8:41 PM Wednesday18 - March 2026
ಬ್ರೇಕಿಂಗ್ ನ್ಯೂಸ್
ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ… ಉತ್ತರಿಸದ ಸಚಿವರು: ಇದೇ ಮೊದಲ ಬಾರಿಗೆ ಸ್ಪೀಕರ್ ಸಭಾತ್ಯಾಗ; ಮೂವರು ಅಧಿಕಾರಿಗಳಿಗೆ ತಲೆದಂಡ ರಾಜ್ಯ ಉಪ ಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲಿ ಏಪ್ರಿಲ್ 9ರಂದು ಮತದಾನ, ಮೇ…

ಇತ್ತೀಚಿನ ಸುದ್ದಿ

ಮಂಗಳೂರು ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನದ ನೂತನ ಆಡಳಿತ ಮಂಡಳಿ ಆಯ್ಕೆ

15/04/2022, 23:13

ಮಂಗಳೂರು(reporterkarnataka.com): ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಪ್ರಮುಖ ದೇವಾಲಯಗಳಲ್ಲೊಂದಾದ ರಥಬೀದಿಯಲ್ಲಿರುವ ಶ್ರೀ ವೆಂಕಟ್ರಮಣ ದೇವಸ್ಥಾನದ ಆಡಳಿತ ಮಂಡಳಿಯನ್ನು ನ್ಯಾಯಾಲಯದ ಆದೇಶಾನುಸಾರ ಪುನರ್ ರಚಿಸುವ ಸಲುವಾಗಿ ಚುನಾವಣೆ ಗುರವಾರ ನಡೆಯಿತು. 

ಸ್ಪರ್ಧಿಸಿದ ಒಟ್ಟು 11 ಅಭ್ಯರ್ಥಿಗಳಲ್ಲಿ ಅಡಿಗೆ ಬಾಲಕೃಷ್ಣ ಶೆಣೈ,  ಎಂ.ಕಿರಣ್ ಪೈ, ಎಂ.ಸತೀಶ್ ಪ್ರಭು, ಕೆ. ಗಣೇಶ್ ಕಾಮತ್ ಹಾಗೂ ಎಂ. ಜಗನ್ನಾಥ್ ಕಾಮತ್ ಮುಂದಿನ 5 ವರ್ಷಗಳ ಅವಧಿಗೆ ಶ್ರೀ ದೇವಳದ ಮುಕ್ತೇಸರರಾಗಿ ಆಯ್ಕೆಗೊಂಡರು. ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ವಾಸಿಸುವ ಹದಿನೆಂಟು ವರ್ಷ ಮೇಲ್ಪಟ್ಟ ಸಮಾಜ ಬಾಂಧವರಿಗೆ ಮತದಾನದಲ್ಲಿ ಭಾಗವಹಿಸುವ  ಅವಕಾಶ ಕಲ್ಪಿಸಲಾಗಿತ್ತು. 

ಬೆಳಗ್ಗೆ 8.00ಕ್ಕೆ ಮತದಾನ ಪ್ರಾರಂಭವಾಗಿ ಸಂಜೆ 7.೦೦ಕ್ಕೆ ಮುಕ್ತಾಯಗೊಂಡಿತು. ಶ್ರೀ ದೇವಳದ ನಿಯೋಜಿತ ಚುನಾವಣಾ ಅಧಿಕಾರಿಯಾಗಿದ್ದ ನ್ಯಾಯವಾದಿ ನಾಗೇಶ್ ಕುಮಾರ್ ಮತ್ತು ಸಹಾಯಕ ಚುನಾವಣಾ ಅಧಿಕಾರಿಯಾಗಿದ್ದ ಪ್ರೇಮಾನಂದ ಕಿಣಿ ಹಾಗೂ ಸ್ವಯಂಸೇವಕರು ಚುನಾವಣಾ ಪ್ರಕ್ರಿಯೆಯಲ್ಲಿ ಸಹಕರಿಸಿದರು.  ಶುಕ್ರವಾರ ಬೆಳಿಗ್ಗೆ ಮಾಜಿ ಮೊಕ್ತೇಸರರಾದ ಸಿ . ಎಲ್ ಶೆಣೈ , ಪ್ರಶಾಂತ್ ರಾವ್ , ರಾಮಚಂದ್ರ ಕಾಮತ್ ರವರು ತಮ್ಮ ಅಧಿಕಾರ ಹಾಗೂ ದೇವಳದ ಕೀಲಿಗಳನ್ನು ಶ್ರೀ ದೇವರ ಸಮ್ಮುಖದಲ್ಲಿ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಾಜಿ ಮೊಕ್ತೇಸರರಾದ ಎಂ . ಪದ್ಮನಾಭ ಪೈ  , ಕೊಚ್ಚಿಕಾರ್ ಜಯರಾಜ್ ಪೈ ಉಪಸ್ಥಿತರಿದ್ದರು . 

ಇತ್ತೀಚಿನ ಸುದ್ದಿ

ಜಾಹೀರಾತು