1:58 PM Friday3 - April 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ವೃತ್ತಕ್ಕೆ ಹೆಸರಿಡುವ ಹಿಂದಿದೆ ನಾರಾಯಣ ಗುರುಗಳ ಆದರ್ಶ ಪಾಲಿಸಬೇಕೆಂಬ ಸಂದೇಶ : ವಿ.ಸುನೀಲ್ ಕುಮಾರ್

14/04/2022, 20:50

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು (reporterkarnataka.com):ವೃತ್ತಕ್ಕೆ ನಾರಾಯಣಗುರುಗಳ ಹೆಸರಿಡುವ ಮೂಲಕ ಅವರ ಆದರ್ಶವನ್ನು ಪಾಲಿಸಬೇಕು ಎನ್ನುವ ಸಂದೇಶವನ್ನು ಪರೋಕ್ಷವಾಗಿ ನೀಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಹೇಳಿದರು.


ಅವರು ಗುರುವಾರ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಲೇಡಿಹಿಲ್ ಶಾಲೆ ಬಳಿಯ ವೃತ್ತಕ್ಕೆ “ಬ್ರಹ್ಮಶ್ರೀ ನಾರಾಯಣ ಗುರು ವೃತ್ತ” ನಾಮಕರಣ ಸಮಾರಂಭದಲ್ಲಿ ಮಾತನಾಡಿದರು.

ಮಂಗಳೂರಿನಲ್ಲಿ ನಾರಾಯಣ ಗುರುಗಳಿಂದ ಕುದ್ರೋಳಿ ದೇವಾಲಯ ಸ್ಥಾಪಿಸಲ್ಪಟ್ಟಿತ್ತು ಆವಾಗಿನಿಂದಲೇ ಮಂಗಳೂರು ಹಾಗೂ ನಾರಾಯಣಗುರುಗಳ ನಡುವೆ ನಂಟಿದೆ. ನಾರಾಯಣಗುರುಗಳು ಪ್ರಾಥಃಸ್ಮರಣೀಯರು, ತಳಮಟ್ಟದಲ್ಲಿದ್ದ ಸಮುದಾಯವನ್ನು ಮೇಲುಸ್ತರಕ್ಕೆ ತರಲು ಸೌಹಾರ್ದತೆಯನ್ನು ಸಾರಿ ಅಸ್ಪ್ರಸ್ತೆಯನ್ನು ನಿವಾರಣೆ ಮಾಡಲು ಮುನ್ನಡಿ ಇಟ್ಟಿರುವುದನ್ನು ನಾವು ಅರಿತಿದ್ದೇವೆ, ಇಂತಹ ಆದರ್ಶಗಳು ಪೀಳಿಗೆಗಿಂದ ಪೀಳಿಗೆಗೆ ಸಾಗಲು ಈ ರೀತಿಯಾಗಿ ಸ್ಮರಣೀಯವಾಗಿ ಉಳಿಯಲು ವೃತ್ತಗಳಿಗೆ, ಸ್ಮಾರಕಗಳಿಗೆ ನಾಮಕರಣ ಮಾಡುವುದು ಪೂರಕ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿ, ಹೃದಯದಲ್ಲಿ ನಾರಾಯಣ ಗುರುಗಳ ಬಗ್ಗೆ ಅಭಿಮಾನ ಇದ್ದಿದ್ದರೆ ಯಾರೂ ರಾಜಕೀಯ ಮಾಡುತ್ತಿರಲಿಲ್ಲ, ಅವರು ಅಧಿಕಾರದಲ್ಲಿದ್ದಾಗ ಈ ಕಾರ್ಯ ಮಾಡಬಹುದಿತ್ತು, ಅದೂ ಆಗಲಿಲ್ಲ, ಈಗ ನಾವು ಮಾಡಿದ್ರು ಕಾರ್ಯಕ್ರಮದ ಹಿಂದಿನಿಂದ ತೊಂದರೆ ಕೊಡುವ ಕೆಲಸ ನಡೆದಿದೆ ಎಂದು ಕಾಂಗ್ರೆಸ್ ವಿರುದ್ಧ ಪರೋಕ್ಷವಾಗಿ ಕುಟುಕಿದರು.

un
ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.ಸಂಸದ ನಳೀನ್ ಕುಮಾರ್ ಕಟೀಲ್, ಶಾಸಕರಾದ ಡಿ.ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ ವೈ., ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು