3:20 AM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ವೃತ್ತಕ್ಕೆ ಹೆಸರಿಡುವ ಹಿಂದಿದೆ ನಾರಾಯಣ ಗುರುಗಳ ಆದರ್ಶ ಪಾಲಿಸಬೇಕೆಂಬ ಸಂದೇಶ : ವಿ.ಸುನೀಲ್ ಕುಮಾರ್

14/04/2022, 20:50

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು (reporterkarnataka.com):ವೃತ್ತಕ್ಕೆ ನಾರಾಯಣಗುರುಗಳ ಹೆಸರಿಡುವ ಮೂಲಕ ಅವರ ಆದರ್ಶವನ್ನು ಪಾಲಿಸಬೇಕು ಎನ್ನುವ ಸಂದೇಶವನ್ನು ಪರೋಕ್ಷವಾಗಿ ನೀಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಹೇಳಿದರು.


ಅವರು ಗುರುವಾರ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಲೇಡಿಹಿಲ್ ಶಾಲೆ ಬಳಿಯ ವೃತ್ತಕ್ಕೆ “ಬ್ರಹ್ಮಶ್ರೀ ನಾರಾಯಣ ಗುರು ವೃತ್ತ” ನಾಮಕರಣ ಸಮಾರಂಭದಲ್ಲಿ ಮಾತನಾಡಿದರು.

ಮಂಗಳೂರಿನಲ್ಲಿ ನಾರಾಯಣ ಗುರುಗಳಿಂದ ಕುದ್ರೋಳಿ ದೇವಾಲಯ ಸ್ಥಾಪಿಸಲ್ಪಟ್ಟಿತ್ತು ಆವಾಗಿನಿಂದಲೇ ಮಂಗಳೂರು ಹಾಗೂ ನಾರಾಯಣಗುರುಗಳ ನಡುವೆ ನಂಟಿದೆ. ನಾರಾಯಣಗುರುಗಳು ಪ್ರಾಥಃಸ್ಮರಣೀಯರು, ತಳಮಟ್ಟದಲ್ಲಿದ್ದ ಸಮುದಾಯವನ್ನು ಮೇಲುಸ್ತರಕ್ಕೆ ತರಲು ಸೌಹಾರ್ದತೆಯನ್ನು ಸಾರಿ ಅಸ್ಪ್ರಸ್ತೆಯನ್ನು ನಿವಾರಣೆ ಮಾಡಲು ಮುನ್ನಡಿ ಇಟ್ಟಿರುವುದನ್ನು ನಾವು ಅರಿತಿದ್ದೇವೆ, ಇಂತಹ ಆದರ್ಶಗಳು ಪೀಳಿಗೆಗಿಂದ ಪೀಳಿಗೆಗೆ ಸಾಗಲು ಈ ರೀತಿಯಾಗಿ ಸ್ಮರಣೀಯವಾಗಿ ಉಳಿಯಲು ವೃತ್ತಗಳಿಗೆ, ಸ್ಮಾರಕಗಳಿಗೆ ನಾಮಕರಣ ಮಾಡುವುದು ಪೂರಕ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿ, ಹೃದಯದಲ್ಲಿ ನಾರಾಯಣ ಗುರುಗಳ ಬಗ್ಗೆ ಅಭಿಮಾನ ಇದ್ದಿದ್ದರೆ ಯಾರೂ ರಾಜಕೀಯ ಮಾಡುತ್ತಿರಲಿಲ್ಲ, ಅವರು ಅಧಿಕಾರದಲ್ಲಿದ್ದಾಗ ಈ ಕಾರ್ಯ ಮಾಡಬಹುದಿತ್ತು, ಅದೂ ಆಗಲಿಲ್ಲ, ಈಗ ನಾವು ಮಾಡಿದ್ರು ಕಾರ್ಯಕ್ರಮದ ಹಿಂದಿನಿಂದ ತೊಂದರೆ ಕೊಡುವ ಕೆಲಸ ನಡೆದಿದೆ ಎಂದು ಕಾಂಗ್ರೆಸ್ ವಿರುದ್ಧ ಪರೋಕ್ಷವಾಗಿ ಕುಟುಕಿದರು.

un
ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.ಸಂಸದ ನಳೀನ್ ಕುಮಾರ್ ಕಟೀಲ್, ಶಾಸಕರಾದ ಡಿ.ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ ವೈ., ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು