1:56 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ರಾಜ್ಯದ ಪ್ರತಿ ತಾಲೂಕಿನಲ್ಲಿ ಮಕ್ಕಳ ಕೋವಿಡ್ ಕೇಂದ್ರ ಸ್ಥಾಪನೆ: ಸಚಿವೆ ಶಶಿಕಲಾ ಜೊಲ್ಲೆ

13/06/2021, 08:20

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ರಾಜ್ಯದ ಪ್ರತಿ ತಾಲೂಕಿನಲ್ಲಿ ಮಕ್ಕಳ ಕೋವಿಡ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಮಹಿಳಾ ಮಕ್ಕಳ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ಹೈಟೆಕ್ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ವಾಸ್ತವದ ಬಗ್ಗೆ ವೀಕ್ಷಿಸಿದ ಬಳಿಕ ಮಾಧ್ಯಮ ಜತೆ ಮಾತನಾಡಿದ ಅವರು, ಮಕ್ಕಳಿಗಾಗಿ ಕೋವಿಡ್ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದರು.

 ಸಿಂಧನೂರು ಶಾಸಕ ವೆಂಕಟರಾವ್ ನಾಡಗೌಡ. ಅವರ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ವೀಕ್ಷಿಸಿದರು. ಮೂರನೇ ಅಲೆ ಸಂಭವ ಇದ್ದು ಚಿಕ್ಕಮಕ್ಕಳಿಗೆ ಹೆಚ್ಚು ಪರಿಣಾಮ ಬೀರುತ್ತದೆ. ಅದಕ್ಕಾಗಿ ಮುಂಜಾಗ್ರತೆ ಸಲುವಾಗಿ ಪ್ರತಿ ತಾಲೂಕಿನಲ್ಲಿ ಮಕ್ಕಳ ಕೋವಿಡ್ ಕೇಂದ್ರಗಳನ್ನು ಆರಂಭ ಮಾಡುವುದಾಗಿ ನಿರ್ಧರಿಸಿದ್ದೇವೆ ಎಂದು ತಿಳಿಸಿದರು. 

ಈಗಾಗಲೇ ಚಿಕ್ಕಮಕ್ಕಳ ಕೋವಿಡ್ ಸೆಂಟರ್ ಗಳಿಗೆ 600 ಬೆಡ್ ಗಳನ್ನು ಈಗಾಗಲೇ ಕಲ್ಪಿಸಿದ್ದು, ಹಾಗೆ ಕೊರೊನಾದಿಂದ ತಂದೆ-ತಾಯಿ ಮರಣ ಹೊಂದಿ ಅನಾಥರಾದ 30 ಮಕ್ಕಳ ರಕ್ಷಣೆ ಮಾಡಿದ್ದೇವೆ. ಎಂದು ತಿಳಿಸಿದರು.

100 ಅಂಗನವಾಡಿ ಕೇಂದ್ರಗಳನ್ನು ಹೈಟೆಕ್ ಕೇಂದ್ರಗಳನ್ನಾಗಿ ನಿರ್ಮಾಣ ಮಾಡಲಾಗಿದೆ ಎಂದು ತಿಳಿಸಿದರು.

ಸಿಂಧನೂರು ತಾಲೂಕಿನ ಗೊರೆಬಾಳ ಗ್ರಾಮ ಪಂಚಾಯಿತಿಯಲ್ಲಿ ಬರುವ ಬಾಲಯ್ಯ ಕ್ಯಾಂಪಿನಲ್ಲಿ ನರೇಗಾ ಯೋಜನೆಯಡಿಯಲ್ಲಿ ಚಿಕ್ಕಮಕ್ಕಳನ್ನು ಬಳಸಿಕೊಳ್ಳುತ್ತಿದ್ದಾರೆ ಎಂಬ ಆರೋಪ ಬಗ್ಗೆ ಪ್ರತಿಕ್ರಿಯಿಸಿದ ಸಚಿವೆ, ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಕ್ರಮ ಜರುಗಿಸಲು ಸೂಚಿಸಲಾಗಿದೆ ಎಂದರು.

ಗ್ರಾಮದ ಮೂರನೇ ಅಂಗನವಾಡಿ ಹೈಟೆಕ್ ಕೇಂದ್ರಕ್ಕೆ ಭೇಟಿ ನೀಡಿದ ಸಚಿವರು, ಮಕ್ಕಳು ಆನ್ಲೈನ್  ಮೂಲಕ ಕಲಿಕೆ ಆಗುವುದು. ಕಲಿತ ಚಟುವಟಿಕೆಗಳನ್ನು ಟಿವಿ ಮುಖಾಂತರ ನಡೆಸಲಾಗುವುದು. ಜೊತೆಗೆ ಚಿಕ್ಕ ಮಕ್ಕಳಿಗೆ ಕಲಿಕೆಯ ಬಗ್ಗೆ ಗಮನ ಹರಿಯುತ್ತದೆ ಎಂದು ತಿಳಿಸಿದರು.

ಈ ಸಂದರ್ಭದ ಶಾಸಕರು, ಸಂಸದರು, ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿಗಳು ಸೇರಿದಂತೆ ಇನ್ನಿತರ ಭಾಗವಹಿಸಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು