9:18 PM Thursday3 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ವೃತ್ತಕ್ಕೆ ಹೆಸರಿಡುವ ಹಿಂದಿದೆ ನಾರಾಯಣ ಗುರುಗಳ ಆದರ್ಶ ಪಾಲಿಸಬೇಕೆಂಬ ಸಂದೇಶ : ವಿ.ಸುನೀಲ್ ಕುಮಾರ್

14/04/2022, 20:50

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು (reporterkarnataka.com):ವೃತ್ತಕ್ಕೆ ನಾರಾಯಣಗುರುಗಳ ಹೆಸರಿಡುವ ಮೂಲಕ ಅವರ ಆದರ್ಶವನ್ನು ಪಾಲಿಸಬೇಕು ಎನ್ನುವ ಸಂದೇಶವನ್ನು ಪರೋಕ್ಷವಾಗಿ ನೀಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಹೇಳಿದರು.


ಅವರು ಗುರುವಾರ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಲೇಡಿಹಿಲ್ ಶಾಲೆ ಬಳಿಯ ವೃತ್ತಕ್ಕೆ “ಬ್ರಹ್ಮಶ್ರೀ ನಾರಾಯಣ ಗುರು ವೃತ್ತ” ನಾಮಕರಣ ಸಮಾರಂಭದಲ್ಲಿ ಮಾತನಾಡಿದರು.

ಮಂಗಳೂರಿನಲ್ಲಿ ನಾರಾಯಣ ಗುರುಗಳಿಂದ ಕುದ್ರೋಳಿ ದೇವಾಲಯ ಸ್ಥಾಪಿಸಲ್ಪಟ್ಟಿತ್ತು ಆವಾಗಿನಿಂದಲೇ ಮಂಗಳೂರು ಹಾಗೂ ನಾರಾಯಣಗುರುಗಳ ನಡುವೆ ನಂಟಿದೆ. ನಾರಾಯಣಗುರುಗಳು ಪ್ರಾಥಃಸ್ಮರಣೀಯರು, ತಳಮಟ್ಟದಲ್ಲಿದ್ದ ಸಮುದಾಯವನ್ನು ಮೇಲುಸ್ತರಕ್ಕೆ ತರಲು ಸೌಹಾರ್ದತೆಯನ್ನು ಸಾರಿ ಅಸ್ಪ್ರಸ್ತೆಯನ್ನು ನಿವಾರಣೆ ಮಾಡಲು ಮುನ್ನಡಿ ಇಟ್ಟಿರುವುದನ್ನು ನಾವು ಅರಿತಿದ್ದೇವೆ, ಇಂತಹ ಆದರ್ಶಗಳು ಪೀಳಿಗೆಗಿಂದ ಪೀಳಿಗೆಗೆ ಸಾಗಲು ಈ ರೀತಿಯಾಗಿ ಸ್ಮರಣೀಯವಾಗಿ ಉಳಿಯಲು ವೃತ್ತಗಳಿಗೆ, ಸ್ಮಾರಕಗಳಿಗೆ ನಾಮಕರಣ ಮಾಡುವುದು ಪೂರಕ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿ, ಹೃದಯದಲ್ಲಿ ನಾರಾಯಣ ಗುರುಗಳ ಬಗ್ಗೆ ಅಭಿಮಾನ ಇದ್ದಿದ್ದರೆ ಯಾರೂ ರಾಜಕೀಯ ಮಾಡುತ್ತಿರಲಿಲ್ಲ, ಅವರು ಅಧಿಕಾರದಲ್ಲಿದ್ದಾಗ ಈ ಕಾರ್ಯ ಮಾಡಬಹುದಿತ್ತು, ಅದೂ ಆಗಲಿಲ್ಲ, ಈಗ ನಾವು ಮಾಡಿದ್ರು ಕಾರ್ಯಕ್ರಮದ ಹಿಂದಿನಿಂದ ತೊಂದರೆ ಕೊಡುವ ಕೆಲಸ ನಡೆದಿದೆ ಎಂದು ಕಾಂಗ್ರೆಸ್ ವಿರುದ್ಧ ಪರೋಕ್ಷವಾಗಿ ಕುಟುಕಿದರು.

un
ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.ಸಂಸದ ನಳೀನ್ ಕುಮಾರ್ ಕಟೀಲ್, ಶಾಸಕರಾದ ಡಿ.ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ ವೈ., ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು