5:35 AM Tuesday17 - February 2026
ಬ್ರೇಕಿಂಗ್ ನ್ಯೂಸ್
ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,…

ಇತ್ತೀಚಿನ ಸುದ್ದಿ

ವೃತ್ತಕ್ಕೆ ಹೆಸರಿಡುವ ಹಿಂದಿದೆ ನಾರಾಯಣ ಗುರುಗಳ ಆದರ್ಶ ಪಾಲಿಸಬೇಕೆಂಬ ಸಂದೇಶ : ವಿ.ಸುನೀಲ್ ಕುಮಾರ್

14/04/2022, 20:50

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು (reporterkarnataka.com):ವೃತ್ತಕ್ಕೆ ನಾರಾಯಣಗುರುಗಳ ಹೆಸರಿಡುವ ಮೂಲಕ ಅವರ ಆದರ್ಶವನ್ನು ಪಾಲಿಸಬೇಕು ಎನ್ನುವ ಸಂದೇಶವನ್ನು ಪರೋಕ್ಷವಾಗಿ ನೀಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಹೇಳಿದರು.


ಅವರು ಗುರುವಾರ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಲೇಡಿಹಿಲ್ ಶಾಲೆ ಬಳಿಯ ವೃತ್ತಕ್ಕೆ “ಬ್ರಹ್ಮಶ್ರೀ ನಾರಾಯಣ ಗುರು ವೃತ್ತ” ನಾಮಕರಣ ಸಮಾರಂಭದಲ್ಲಿ ಮಾತನಾಡಿದರು.

ಮಂಗಳೂರಿನಲ್ಲಿ ನಾರಾಯಣ ಗುರುಗಳಿಂದ ಕುದ್ರೋಳಿ ದೇವಾಲಯ ಸ್ಥಾಪಿಸಲ್ಪಟ್ಟಿತ್ತು ಆವಾಗಿನಿಂದಲೇ ಮಂಗಳೂರು ಹಾಗೂ ನಾರಾಯಣಗುರುಗಳ ನಡುವೆ ನಂಟಿದೆ. ನಾರಾಯಣಗುರುಗಳು ಪ್ರಾಥಃಸ್ಮರಣೀಯರು, ತಳಮಟ್ಟದಲ್ಲಿದ್ದ ಸಮುದಾಯವನ್ನು ಮೇಲುಸ್ತರಕ್ಕೆ ತರಲು ಸೌಹಾರ್ದತೆಯನ್ನು ಸಾರಿ ಅಸ್ಪ್ರಸ್ತೆಯನ್ನು ನಿವಾರಣೆ ಮಾಡಲು ಮುನ್ನಡಿ ಇಟ್ಟಿರುವುದನ್ನು ನಾವು ಅರಿತಿದ್ದೇವೆ, ಇಂತಹ ಆದರ್ಶಗಳು ಪೀಳಿಗೆಗಿಂದ ಪೀಳಿಗೆಗೆ ಸಾಗಲು ಈ ರೀತಿಯಾಗಿ ಸ್ಮರಣೀಯವಾಗಿ ಉಳಿಯಲು ವೃತ್ತಗಳಿಗೆ, ಸ್ಮಾರಕಗಳಿಗೆ ನಾಮಕರಣ ಮಾಡುವುದು ಪೂರಕ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿ, ಹೃದಯದಲ್ಲಿ ನಾರಾಯಣ ಗುರುಗಳ ಬಗ್ಗೆ ಅಭಿಮಾನ ಇದ್ದಿದ್ದರೆ ಯಾರೂ ರಾಜಕೀಯ ಮಾಡುತ್ತಿರಲಿಲ್ಲ, ಅವರು ಅಧಿಕಾರದಲ್ಲಿದ್ದಾಗ ಈ ಕಾರ್ಯ ಮಾಡಬಹುದಿತ್ತು, ಅದೂ ಆಗಲಿಲ್ಲ, ಈಗ ನಾವು ಮಾಡಿದ್ರು ಕಾರ್ಯಕ್ರಮದ ಹಿಂದಿನಿಂದ ತೊಂದರೆ ಕೊಡುವ ಕೆಲಸ ನಡೆದಿದೆ ಎಂದು ಕಾಂಗ್ರೆಸ್ ವಿರುದ್ಧ ಪರೋಕ್ಷವಾಗಿ ಕುಟುಕಿದರು.

un
ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.ಸಂಸದ ನಳೀನ್ ಕುಮಾರ್ ಕಟೀಲ್, ಶಾಸಕರಾದ ಡಿ.ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ ವೈ., ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು