8:58 PM Friday3 - April 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ನಿಷ್ಕ್ರಿಯ- ನಿರ್ಲಿಪ್ತ- ಭ್ರಷ್ಟ ಶಾಸಕರಿಗಿಲ್ಲ ಬಿಜೆಪಿ ಟಿಕೆಟ್: ದ.ಕ. ಜಿಲ್ಲೆಯ 3 ಮಂದಿ ಹಾಲಿಗಳಿಗೆ ಕೊಕ್? 

15/04/2022, 13:14

ಬೆಂಗಳೂರು(reporterkarnataka.com): ಒಂದು ಕಡೆ ಈಶ್ವರಪ್ಪ ಪ್ರಕರಣ ಆಡಳಿತರೂಢ ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಿದರೆ, ಇನ್ನೊಂದು ಕಡೆಯಲ್ಲಿ ಮುಂಬರುವ ವಿಧಾನಸಭೆ ಚುನಾವಣೆಗೆ ಕಮಲ ಪಾಳಯದಲ್ಲಿ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಟಿಕೆಟ್ ಹಂಚಿಕೆಯ ಪಾರಮರ್ಶೆ ಪ್ರಕ್ರಿಯೆ ಆರಂಭಗೊಂಡಿದೆ. ಕಳೆದ ಬಾರಿ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳು ಸೇರಿದಂತೆ ಎರಡು ಡಜನಿಗೂ ಅಧಿಕ ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸುವ ಸಾಧ್ಯತೆಗಳಿವೆ. ಇದರಲ್ಲಿ ದ.ಕ. ಜಿಲ್ಲೆಯ 3 ಮಂದಿ ಹಾಲಿ ಶಾಸಕರು ಕೂಡ ಸೇರಿದ್ದಾರೆ ಎಂದು ತಿಳಿದು ಬಂದಿದೆ.

ಚುನಾವಣಾ ಸಿದ್ಧತೆಯ ಅಂಗವಾಗಿ ಬಿಜೆಪಿಯ ವಿಭಾಗೀಯ ಮಟ್ಟದ ಸಭೆ ಈಗಾಗಲೇ ನಡೆದಿದೆ. ಮಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆದರೆ, ಮೈಸೂರಿನಲ್ಲಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಸಭೆ ಪೂರ್ಣಗೊಂಡಿದೆ. ಇನ್ನು ಟಿಕೆಟ್ ಹಂಚಿಕೆ ಕುರಿತಂತೆ

ಕ್ಷೇತ್ರವಾರು ಸಮೀಕ್ಷೆ ನಡೆಯಲಿದೆ. ಪ್ರತಿ ಕ್ಷೇತ್ರದ ಸಮೀಕ್ಷೆಗೆ 9 ಮಂದಿಯ ತಂಡ ಇರುತ್ತದೆ. ಇವರು ಬಿಜೆಪಿ ಹಾಲಿ ಶಾಸಕರ ಹಾಗೂ ಬಿಜೆಪಿ ಸೋತ ಕ್ಷೇತ್ರದಲ್ಲಿ ಹೊಸ ಅಭ್ಯರ್ಥಿಗಳ ಒರೆಗೆ ಹಚ್ಚಲಿದ್ದಾರೆ. ಈ ಬಾರಿ ಯಾರದೇ ಪ್ರಭಾವ ಟಿಕೆಟ್ ಹಂಚಿಕೆಯಲ್ಲಿ ನಡೆಯೋದಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷರಿಂದ

ಆರಂಭಗೊಂಡು ಮುಖ್ಯಮಂತ್ರಿವರೆಗೆ ಯಾರದೇ ಪ್ರಭಾವ ಕೆಲಸ ಮಾಡೊಲ್ಲ. ಸಮೀಕ್ಷಾ ತಂಡ ನೀಡುವ ವರದಿಯೇ ಅಂತಿಮವಾಗಿರುತ್ತದೆ. ಈಶ್ವರಪ್ಪ ಪ್ರಕರಣದಿಂದ ಬಿಜೆಪಿ ಸಾಕಷ್ಟು ಕಲಿತಿದೆ. ಯಾಕೆಂದರೆ ಈಶ್ವರಪ್ಪ ಹೊರಗಿನಿಂದ ಬಂದವರಲ್ಲ, ಮೂಲತಃ ಬಿಜೆಪಿಯವರೇ ಆಗಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಹೆಸರಿನಲ್ಲಿ ಗೆದ್ದು, ಭ್ರಷ್ಟಾಚಾರದಲ್ಲಿ ತೊಡಗಿಕೊಂಡ ಶಾಸಕರಿಗೆ ಕಡ್ಡಾಯವಾಗಿ ಟಿಕೆಟ್ ನಿರಾಕರಿಸಲು ಪಕ್ಷದ ಹೈಕಮಾಂಡ್ ಸೂಚಿಸಿದೆ ಎಂದು ತಿಳಿದು ಬಂದಿದೆ.

ಕಾರ್ಯನಿರ್ವಹಣೆ, ಸುಧಾರಣೆ, ಬದಲಾವಣೆ ಈ ಬಾರಿ ಬಿಜೆಪಿಯ ಧ್ಯೇಯವಾಕ್ಯವಾಗಿದೆ. ಹಾಲಿ ಶಾಸಕರ ಕಾರ್ಯನಿರ್ವಹಣೆ, ಸುಧಾರಣೆ ಹಾಗೂ ಬದಲಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು ಮತ್ತೆ ಟಿಕೆಟ್ ಹಂಚಲಾಗುವುದು. ಹಾಗೆ ನಿಷ್ಕ್ರಿಯ, ನಿರ್ಲಿಪ್ತ ಹಾಗೂ ಭ್ರಷ್ಟ ಶಾಸಕರಿಗೆ ಈ ಬಾರಿ ಟಿಕೆಟ್ ನಿರಾಕರಿಸಲಾಗುವುದು.  ಅಷ್ಟೇ ಅಲ್ಲದೆ ಪಕ್ಷದ ಹೆಸರು, ಚಿಹ್ನೆಯ ಬಲವಿಲ್ಲದೆ ಸ್ವಂತ ಶಕ್ತಿಯಿಂದ ಗೆಲ್ಲಬಲ್ಲ ಅಭ್ಯರ್ಥಿಗೆ ಟಿಕೆಟ್ ನೀಡಲಾಗುವುದು ಎಂದು ಪಕ್ಷದ ಬಲ್ಲಮೂಲಗಳಿಂದ ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು