾರಣ ಎನ್ನಲಾಗಿದೆ. ಈ ಬಗ್ಗೆ ಜಿತೇಂದ್ರ ಇವಿ ವಕ್ತಾರರು ಪ್ರತಿಕ್ರಿಯೆ ನೀಡಿದ್ದು, ದುರದೃಷ್ಟವಶಾತ್ ಅಹಿತಕರ ಘಟನೆ ನಡೆದಿದೆ. ಈ ದುರಂತಕ್ಕೆ ಕಾರಣಗಳ ಬಗ್ಗೆ ನಾವು ನಿಗಾ ಇಡುತ್ತೇವೆ ಎಂದಿದ್ದಾರೆ.

ಮೂರು ವಾರಗಳ ಅವಧಿಯಲ್ಲಿ ಎಲೆಕ್ಟ್ರಿಕ್ ಬೈಕ್‌ಗಳಿಗೆ ಬೆಂಕಿ ಹೊತ್ತಿಕೊಂಡ ಐದನೇ ಘಟನೆ ಇದಾಗಿದೆ. ಮಾರ್ಚ್ 26 ರಂದು ಪುಣೆಯಲ್ಲಿ ಓಲಾ ಎಸ್1 ಪ್ರೊ ಎಲೆಕ್ಟ್ರಿಕ್ ಸ್ಕೂಟರ್ ಬೆಂಕಿಗೆ ಆಹುತಿಯಾಗಿತ್ತು. ಅದೇ ದಿನ ತಮಿಳುನಾಡಿನ ವೆಲ್ಲೂರಿನಲ್ಲಿ ಓಕಿನಾವಾ ಎಲೆಕ್ಟ್ರಿಕ್ ಸ್ಕೂಟರ್‌ಗೆ ಬೆಂಕಿ ಹತ್ತಿಕೊಂಡಿತು. ಮಾರ್ಚ್ 28 ರಂದು ತಿರುಚ್ಚಿಯಲ್ಲಿ ಇಂತಹದ್ದೇ ಘಟನೆ ನಡೆದಿದ್ದು, ಮರುದಿನ ಚೆನ್ನೈನಲ್ಲಿ ನಾಲ್ಕನೇ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು