11:30 AM Tuesday17 - February 2026
ಬ್ರೇಕಿಂಗ್ ನ್ಯೂಸ್
ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,…

ಇತ್ತೀಚಿನ ಸುದ್ದಿ

ನಿಷ್ಕ್ರಿಯ- ನಿರ್ಲಿಪ್ತ- ಭ್ರಷ್ಟ ಶಾಸಕರಿಗಿಲ್ಲ ಬಿಜೆಪಿ ಟಿಕೆಟ್: ದ.ಕ. ಜಿಲ್ಲೆಯ 3 ಮಂದಿ ಹಾಲಿಗಳಿಗೆ ಕೊಕ್? 

15/04/2022, 13:14

ಬೆಂಗಳೂರು(reporterkarnataka.com): ಒಂದು ಕಡೆ ಈಶ್ವರಪ್ಪ ಪ್ರಕರಣ ಆಡಳಿತರೂಢ ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಿದರೆ, ಇನ್ನೊಂದು ಕಡೆಯಲ್ಲಿ ಮುಂಬರುವ ವಿಧಾನಸಭೆ ಚುನಾವಣೆಗೆ ಕಮಲ ಪಾಳಯದಲ್ಲಿ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಟಿಕೆಟ್ ಹಂಚಿಕೆಯ ಪಾರಮರ್ಶೆ ಪ್ರಕ್ರಿಯೆ ಆರಂಭಗೊಂಡಿದೆ. ಕಳೆದ ಬಾರಿ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳು ಸೇರಿದಂತೆ ಎರಡು ಡಜನಿಗೂ ಅಧಿಕ ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸುವ ಸಾಧ್ಯತೆಗಳಿವೆ. ಇದರಲ್ಲಿ ದ.ಕ. ಜಿಲ್ಲೆಯ 3 ಮಂದಿ ಹಾಲಿ ಶಾಸಕರು ಕೂಡ ಸೇರಿದ್ದಾರೆ ಎಂದು ತಿಳಿದು ಬಂದಿದೆ.

ಚುನಾವಣಾ ಸಿದ್ಧತೆಯ ಅಂಗವಾಗಿ ಬಿಜೆಪಿಯ ವಿಭಾಗೀಯ ಮಟ್ಟದ ಸಭೆ ಈಗಾಗಲೇ ನಡೆದಿದೆ. ಮಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆದರೆ, ಮೈಸೂರಿನಲ್ಲಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಸಭೆ ಪೂರ್ಣಗೊಂಡಿದೆ. ಇನ್ನು ಟಿಕೆಟ್ ಹಂಚಿಕೆ ಕುರಿತಂತೆ

ಕ್ಷೇತ್ರವಾರು ಸಮೀಕ್ಷೆ ನಡೆಯಲಿದೆ. ಪ್ರತಿ ಕ್ಷೇತ್ರದ ಸಮೀಕ್ಷೆಗೆ 9 ಮಂದಿಯ ತಂಡ ಇರುತ್ತದೆ. ಇವರು ಬಿಜೆಪಿ ಹಾಲಿ ಶಾಸಕರ ಹಾಗೂ ಬಿಜೆಪಿ ಸೋತ ಕ್ಷೇತ್ರದಲ್ಲಿ ಹೊಸ ಅಭ್ಯರ್ಥಿಗಳ ಒರೆಗೆ ಹಚ್ಚಲಿದ್ದಾರೆ. ಈ ಬಾರಿ ಯಾರದೇ ಪ್ರಭಾವ ಟಿಕೆಟ್ ಹಂಚಿಕೆಯಲ್ಲಿ ನಡೆಯೋದಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷರಿಂದ

ಆರಂಭಗೊಂಡು ಮುಖ್ಯಮಂತ್ರಿವರೆಗೆ ಯಾರದೇ ಪ್ರಭಾವ ಕೆಲಸ ಮಾಡೊಲ್ಲ. ಸಮೀಕ್ಷಾ ತಂಡ ನೀಡುವ ವರದಿಯೇ ಅಂತಿಮವಾಗಿರುತ್ತದೆ. ಈಶ್ವರಪ್ಪ ಪ್ರಕರಣದಿಂದ ಬಿಜೆಪಿ ಸಾಕಷ್ಟು ಕಲಿತಿದೆ. ಯಾಕೆಂದರೆ ಈಶ್ವರಪ್ಪ ಹೊರಗಿನಿಂದ ಬಂದವರಲ್ಲ, ಮೂಲತಃ ಬಿಜೆಪಿಯವರೇ ಆಗಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಹೆಸರಿನಲ್ಲಿ ಗೆದ್ದು, ಭ್ರಷ್ಟಾಚಾರದಲ್ಲಿ ತೊಡಗಿಕೊಂಡ ಶಾಸಕರಿಗೆ ಕಡ್ಡಾಯವಾಗಿ ಟಿಕೆಟ್ ನಿರಾಕರಿಸಲು ಪಕ್ಷದ ಹೈಕಮಾಂಡ್ ಸೂಚಿಸಿದೆ ಎಂದು ತಿಳಿದು ಬಂದಿದೆ.

ಕಾರ್ಯನಿರ್ವಹಣೆ, ಸುಧಾರಣೆ, ಬದಲಾವಣೆ ಈ ಬಾರಿ ಬಿಜೆಪಿಯ ಧ್ಯೇಯವಾಕ್ಯವಾಗಿದೆ. ಹಾಲಿ ಶಾಸಕರ ಕಾರ್ಯನಿರ್ವಹಣೆ, ಸುಧಾರಣೆ ಹಾಗೂ ಬದಲಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು ಮತ್ತೆ ಟಿಕೆಟ್ ಹಂಚಲಾಗುವುದು. ಹಾಗೆ ನಿಷ್ಕ್ರಿಯ, ನಿರ್ಲಿಪ್ತ ಹಾಗೂ ಭ್ರಷ್ಟ ಶಾಸಕರಿಗೆ ಈ ಬಾರಿ ಟಿಕೆಟ್ ನಿರಾಕರಿಸಲಾಗುವುದು.  ಅಷ್ಟೇ ಅಲ್ಲದೆ ಪಕ್ಷದ ಹೆಸರು, ಚಿಹ್ನೆಯ ಬಲವಿಲ್ಲದೆ ಸ್ವಂತ ಶಕ್ತಿಯಿಂದ ಗೆಲ್ಲಬಲ್ಲ ಅಭ್ಯರ್ಥಿಗೆ ಟಿಕೆಟ್ ನೀಡಲಾಗುವುದು ಎಂದು ಪಕ್ಷದ ಬಲ್ಲಮೂಲಗಳಿಂದ ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು