1:50 AM Wednesday24 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಕೋಲಾರ: 2ನೇ ಹಂತದ ಕೆಸಿ ವ್ಯಾಲಿ ಕಾಮಗಾರಿ ಕೈಗೊಳ್ಳಲು ಸರಕಾರ 450 ಕೋಟಿ ಬಿಡುಗಡೆ 

16/04/2022, 13:16

ಶಬೀರ್ ಅಹಮ್ಮದ್  ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಸಾಮರಸ್ಯ ಇದ್ದರೆ ಮಾತ್ರ ನೆಮ್ಮದಿ ಸಾಧ್ಯವಾಗುತ್ತದೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಡಾ . ವೈ.ಎ.ನಾರಾಯಣಸ್ವಾಮಿ ಹೇಳಿದರು.

ಶ್ರೀನಿವಾಸಪುರ ತಾಲ್ಲೂಕಿನ ಯಚ್ಚನಹಳ್ಳಿ ಗ್ರಾಮದಲ್ಲಿ  ಏರ್ಪಡಿಸಿದ್ದ ಸೀತಾರಾಮ ಕಲ್ಯಾಣೋತ್ಸವ ಸಮಾರಂಭದಲ್ಲಿ ಗ್ರಾಮದ ಅಲ್ಪ ಸಂಖ್ಯಾತರಿಗೆ ವಿವಿಧ ಸೌಲಭ್ಯ ವಿತರಿಸಿ ಅವರು ಮಾತನಾಡಿದರು.

ಯಚ್ಚನಹಳ್ಳಿ ಗ್ರಾಮವನ್ನು ಮಾದರಿ ಗ್ರಾಮವನ್ನಾಗಿ ರೂಪಿಸಲಾಗಿದೆ. ಗ್ರಾಮಸ್ಥರಿಗೆ ಅಗತ್ಯವಾದ ಎಲ್ಲ ಮೂಲ ಸೌಕರ್ಯ ಕಲ್ಪಿಸಲಾಗಿದೆ ಎಂದು ಹೇಳಿದರು.

ಎರಡನೇ ಹಂತದಲ್ಲಿ ಕೆಸಿ ವ್ಯಾಲಿ ಕಾಮಗಾರಿ ಕೈಗೊಳ್ಳಲು ಸರ್ಕಾರ ರೂ .450 ಕೋಟಿ ಬಿಡುಗಡೆ ಮಾಡಿದೆ . ಮುದುವಾಡಿ ಕೆರೆಯಿಂದ ಯಚ್ಚನಹಳ್ಳಿ ಗ್ರಾಮಕ್ಕೆ ಕೆಸಿ ವ್ಯಾಲಿ ನೀರು ಹರಿಸಲಾಗುವುದು . ಈ ಕೆರೆಯಿಂದ ಉಳಿದ ಕೆರೆಗಳಿಗೆ ನೀರು ಹರಿಸಲಾಗುವುದು . ತಾಲ್ಲೂಕಿನ 100 ಫಲಾನುಭವಿಗಳಿಗೆ ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿಗಳನ್ನು ಮಂಜೂರು ಮಾಡಲಾಗಿದೆ . ಶ್ರಮ ಶಕ್ತಿ ಯೋಜನೆಯಡಿ ಗ್ರಾಮದ 90 ಅಲ್ಪ ಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ತಲಾ ರೂ .10 ಸಾವಿರ ವರ್ಗಾವಣೆ ಮಾಡಲಾಗಿದೆ ಎಂದು ಹೇಳಿದರು . ಬಿಜೆಪಿ ಸರ್ಕಾರ ಅಲ್ಪಸಖ್ಯಾತರ ಹಿತ ಕಾಯಲು ಬದ್ಧವಾಗಿದೆ . ಬಿಜೆಪಿ ಅಲ್ಪ ಸಂಖ್ಯಾತರ ವಿರೋಧಿ ಅಲ್ಲ . ಕಾಂಗ್ರೆಸ್ ಮತದಾಸೆಗಾಗಿ ಅವರನ್ನು ದಾರಿತಪ್ಪಿಸುತ್ತಿದೆ . ಬಿಜೆಪಿ ದೇಶ ವಿರೋಧಿಗಳನ್ನು ವಿರೋಧಿ ಸುತ್ತದೆಯೇ ಹೊರತು ಅಲ್ಪ ಸಂಖ್ಯಾತರನ್ನಲ್ಲ . ಕೇಂದ್ರ ಸರ್ಕಾರ ಮುಸ್ಲಿಂ ಮಹಿಳೆಯರ ಹಿತದೃಷ್ಟಿ ಯಿಂದ ತಲಾಖ್ ರದ್ದುಪಡಿಸಿದೆ . ಹಾಗಾಗಿ ಮುಸ್ಲಿಂ ಸಮುದಾಯ ಬಿಜೆಪಿಯೊಂದಿಗೆ ಕೈಜೋಡಿಸಬೇಕು . ರಾಷ್ಟ್ರದ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಹೇಳಿದರು . ಈ ಸಂದರ್ಭದಲ್ಲಿ ಗ್ರಾಮದ ಅಭಯಾಂಜನೇಯಸ್ವಾಮಿ ಆಲಯದ ಆವರಣದಲ್ಲಿ ಗ್ರಾಮಸ್ಥರ ವತಿಯಿಂದ ಏರ್ಪಡಿಸಲಾಗಿದ್ದ ಸೀತಾರಾಮ ಕಲ್ಯಾಣೋತ್ಸವ ನೆರವೇರಿಸಲಾಯಿತು . ಈ ಕಾರ್ಯಕ್ರಮದಲ್ಲಿ ಹಿಂದೂ ಹಾಗೂ ಮುಸ್ಲಿಂ ಸಮುದಾಯದ ಜನರು ಭಾಗವಹಿಸಿದ್ದರು . ಸಮಾರಂಭದಲ್ಲಿ ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯ ಮಂಜೂರಾತಿ ದಾಖಲೆಗಳನ್ನು ವಿತರಿಸಲಾಯಿತು . ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಡಾ . ಕೆ.ಎನ್.ವೇಣುಗೋಪಾಲ್ , ತಾಲ್ಲೂಕು ಘಟಕದ ಅಧ್ಯಕ್ಷ ಅಶೋಕ ರೆಡ್ಡಿ , ಮುಖಂಡ ರಾದ ಜಯರಾಮರೆಡ್ಡಿ , ರೆಡ್ಡಪ್ಪ , ನಾರಾಯಣ ಸ್ವಾಮಿ , ನಾರಾಯಣಗೌಡ , ಶಫಿವುಲ್ಲಾ , ಫೈರೋಜ್ , ರಮೇಶ್ , ನಾರಾಯಣಸ್ವಾಮಿ , ಕೃಷ್ಣಪ್ಪ ಇದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು