9:36 PM Tuesday26 - May 2026
ಬ್ರೇಕಿಂಗ್ ನ್ಯೂಸ್
ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ?

ಇತ್ತೀಚಿನ ಸುದ್ದಿ

ಮಂಗಳೂರು ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನದ ನೂತನ ಆಡಳಿತ ಮಂಡಳಿ ಆಯ್ಕೆ

15/04/2022, 23:13

ಮಂಗಳೂರು(reporterkarnataka.com): ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಪ್ರಮುಖ ದೇವಾಲಯಗಳಲ್ಲೊಂದಾದ ರಥಬೀದಿಯಲ್ಲಿರುವ ಶ್ರೀ ವೆಂಕಟ್ರಮಣ ದೇವಸ್ಥಾನದ ಆಡಳಿತ ಮಂಡಳಿಯನ್ನು ನ್ಯಾಯಾಲಯದ ಆದೇಶಾನುಸಾರ ಪುನರ್ ರಚಿಸುವ ಸಲುವಾಗಿ ಚುನಾವಣೆ ಗುರವಾರ ನಡೆಯಿತು. 

ಸ್ಪರ್ಧಿಸಿದ ಒಟ್ಟು 11 ಅಭ್ಯರ್ಥಿಗಳಲ್ಲಿ ಅಡಿಗೆ ಬಾಲಕೃಷ್ಣ ಶೆಣೈ,  ಎಂ.ಕಿರಣ್ ಪೈ, ಎಂ.ಸತೀಶ್ ಪ್ರಭು, ಕೆ. ಗಣೇಶ್ ಕಾಮತ್ ಹಾಗೂ ಎಂ. ಜಗನ್ನಾಥ್ ಕಾಮತ್ ಮುಂದಿನ 5 ವರ್ಷಗಳ ಅವಧಿಗೆ ಶ್ರೀ ದೇವಳದ ಮುಕ್ತೇಸರರಾಗಿ ಆಯ್ಕೆಗೊಂಡರು. ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ವಾಸಿಸುವ ಹದಿನೆಂಟು ವರ್ಷ ಮೇಲ್ಪಟ್ಟ ಸಮಾಜ ಬಾಂಧವರಿಗೆ ಮತದಾನದಲ್ಲಿ ಭಾಗವಹಿಸುವ  ಅವಕಾಶ ಕಲ್ಪಿಸಲಾಗಿತ್ತು. 

ಬೆಳಗ್ಗೆ 8.00ಕ್ಕೆ ಮತದಾನ ಪ್ರಾರಂಭವಾಗಿ ಸಂಜೆ 7.೦೦ಕ್ಕೆ ಮುಕ್ತಾಯಗೊಂಡಿತು. ಶ್ರೀ ದೇವಳದ ನಿಯೋಜಿತ ಚುನಾವಣಾ ಅಧಿಕಾರಿಯಾಗಿದ್ದ ನ್ಯಾಯವಾದಿ ನಾಗೇಶ್ ಕುಮಾರ್ ಮತ್ತು ಸಹಾಯಕ ಚುನಾವಣಾ ಅಧಿಕಾರಿಯಾಗಿದ್ದ ಪ್ರೇಮಾನಂದ ಕಿಣಿ ಹಾಗೂ ಸ್ವಯಂಸೇವಕರು ಚುನಾವಣಾ ಪ್ರಕ್ರಿಯೆಯಲ್ಲಿ ಸಹಕರಿಸಿದರು.  ಶುಕ್ರವಾರ ಬೆಳಿಗ್ಗೆ ಮಾಜಿ ಮೊಕ್ತೇಸರರಾದ ಸಿ . ಎಲ್ ಶೆಣೈ , ಪ್ರಶಾಂತ್ ರಾವ್ , ರಾಮಚಂದ್ರ ಕಾಮತ್ ರವರು ತಮ್ಮ ಅಧಿಕಾರ ಹಾಗೂ ದೇವಳದ ಕೀಲಿಗಳನ್ನು ಶ್ರೀ ದೇವರ ಸಮ್ಮುಖದಲ್ಲಿ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಾಜಿ ಮೊಕ್ತೇಸರರಾದ ಎಂ . ಪದ್ಮನಾಭ ಪೈ  , ಕೊಚ್ಚಿಕಾರ್ ಜಯರಾಜ್ ಪೈ ಉಪಸ್ಥಿತರಿದ್ದರು . 

ಇತ್ತೀಚಿನ ಸುದ್ದಿ

ಜಾಹೀರಾತು