11:11 AM Friday18 - July 2025
ಬ್ರೇಕಿಂಗ್ ನ್ಯೂಸ್
ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:…

ಇತ್ತೀಚಿನ ಸುದ್ದಿ

ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮನೆ ನಿರ್ಮಾಣ: ಕೀಲಿ ಕೈ ಹಸ್ತಾಂತರಿಸಿದ ಶಾಸಕ ವೇದವ್ಯಾಸ ಕಾಮತ್

16/04/2022, 12:17

ಮಂಗಳೂರು(reporterkarnataka.com): ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಇಡ್ಯಾ ಪೂರ್ವ 6ನೇ ವಾರ್ಡಿನ ಅನುಸೂಯಾ ಅವರಿಗೆ ಮಂಗಳೂರು ರಥಬೀದಿಯ ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಿರ್ಮಿಸಲಾದ ಮನೆಯನ್ನು ಮಂಗಳೂರು ನಗರ ದಕ್ಷಿಣ ಶಾಸಕರೂ, ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷರೂ ಆದ ವೇದವ್ಯಾಸ ಕಾಮತ್ ಅವರು ಕೀಲಿ ಕೈ ನೀಡುವ ಮೂಲಕ ಸಾಂಕೇತಿಕವಾಗಿ ಹಸ್ತಾಂತರಿಸಿದರು. 

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಅವರು ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಎರಡು ದಶಕಗಳಿಂದ ಹಲವಾರು ಸೇವಾಕಾರ್ಯಗಳನ್ನು ಮಾಡುತ್ತಾ ಬರುತ್ತಿದೆ. ಭಾರತೀಯ ಜನತಾ ಪಾರ್ಟಿಯ ಹಿರಿಯ ಕಾರ್ಯಕರ್ತೆ ಅನುಸೂಯ ಅವರ ಮನೆ ವಾಸಯೋಗ್ಯ ಇಲ್ಲದೆ ಇರುವುದು ಗಮನಕ್ಕೆ ಬಂದಾಗ ಅದನ್ನು ದಾನಿಗಳ ಸಹಕಾರದಿಂದ ಸುಸಜ್ಜಿತವಾಗಿ ನಿರ್ಮಿಸಿಕೊಡುವ ಸಂಕಲ್ಪ ಮಾಡಲಾಯಿತು. ಅನುಸೂಯ ಹಾಗೂ ಅವರ ಮಗಳು ಬಹಳ ಸಂಕಷ್ಟಮಯ ಪರಿಸ್ಥಿತಿಯಲ್ಲಿ ವಾಸಿಸುತ್ತಿರುವುದನ್ನು ಅರಿತ ನಮ್ಮ ಟ್ರಸ್ಟ್ ಸಹೃದಯಿಗಳ ನೆರವಿನಿಂದ ಮನೆ ನಿರ್ಮಿಸಿಕೊಟ್ಟಿದೆ ಎಂದು ಹೇಳಿದರು. ನಮ್ಮ ಆತ್ಮೀಯರಾಗಿರುವ ಮುಂಬೈ ನಿವಾಸಿ ದೀಪಕ್ ಶೆಣೈ ಸಹಿತ ಅನೇಕ ಹಿತೈಷಿಗಳು ಮುಂದೆ ಬಂದು ವಿವಿಧ ರೀತಿಯ ಸಹಾಯಹಸ್ತವನ್ನು ಚಾಚಿದ್ದಾರೆ. ಅದರೊಂದಿಗೆ ಸ್ಥಳೀಯ ಕಾರ್ಪೋರೇಟರ್ ಸರಿತಾ ಶಶಿಧರ್ ಕೂಡ ಅಗತ್ಯ ನೆರವು ನೀಡಿದ್ದಾರೆ. ಈ ಮನೆಯಲ್ಲಿ ಅನುಸೂಯ ಮತ್ತು ಅವರ ಪುತ್ರಿ ಮುಂದಿನ ದಿನಗಳನ್ನು ಸುಖಕರವಾಗಿ ಕಳೆಯಲಿ ಎನ್ನುವುದು ನಮ್ಮ ಉದ್ದೇಶ ಎಂದು ಶಾಸಕರು ತಿಳಿಸಿದರು.


ಮನೆ ಹಸ್ತಾಂತರ ಕಾರ್ಯಕ್ರಮದಲ್ಲಿ ಕಾರ್ಪೋರೇಟರ್ ಸರಿತಾ ಶಶಿಧರ್, ಟ್ರಸ್ಟ್ ಪ್ರಮುಖರಾದ ಮಂಗಲ್ಪಾಡಿ ನರೇಶ್ ಶೆಣೈ, ಹನುಮಂತ ಕಾಮತ್, ನರೇಶ್ ಪ್ರಭು, ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಭರತ್ ರಾಜ್ ಕೃಷ್ಣಾಪುರ, ಟ್ರಸ್ಟಿನ ಹಿತೈಷಿಗಳಾದ ಸಿದ್ಧಾರ್ಥ ಪ್ರಭು, ಸಂತೋಷ್ ಶೆಣೈ, ಹೃಷಿಕೇಶ್, ಅಂಜನಾ ಕಾಮತ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು