1:42 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಉತ್ತರ ಪ್ರದೇಶ; ಸಚಿವರು ಹೊಟೇಲ್‌ಗಳಲ್ಲಿ  ತಂಗುವಂತಿಲ್ಲ, ಅಧಿಕಾರಿಗಳಿಗೆ 30 ನಿಮಿಷಗಳಿಗೂ ಹೆಚ್ಚು ಲಂಚ್ ಬ್ರೇಕ್ ಇಲ್ಲ

15/04/2022, 10:50

ಲಕ್ನೋ (reporterkarnataka.com): ಸಚಿವರು ಇನ್ನು ಮುಂದೆ ರಾಜ್ಯದ ಜಿಲ್ಲೆಗಳಲ್ಲಿ ಪ್ರವಾಸಕ್ಕೆ ತೆರಳುವಾಗ ಹೊಟೇಲ್‌ಗಳಲ್ಲಿ ಉಳಿದುಕೊಳ್ಳುವ ಬದಲು ಗೆಸ್ಟ್ ಹೌಸ್‌ಗಳಲ್ಲಿ ಉಳಿದುಕೊಳ್ಳುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೂಚಿಸಿದ್ದಾರೆ.

ಯೋಗಿ ಆದಿತ್ಯನಾಥ್ ತಮ್ಮ ನಿವಾಸದಲ್ಲಿ ನಡೆದ 9ನೇ ತಂಡದ ಸಭೆಯನ್ನು ಉದ್ದೇಶಿಸಿ ಮಾತನಾಡುವಾಗ, ಸರ್ಕಾರಿ ಅಧಿಕಾರಿಗಳು ಕಚೇರಿ ಕೆಲಸಗಳ ಸಂದರ್ಭದಲ್ಲಿ ಹೆಚ್ಚು ಸಮಯವನ್ನು ಊಟದಲ್ಲಿಯೇ ಕಳೆಯುತ್ತಾರೆ ಎಂಬ ದೂರುಗಳು ಕೇಳಿ ಬಂದಿವೆ. ಹೀಗಾಗಿ ಊಟದ ವಿರಾಮ 30 ನಿಮಿಷ ಮೀರದಂತೆ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸಾಮಾನ್ಯವಾಗಿ ಸರ್ಕಾರಿ ಕಚೇರಿಗಳಲ್ಲಿ ಮಧ್ಯಾಹ್ನ 1:30 ರಿಂದ 2:00 ಗಂಟೆಯವರೆಗೆ ಊಟದ ವಿರಾಮ ಇರುತ್ತದೆ. ಆದರೆ ಕೆಲವರು ಊಟದ ವಿರಾಮವನ್ನು ಹೆಚ್ಚು ಸಮಯ ತೆಗೆದುಕೊಂಡು ಬಳಿಕ ತಮ್ಮ ಕಚೇರಿಗಳಿಗೆ ಹಿಂತಿರುಗುತ್ತಾರೆ. ಹೀಗಾಗಿ ಎಲ್ಲರೂ 30 ನಿಮಿಷಗಳ ಊಟದ ವಿರಾಮವನ್ನು ಪಾಲಿಸಬೇಕು ಎಂದು ತಿಳಿಸಿದ್ದಾರೆ.

ಸರ್ಕಾರಿ ಕಚೇರಿಗಳಲ್ಲಿ ನಿಯೋಜನೆಗೊಂಡ ಅಧಿಕಾರಿಗಳು ಹಾಗೂ ನೌಕರರು ಸರಿಯಾದ ಸಮಯಕ್ಕೆ ಹಾಜರಿರಬೇಕು. ಒಂದು ವೇಳೆ ತಡವಾಗಿ ಕಚೇರಿಗೆ ಬಂದಲ್ಲಿ ಅವರನ್ನು ಸ್ವೀಕರಿಸಲಾಗುವುದಿಲ್ಲ. ಹಿರಿಯ ಅಧಿಕಾರಿಗಳು ನಿತ್ಯ ಕಚೇರಿಗಳಲ್ಲಿ ದಿಢೀರ್ ತಪಾಸಣೆ ನಡೆಸಬೇಕು. ಈ ಬಗ್ಗೆ ನಿರ್ಲಕ್ಷ್ಯ ತೋರುವ ಅಧಿಕಾರಿಗಳು ಹಾಗೂ ನೌಕರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಎಚ್ಚರಿಸಿದರು.

ಇದರೊಂದಿಗೆ ಸಾರ್ವಜನಿಕರು ನೀಡುವ ದೂರುಗಳ ಬಗ್ಗೆ ತಕ್ಷಣವೇ ಗಮನಹರಿಸಬೇಕು. ಯಾವುದೇ ಕಡತಗಳು 3 ದಿನಗಳಿಗೂ ಹೆಚ್ಚು ದಿನ ಬಾಕಿಯಿಡಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಆಪ್ತ ಸಹಾಯಕರನ್ನಾಗಿ ಸಂಬಂಧಿಗಳನ್ನು ನೇಮಕ ಮಾಡಬೇಡಿ ಎಂದು ಸಂಪುಟದ ಮಂತ್ರಿಗಳಿಗೆ ಯೋಗಿ ಸೂಚಿಸಿದ್ದಾರೆ.

ಸರ್ಕಾರಿ ಕೆಲಸಗಳು ತಡವಾಗಿ ನಡೆಯುತ್ತಿರುವ ಬಗ್ಗೆ ವ್ಯಾಪಕ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥ್ ಈ ಕ್ರಮವನ್ನು ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು